ಜಿಲ್ಲೆಗಳು

ಬೆಂಕಿ ಬೀಳದಂತೆ ಕಾಡು ಕಾಯಬೇಕಾದದ್ದು ಎಲ್ಲರ ಜವಾಬ್ದಾರಿ

ಗಿರೀಶ್ ಹುಣಸೂರು

ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆ ಗಳನ್ನು ವ್ಯಾಪಿಸಿರುವ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳು ಹಳೆ ಮೈಸೂರು ಭಾಗವನ್ನು ಸಂಪದ್ಭರಿತಗೊಳಿಸಿವೆ. ಆದರೆ, ಕಾಡಿಗಿಡುವ ಬೆಂಕಿಯಿಂದ ತೇಗ, ಬೀಟೆ, ಹೊನ್ನೆ, ಶ್ರೀಗಂಧ ಸೇರಿದಂತೆ ಕೋಟ್ಯಂತರ ರೂ.ಮೌಲ್ಯದ ಮರ ಮುಟ್ಟುಗಳು ಸುಟ್ಟು ಭಸ್ಮವಾಗು ವುದು ಮಾತ್ರವಲ್ಲ, ಬೆಲೆಯೇ ಕಟ್ಟಲಾಗದ ಸಾವಿರಾರು ಅಪ ರೂಪದ ಪ್ರಭೇದದ ಹಕ್ಕಿ-ಪಕ್ಷಿ, ಸಸ್ತನಿ ಸೇರಿದಂತೆ ಸೂಕ್ಷ್ಮಜೀವಿಗಳು ಸುಟ್ಟುಹೋಗುತ್ತವೆ ಎಂದು ವನ್ಯಜೀವಿ ಪ್ರಿಯರು ಆತಂಕ ವ್ಯಕ್ತಪಡಿಸುತ್ತಾರೆ.

ಭಾರತದಲ್ಲಿ ಉಂಟಾಗುವ ಕಾಡಿನ ಬೆಂಕಿಗಳು ಸಾಮಾನ್ಯವಾಗಿ ನೆಲಮಟ್ಟದಲ್ಲೇ ವ್ಯಾಪಿಸುತ್ತವೆ. ಆದರೆ, ಸಮಶೀತೋಷ್ಣ ವಲಯದ ಕಾಡುಗಳಲ್ಲಿ ಉಂಟಾಗುವ ಗಗನಚುಂಬಿ ಮರದ ತುದಿ ಹೊತ್ತಿ ಉರಿಯುವ ಮುಕುಟ ಬೆಂಕಿ ನಮ್ಮ ಕಾಡುಗಳಲ್ಲಿ ಕಂಡು ಬರುವುದು ಅಪರೂಪ. ಅರಣ್ಯ ಪ್ರದೇಶದ ಮರಗಳೆಲ್ಲ ಬೇಸಿಗೆ ಆರಂಭದಲ್ಲೇ ತರಗೆಲೆಗಳಂತೆ ಒಣಗಿ ನಿಂತಾಗ, ಗಾಳಿಯ ತೀವ್ರತೆ ಹೆಚ್ಚಿದಂತೆ ಕಾಡ್ಗಿಚ್ಚು ಯಾರ ಅಳತೆಗೂ ನಿಲುಕ ದಂತೆ ವ್ಯಾಪಿಸುತ್ತದೆ. ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯಗಳೂ ಇದರಿಂದ ಹೊರತಾಗಿಲ್ಲ. ಇದಕ್ಕೆ ತಾಜ ಉದಾಹರಣೆ ಇತ್ತೀಚಿನ ವರ್ಷಗಳಲ್ಲಿ ಬಂಡೀ ಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮತ್ತಿಗೋಡು ವಲಯದಲ್ಲಿ ಕಾಡ್ಗಿಚ್ಚಿನಿಂದ ಈ ಭಾಗದ ಅರಣ್ಯಕ್ಕೆ ಉಂಟಾದ ಗಾಯ ಇನ್ನೂ ಮಾಸಿಲ್ಲ.

ನೆಲಮಟ್ಟದ ಬೆಂಕಿ ಮರ-ಗಿಡಗಳನ್ನೆಲ್ಲ ಭಾಗಶಃ ಸುಟ್ಟು, ಅವು ಮತ್ತೆ ಚಿಗುರದಂತೆ ಮಾಡುವುದಲ್ಲದೆ, ಆ ಭಾಗದ ಕಾಡಿನಲ್ಲಿ ತರಗೆಲೆಗಳೇ ಇಲ್ಲದಂತೆ ಮಾಡಿಬಿಡು ತ್ತದೆ. ನಿಧಾನಗತಿಯಲ್ಲಿ ನೆಲಮಟ್ಟದ ಅರಣ್ಯವನ್ನು ಆಹುತಿ ತೆಗೆದುಕೊಳ್ಳುವ ಬೆಂಕಿಗೆ ಅಪರೂಪದ ಪ್ರಭೇದದ ಹಕ್ಕಿ- ಪಕ್ಷಿಗಳು, ಸಸ್ತನಿಗಳು, ಸರೀಸೃಪಗಳು, ಕ್ರಿಮಿಕೀಟಗಳು ಸೇರಿದಂತೆ ಅಸಂಖ್ಯಾತ ಸೂಕ್ಷ್ಮಜೀವಿಗಳು ಸುಟ್ಟು ಹೋಗು ವುದಲ್ಲದೆ, ಜತೆಗೆ ಸಸ್ಯಾಹಾರಿ ಪ್ರಾಣಿಗಳ ಮೇವನ್ನೂ ಸುಟ್ಟು ಮೇವಿಗೆ ಯೋಗ್ಯವಲ್ಲದ ಲಂಟಾನ-ಯುಪಟೋ ರಿಯಂ ನಂತಹ ಕಳೆಗಳು ಆವರಿಸಲು ದಾರಿ ಮಾಡಿ ಕೊಡುತ್ತದೆ ಕಾಡಿನ ಈ ಬೆಂಕಿ. ಲಂಟಾನಾ – ಯುಪಟೋ ರಿಯಂನಂತಹ ಕಳೆಗಳು ಕಾಡ್ಗಿಚ್ಚಿನಿಂದ ಉಂಟಾದ ಬೂದಿ ಯನ್ನೇ ಉಪಯೋಗಿಸಿಕೊಂಡು ಚೆನ್ನಾಗಿ ಬೆಳೆಯುವ ಗುಣ ಹೊಂದಿರುವುದರಿಂದ ಬಂಡೀಪುರ ಅರಣ್ಯದ ಬಹು ತೇಕ ಭಾಗಗಳಲ್ಲಿ ದಿಂಡಗ, ಬ್ಯಾಟೆ ಮುಂತಾದ ಸಸ್ಯಗಳೇ ಆಕ್ರಮಿ ಸಿವೆ. ಇದೂ ಕೂಡ ಕಾಡ್ಗಿಚ್ಚು ವ್ಯಾಪಿಸಲು ಕಾರಣವಾಗುತ್ತದೆ.

andolanait

Recent Posts

ಓದುಗರ ಪತ್ರ: ನಗರ ಸಾರಿಗೆ ಬಸ್‌ಗಳಿಂದ ಪರಿಸರ ಮಾಲಿನ್ಯ

ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…

2 hours ago

ಓದುಗರ ಪತ್ರ: ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತ: ಹೋರಾಟ ಅಗತ್ಯ

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…

2 hours ago

ಓದುಗರ ಪತ್ರ: ಕುವೆಂಪುನಗರ ಸಾರ್ವಜನಿಕ ಗ್ರಂಥಾಲಯ ಅಭಿವೃದ್ಧಿಪಡಿಸಿ

ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು-ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

2 hours ago

ಇಂದು ಫಲಪುಷ್ಪ ಪ್ರದರ್ಶನದ ಮಧುರ ವಸ್ತ್ರೋತ್ಸವ

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…

2 hours ago

ಜನವರಿ.24ರಿಂದ ಮಂಜಿನ ನಗರಿಯಲ್ಲಿ ಫಲಪುಷ್ಪ ಪ್ರದರ್ಶನ

ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…

2 hours ago