ಹಾಸನ: ಸಕಲೇಶಪುರ ತಾಲ್ಲೂಕಿನ ಪಶ್ಚಿಮಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಸುಂದರೇಶ್ ಎಂಬವರು ಮೃತಪಟ್ಟಿದ್ದಾರೆ. ಕಾಡ್ಗಿಚ್ಚು ನಂದಿಸಲು ಹೋಗಿದ್ದ ತಂಡದಲ್ಲಿ ಸುಂದರೇಶ್ ಅವರೂ ಇದ್ದರು. ಇವರಿಗೆ ಬೆಂಕಿ ಆವರಿಸಿ ಗಂಭೀರ ಗಾಯಗೊಂಡಿದ್ದರು.
ಗುರುವಾರ ಮಧ್ಯಾಹ್ನ ಕಾಡುಮನೆ ಎಸ್ಟೇಟ್ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು. ಕಾಡ್ಗಿಚ್ಚು ಆರಿಸಲು ಡಿಆರ್ಎಫ್ಓ ಮಂಜುನಾಥ ನೇತೃತ್ವದಲ್ಲಿ ಆರು ಜನ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದರು. ವೇಗವಾಗಿ ವ್ಯಾಪಿಸಿದ್ದ ಬೆಂಕಿ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಸುತ್ತುವರಿದಿತ್ತು.
ಬೆಂಕಿಗೆ ಸಿಲಿಕಿ ಡಿಆರ್ಎಫ್ಓ ಮಂಜುನಾಥ, ಫಾರೆಸ್ಟ್ ಗಾರ್ಡ್ ಸುಂದರೇಶ್, ವಾಚರ್ಗಳಾದ ತುಂಗೇಶ್ ಮತ್ತು ಮಹೇಶ್ ಅವರಿಗೆ ಗಾಯಗಳಾಗಿದ್ದವು. ಸುಂದರೇಶ್ ಹಾಗೂ ಮಂಜುನಾಥ ಬೆಂಕಿಯಲ್ಲಿ ಬಹುತೇಕ ಬೆಂದು ಹೋಗಿದ್ದರು. ರಸ್ತೆ ಸಂಪರ್ಕ ಇಲ್ಲದ ಸ್ಥಳದಿಂದ ಅವರನ್ನು ಅಡ್ಡೆಯಲ್ಲಿ ಹೊತ್ತು ತಂದು ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಹಾಗೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಹಾಸನದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಝೀರೊ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿತ್ತು.
ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಇಬ್ಬರಲ್ಲಿ ರಾತ್ರಿ ಸುಂದರೇಶ್ ಸಾವಿಗೀಡಾಗಿದ್ದಾರೆ. ಕಾಡು ರಕ್ಷಣೆಗಾಗಿ ತಮ್ಮ ಪ್ರಾಣ ಪಣಕ್ಕಿಟ್ಟು ಸಿಬ್ಬಂದಿ ಹೋರಾಟ ನಡೆಸಿದ್ದರು. ಶೇ.80 ರಷ್ಟು ಸುಟ್ಟ ಗಾಯಳಾಗಿದ್ದ ಸುಂದರೇಶ್ ಮೃತಪಟ್ಟಿದ್ದಾರೆ. ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಸುಂದರೇಶ್ ಅಂತ್ಯಕ್ರಿಯೆ ನೆರವೇರಲಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…