ಜಿಲ್ಲೆಗಳು

ಬೆಂಕಿ ಬೀಳದಂತೆ ಕಾಡು ಕಾಯಬೇಕಾದದ್ದು ಎಲ್ಲರ ಜವಾಬ್ದಾರಿ

ಗಿರೀಶ್ ಹುಣಸೂರು

ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆ ಗಳನ್ನು ವ್ಯಾಪಿಸಿರುವ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳು ಹಳೆ ಮೈಸೂರು ಭಾಗವನ್ನು ಸಂಪದ್ಭರಿತಗೊಳಿಸಿವೆ. ಆದರೆ, ಕಾಡಿಗಿಡುವ ಬೆಂಕಿಯಿಂದ ತೇಗ, ಬೀಟೆ, ಹೊನ್ನೆ, ಶ್ರೀಗಂಧ ಸೇರಿದಂತೆ ಕೋಟ್ಯಂತರ ರೂ.ಮೌಲ್ಯದ ಮರ ಮುಟ್ಟುಗಳು ಸುಟ್ಟು ಭಸ್ಮವಾಗು ವುದು ಮಾತ್ರವಲ್ಲ, ಬೆಲೆಯೇ ಕಟ್ಟಲಾಗದ ಸಾವಿರಾರು ಅಪ ರೂಪದ ಪ್ರಭೇದದ ಹಕ್ಕಿ-ಪಕ್ಷಿ, ಸಸ್ತನಿ ಸೇರಿದಂತೆ ಸೂಕ್ಷ್ಮಜೀವಿಗಳು ಸುಟ್ಟುಹೋಗುತ್ತವೆ ಎಂದು ವನ್ಯಜೀವಿ ಪ್ರಿಯರು ಆತಂಕ ವ್ಯಕ್ತಪಡಿಸುತ್ತಾರೆ.

ಭಾರತದಲ್ಲಿ ಉಂಟಾಗುವ ಕಾಡಿನ ಬೆಂಕಿಗಳು ಸಾಮಾನ್ಯವಾಗಿ ನೆಲಮಟ್ಟದಲ್ಲೇ ವ್ಯಾಪಿಸುತ್ತವೆ. ಆದರೆ, ಸಮಶೀತೋಷ್ಣ ವಲಯದ ಕಾಡುಗಳಲ್ಲಿ ಉಂಟಾಗುವ ಗಗನಚುಂಬಿ ಮರದ ತುದಿ ಹೊತ್ತಿ ಉರಿಯುವ ಮುಕುಟ ಬೆಂಕಿ ನಮ್ಮ ಕಾಡುಗಳಲ್ಲಿ ಕಂಡು ಬರುವುದು ಅಪರೂಪ. ಅರಣ್ಯ ಪ್ರದೇಶದ ಮರಗಳೆಲ್ಲ ಬೇಸಿಗೆ ಆರಂಭದಲ್ಲೇ ತರಗೆಲೆಗಳಂತೆ ಒಣಗಿ ನಿಂತಾಗ, ಗಾಳಿಯ ತೀವ್ರತೆ ಹೆಚ್ಚಿದಂತೆ ಕಾಡ್ಗಿಚ್ಚು ಯಾರ ಅಳತೆಗೂ ನಿಲುಕ ದಂತೆ ವ್ಯಾಪಿಸುತ್ತದೆ. ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯಗಳೂ ಇದರಿಂದ ಹೊರತಾಗಿಲ್ಲ. ಇದಕ್ಕೆ ತಾಜ ಉದಾಹರಣೆ ಇತ್ತೀಚಿನ ವರ್ಷಗಳಲ್ಲಿ ಬಂಡೀ ಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮತ್ತಿಗೋಡು ವಲಯದಲ್ಲಿ ಕಾಡ್ಗಿಚ್ಚಿನಿಂದ ಈ ಭಾಗದ ಅರಣ್ಯಕ್ಕೆ ಉಂಟಾದ ಗಾಯ ಇನ್ನೂ ಮಾಸಿಲ್ಲ.

ನೆಲಮಟ್ಟದ ಬೆಂಕಿ ಮರ-ಗಿಡಗಳನ್ನೆಲ್ಲ ಭಾಗಶಃ ಸುಟ್ಟು, ಅವು ಮತ್ತೆ ಚಿಗುರದಂತೆ ಮಾಡುವುದಲ್ಲದೆ, ಆ ಭಾಗದ ಕಾಡಿನಲ್ಲಿ ತರಗೆಲೆಗಳೇ ಇಲ್ಲದಂತೆ ಮಾಡಿಬಿಡು ತ್ತದೆ. ನಿಧಾನಗತಿಯಲ್ಲಿ ನೆಲಮಟ್ಟದ ಅರಣ್ಯವನ್ನು ಆಹುತಿ ತೆಗೆದುಕೊಳ್ಳುವ ಬೆಂಕಿಗೆ ಅಪರೂಪದ ಪ್ರಭೇದದ ಹಕ್ಕಿ- ಪಕ್ಷಿಗಳು, ಸಸ್ತನಿಗಳು, ಸರೀಸೃಪಗಳು, ಕ್ರಿಮಿಕೀಟಗಳು ಸೇರಿದಂತೆ ಅಸಂಖ್ಯಾತ ಸೂಕ್ಷ್ಮಜೀವಿಗಳು ಸುಟ್ಟು ಹೋಗು ವುದಲ್ಲದೆ, ಜತೆಗೆ ಸಸ್ಯಾಹಾರಿ ಪ್ರಾಣಿಗಳ ಮೇವನ್ನೂ ಸುಟ್ಟು ಮೇವಿಗೆ ಯೋಗ್ಯವಲ್ಲದ ಲಂಟಾನ-ಯುಪಟೋ ರಿಯಂ ನಂತಹ ಕಳೆಗಳು ಆವರಿಸಲು ದಾರಿ ಮಾಡಿ ಕೊಡುತ್ತದೆ ಕಾಡಿನ ಈ ಬೆಂಕಿ. ಲಂಟಾನಾ – ಯುಪಟೋ ರಿಯಂನಂತಹ ಕಳೆಗಳು ಕಾಡ್ಗಿಚ್ಚಿನಿಂದ ಉಂಟಾದ ಬೂದಿ ಯನ್ನೇ ಉಪಯೋಗಿಸಿಕೊಂಡು ಚೆನ್ನಾಗಿ ಬೆಳೆಯುವ ಗುಣ ಹೊಂದಿರುವುದರಿಂದ ಬಂಡೀಪುರ ಅರಣ್ಯದ ಬಹು ತೇಕ ಭಾಗಗಳಲ್ಲಿ ದಿಂಡಗ, ಬ್ಯಾಟೆ ಮುಂತಾದ ಸಸ್ಯಗಳೇ ಆಕ್ರಮಿ ಸಿವೆ. ಇದೂ ಕೂಡ ಕಾಡ್ಗಿಚ್ಚು ವ್ಯಾಪಿಸಲು ಕಾರಣವಾಗುತ್ತದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago