ಜಿಲ್ಲೆಗಳು

ಕಾಡ್ಗಿಚ್ಚಿಗೆ ಸಿಲುಕಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸಾವು

ಹಾಸನ: ಸಕಲೇಶಪುರ ತಾಲ್ಲೂಕಿನ ಪಶ್ಚಿಮಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಸುಂದರೇಶ್ ಎಂಬವರು ಮೃತಪಟ್ಟಿದ್ದಾರೆ. ಕಾಡ್ಗಿಚ್ಚು ನಂದಿಸಲು ಹೋಗಿದ್ದ ತಂಡದಲ್ಲಿ ಸುಂದರೇಶ್‌ ಅವರೂ ಇದ್ದರು. ಇವರಿಗೆ ಬೆಂಕಿ ಆವರಿಸಿ ಗಂಭೀರ ಗಾಯಗೊಂಡಿದ್ದರು.

ಗುರುವಾರ ಮಧ್ಯಾಹ್ನ ಕಾಡುಮನೆ ಎಸ್ಟೇಟ್ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು. ಕಾಡ್ಗಿಚ್ಚು ಆರಿಸಲು ಡಿಆರ್‌ಎಫ್‌ಓ ಮಂಜುನಾಥ ನೇತೃತ್ವದಲ್ಲಿ ಆರು ಜನ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದರು. ವೇಗವಾಗಿ ವ್ಯಾಪಿಸಿದ್ದ ಬೆಂಕಿ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಸುತ್ತುವರಿದಿತ್ತು.

ಬೆಂಕಿಗೆ ಸಿಲಿಕಿ ಡಿಆರ್‌ಎಫ್‌ಓ ಮಂಜುನಾಥ, ಫಾರೆಸ್ಟ್ ಗಾರ್ಡ್ ಸುಂದರೇಶ್, ವಾಚರ್‌ಗಳಾದ ತುಂಗೇಶ್ ಮತ್ತು ಮಹೇಶ್‌ ಅವರಿಗೆ ಗಾಯಗಳಾಗಿದ್ದವು. ಸುಂದರೇಶ್‌ ಹಾಗೂ ಮಂಜುನಾಥ ಬೆಂಕಿಯಲ್ಲಿ ಬಹುತೇಕ ಬೆಂದು ಹೋಗಿದ್ದರು. ರಸ್ತೆ ಸಂಪರ್ಕ ಇಲ್ಲದ ಸ್ಥಳದಿಂದ ಅವರನ್ನು ಅಡ್ಡೆಯಲ್ಲಿ ಹೊತ್ತು ತಂದು ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಹಾಗೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಹಾಸನದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಝೀರೊ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿತ್ತು.

ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಇಬ್ಬರಲ್ಲಿ ರಾತ್ರಿ ಸುಂದರೇಶ್ ಸಾವಿಗೀಡಾಗಿದ್ದಾರೆ. ಕಾಡು ರಕ್ಷಣೆಗಾಗಿ ತಮ್ಮ ಪ್ರಾಣ ಪಣಕ್ಕಿಟ್ಟು ಸಿಬ್ಬಂದಿ ಹೋರಾಟ ನಡೆಸಿದ್ದರು. ಶೇ.80 ರಷ್ಟು ಸುಟ್ಟ ಗಾಯಳಾಗಿದ್ದ ಸುಂದರೇಶ್ ಮೃತಪಟ್ಟಿದ್ದಾರೆ. ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಸುಂದರೇಶ್ ಅಂತ್ಯಕ್ರಿಯೆ ನೆರವೇರಲಿದೆ.

andolanait

Recent Posts

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

9 mins ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

16 mins ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

24 mins ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

37 mins ago

ವಿಶೇಷ ಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿಶೇಷ ಚೇತನರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಹಾಗೂ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಎಲ್ಲರೂ ಸಹಕರಿಸಬೇಕು ಎಂದು ಮಂಡ್ಯ…

56 mins ago

ಕರ್ನಾಟಕ ಡಿಜಿಟಲ್‌ ಪ್ರಪಂಚದ ಸೃಜನಶೀಲ ರಾಜಧಾನಿ ಎಂಬುದು ನಮ್ಮ ಕನಸು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿಯ ಉದ್ಘಾಟಿಸಿ ಮಾತನಾಡಿದರು. “ಎವೊಲ್ಯೂಶನ್ ರಿಲೋಡೆಡ್” ಎಂಬ ವಿಷಯವನ್ನೊಳಗೊಂಡ…

1 hour ago