ಜಿಲ್ಲೆಗಳು

ಸಿದ್ದಾಪುರದಲ್ಲಿ ಕಾಡಾನೆ ಕಾರ್ಯಾಚರಣೆ ಯಶಸ್ವಿ: ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ಸಿದ್ದಾಪುರ: ವ್ಯಾಪಕ ಕೃಷಿ ಹಾನಿಗೆ ಕಾರಣವಾಗಿ ಗ್ರಾಮೀಣರ ಬದುಕನ್ನು ಹದಗೆಡಿಸಿದ್ದ ಪುಂಡಾನೆಯೊಂದನ್ನು ಕರಡಿಗೋಡಿನ ಭುವನಹಳ್ಳಿ ಕಾಫಿ ತೋಟದಲ್ಲಿ ಅರಣ್ಯ ಇಲಾಖಾ ತಂಡ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಕಳೆದ ಎರಡು ದಿನಗಳ ಕಾಲ ಅರಣ್ಯ ಇಲಾಖೆಯ ತಂಡ ನಡೆಸಿದ ವ್ಯಾಪಕ ಕಾರ್ಯಾಚರಣೆ ಇಂದು ಬೆಳಗ್ಗೆ 10.30ರ ಸುಮಾರಿಗೆ ಪುಂಡಾನೆಯ ಸೆರೆಯೊಂದಿಗೆ ಮುಕ್ತಾಯವಾಗಿದ್ದು, ಸೆರೆಯಾಗಿರುವ ಕಾಡಾನೆ ಅಂದಾಜು 22 ವರ್ಷದ್ದೆಂದು ಅಂದಾಜಿಸಲಾಗಿದೆ.

ತೀವ್ರ ಕಾರ್ಯಾಚರಣೆ- ಕರಡಿಗೋಡು ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ಇರುವುದನ್ನು ಅರಣ್ಯ ಇಲಾಖಾ ತಂಡ ಗುರುತಿಸಿ, ಎರಡು ದಿನಗಳ ಹಿಂದೆಯೇ ಅವುಗಳ ಜಾಡು ಹಿಡಿದಿತ್ತು. ಮಂಗಳವಾರ ಇನ್ನೇನು ಕಾಡಾನೆ ಸೆರೆಯಾಯಿತು ಎನ್ನುವಷ್ಟರಲ್ಲೆ ಕಾಡಾನೆಗಳ ಹಿಂಡಿನ ಕೆಲ ಆನೆಗಳು ಅರಣ್ಯ ಸಿಬ್ಬಂದಿಗಳ ಮೇಲೆ ತಿರುಗಿ ಬಿದ್ದು, ಯೋಜನೆ ವಿಫಲವಾಗಿತ್ತು.

ಬುಧವಾರ ಬೆಳಗ್ಗಿನಿಂದಲೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖಾ ತಂಡ ಕರಡಿಗೋಡಿನ ಭುವನಳ್ಳಿ ಕಾಫಿ ತೋಟದಲ್ಲಿ ಕಾಡಾನೆಗಳು ಇರುವುದನ್ನು ಪತ್ತೆ ಹಚ್ಚಿ, ತನ್ನ ಸೆರೆ ಹಿಡಿಯುವ ಕಾರ್ಯ ಯೋಜನೆಯ ಫಲಪ್ರದಗೊಳಿಸಲು ಎಚ್ಚರಿಕೆಯ ಹೆಜ್ಜೆಯನ್ನಿರಿಸಿತು. ಕಾಡಾನೆಗಳ ಹಿಂಡಿನಲ್ಲಿದ್ದ, ಕರಡಿಗೋಡು ವ್ಯಾಪ್ತಿಯಲ್ಲಿ ದಾಂಧಲೆ ನಡೆಸುತ್ತಿದ್ದ ಪುಂಡಾನೆಯನ್ನು ಗುರುತಿಸಿ ಅದಕ್ಕೆ ಶೂಟರ್ ಅಕ್ರಂ ಅವರು ಅರಿವಳಿಕೆಯನ್ನು ಹೊಂದಿದ ಗುಂಡನ್ನು ಹೊಡೆದಿದ್ದರು.

ಕೆಲ ನಿಮಿಷಗಳ ಬಳಿಕ ಅರಿವಳಿಕೆಯ ಪ್ರಭಾವಕ್ಕೆ ಪುಂಡಾನೆ ಸಿಲುಕಿದ್ದನ್ನು ಖಾತರಿ ಪಡಿಸಿಕೊಂಡ ಅರಣ್ಯ ಇಲಾಖಾ ತಂಡ, ಕಾರ್ಯಾಚರಣೆಗೆ ದುಬಾರೆ ಮತ್ತು ಮತ್ತಿಗೋಡಿನಿಂದ ಕರೆಸಿಕೊಳ್ಳಲಾಗಿದ್ದ ಪ್ರಶಾಂತ, ಸುಗ್ರೀವ, ಧನಂಜಯ, ಅಭಿಮನ್ಯು ಮತ್ತು ಭೀಮನ ಸಹಕಾರದಿಂದ ಪುಂಡಾನೆಯನ್ನು ಹಗ್ಗದಿಂದ ಬಂಧಿಸಿದ್ದಲ್ಲದೆ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಪುಂಡಾನೆಯನ್ನು ಅಲ್ಲೇ ಸಮೀಪದ ಚಿಕ್ಕನಲ್ಲಿ ತೋಟದವರೆಗೆ ಕರೆ ತಂದಿದ್ದರು.

ಲಾರಿಯನ್ನೇರಿದ ಪುಂಡಾನೆ- ಚಿಕ್ಕನಲ್ಲಿ ತೋಟದ ಹಾದಿಯಲ್ಲಿ ಪುಂಡಾನೆಯನ್ನು ಬಲವಾದ ಹಗ್ಗಗಳಿಂದ ಕಟ್ಟಿ, ಕ್ರೈನ್ ಸಹಕಾರದಿಂದ ಲಾರಿಯನ್ನೇರಿಸಿ, ದುಬಾರೆ ಸಾಕಾನೆ ಶಿಬಿರಕ್ಕೆ ಕರೆದೊಯ್ಯಲಾಯಿತು.

ಎರಡು ದಿನ ಬಳಿಕ ಅಮ್ಮತ್ತಿಯಲ್ಲಿ ಕಾರ್ಯಾಚರಣೆ- ಎಸಿಎಫ್ ನೆಹರು ಮಾಧ್ಯಮಗಳೊಂದಿಗೆ ಮಾತನಾಡಿ, ಸರ್ಕಾರದ ಅನುಮತಿಯಂತೆ ಒಂದು ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ. ಎರಡು ದಿನಗಳ ನಂತರ ಅಮ್ಮತ್ತಿ ಭಾಗದಲ್ಲಿರುವ ಮತ್ತೊಂದು ಪುಂಡಾನೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಲಾಗುತ್ತದೆಂದು ತಿಳಿಸಿದರು.

ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೂರ್ತಿಯರವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ತಾಲ್ಲೂಕು ಡಿ.ಸಿ.ಎಫ್. ಚಕ್ರಪಾಣಿ, ಎಸಿಎಫ್ ನೆಹರು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಕಳ್ಳಿರ ದೇವಯ್ಯ, ಉಪವಲಯ ಅರಣ್ಯಾಧಿಕಾರಿ ಸಂಜಿತ್ ಪೂವಯ್ಯ, ಕುಶಾಲನಗರ ವಲಯ ಎಸಿಎಫ್ ಗೋಪಾಲ್, ಆರ್‍ಎಫ್ ಶಿವರಾಂ, ಶೂಟರ್ ಅಕ್ರಂ, ವನ್ಯಜೀವಿ ವೈದ್ಯಾಧಿಕಾರಿ ಡಾ. ರಮೇಶ್ ಮತ್ತು ಡಾ. ಚಿಟ್ಟಿಯಪ್ಪ, ಮಡಿಕೇರಿ ಮತ್ತು ಸೋಮವಾರಪೇಟೆ ವಲಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಸುಮಾರು ಐವತ್ತಕ್ಕೂ ಹೆಚ್ಚಿನ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ನಿಟ್ಟುಸಿರು ಬಿಟ್ಟ ಗ್ರಾಮಸ್ಥರು- ಕಳೆದ ಹಲ ಸಮಯಗಳಿಂದ ಕರಡಿಗೋಡು ಸುತ್ತಮುತ್ತಲ ವ್ಯಾಪ್ತಿಯಲ್ಲಿ ಪುಂಡಾನೆಗಳ ಹಾವಳಿಯಿಂದ ವ್ಯಾಪಕ ಕೃಷಿ ಹಾನಿಯಾಗಿದ್ದು, ಬೆಳೆಗಾರರು ಮತ್ತು ಕೃಷಿಕರು ತೋಟಗಳಿಗೆ ತೆರಳಲಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಪುಂಡಾನೆಯ ಸೆರೆಯಿಂದ ಈ ವಿಭಾಗದ ಗ್ರಾಮಸ್ಥರು ಒಂದಷ್ಟು ನಿಟ್ಟುಸಿರು ಬಿಡುವಂತಾಗಿದೆ.

andolanait

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

7 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

10 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

11 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

11 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

11 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

11 hours ago