ಜಿಲ್ಲೆಗಳು

ಅರಣ್ಯಾಧಿಕಾರಿ ಕಚೇರಿಯಲ್ಲಿ ಆದಿವಾಸಿ ವ್ಯಕ್ತಿ ಸಾವು : ವಿಚಾರಣೆ ವೇಳೆ ಹೊಡೆದು ಕೊಂದ ಅರೋಪ

ಮೈಸೂರು : ಹೆಚ್‌ ಡಿ ಕೋಟೆಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆದಿವಾಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಜೇನುಕುರುಬ ಸಮುದಾಯಕ್ಕೆ ಸೇರಿದ ಕರಿಯಪ್ಪ ಎಂಬ ವ್ಯಕ್ತಿಯೇ ಸಾವಿಗೀಡಾದವರು.ಇವರು ಜಿಂಕೆ ಮಾಂಸವನ್ನು ಮಾರಾಟ ಮಾಡಿದರೆಂದ ಆರೋಪದ ಮೇಲೆ ಬಂಧಿಸಲಾಗಿತ್ತು. ಆದರೆ ಈತ ಬಂಧನಕ್ಕೊಳಗಾಗಿದ್ದ ಸಂದರ್ಭದಲ್ಲೇ ಸಾವಿಗೀಡಾಗಿದ್ದರಿಂದ ಸಾವಿನ ಕುರಿತು ಕುಟುಂಬಸ್ಥರು ಅನುಮಾನವನ್ನು ಹೊರಹಾಕಿದ್ದಾರೆ.

ಹೊಸಳ್ಳಿ ಹಾಡಿಯ ನಿವಾಸಿಯಾಗಿರುವ ಕರಿಯಪ್ಪ ಅವರನ್ನು ಕಳೆದ ಮೂರು ದಿನಗಳ ಹಿಂದ  ಜಿಂಕೆ ಮಾಂಸ ಮಾರಾಟ ಮಾಡಿದರೆಂದ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್‌ ಡಿ ಕೋಟೆ ತಾಲ್ಲೂಕಿನ ಎನ್‌ ಬೇಗೂರು ವಲಯ ಅರಣ್ಯಾಧಿಕಾರಿಗಳ ಕಚೇರಿಗೆ ಕರೆತಂದು ವಿಚಾರಣೆ ನಡೆಸಿ ಬಂಧಿಸಲಾಗಿತ್ತು. ಮಂಗಳವಾರ ತಡ ರಾತ್ರಿ ಕರಿಯಪ್ಪ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ ಕೂಡಲೇ ಅವರನ್ನು ಅರಣ್ಯಾಧಿಕಾರಿಗಳು ಮೈಸೂರಿನ ಕೆ ಆರ್‌ ಆಸ್ಪತ್ರೆಗೆ ದಾಖಲು ಮಾಡಿದ್ದರು. ಈ ವೇಳೆಗ ಕರಿಯಪ್ಪ ನಿಧನರಾಗಿದ್ದಾರೆ. ಈ ಸಂಬಂಧ ಪೊಲೀಸಿನವರು ಆತನನ್ನು ವಿಚಾರಣೆಯ ನೆಪದಲ್ಲಿ ಹೊಡೆದು ಕೊಂದಿದ್ದಾರೆಂದು ಆತನ ತಾಯಿ ಮತ್ತು ಕುಟುಂಬದವರು ಆರೋಪಿಸಿದ್ದಾರೆ.

ಕರಿಯಪ್ಪ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ. ಕರಿಯಪ್ಪ ಅವರ ತಲೆಗೆ ಏಟು ಬಿದ್ದಿದ್ದು ಇದರಿಂದಾಗಿಯೇ ಅವರು ಸಾಪನ್ನಪ್ಪಿದ್ದಾರೆ ಇದಕ್ಕೆ ಅರಣ್ಯಾಧಿಕಾರಿಗಳೇ ಕಾರಣವೆಂದು ಆರೋಪ ಮಾಡಿರುವ ಆತನ ಕುಟುಂಬದವರು ಶವವನ್ನು ವಲಯ ಅರಣ್ಯಾಧಿಕಾರಿ ಕಲಚೇರಿಯ ಮುಂದಿಟ್ಟು ಪ್ರತಿಭಟನೆಯನ್ನು ನಡೆಸಲು ಮುಂದಾಗಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago