ಜಿಲ್ಲೆಗಳು

ಅರಣ್ಯಾಧಿಕಾರಿ ಕಚೇರಿಯಲ್ಲಿ ಆದಿವಾಸಿ ವ್ಯಕ್ತಿ ಸಾವು : ವಿಚಾರಣೆ ವೇಳೆ ಹೊಡೆದು ಕೊಂದ ಅರೋಪ

ಮೈಸೂರು : ಹೆಚ್‌ ಡಿ ಕೋಟೆಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆದಿವಾಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಜೇನುಕುರುಬ ಸಮುದಾಯಕ್ಕೆ ಸೇರಿದ ಕರಿಯಪ್ಪ ಎಂಬ ವ್ಯಕ್ತಿಯೇ ಸಾವಿಗೀಡಾದವರು.ಇವರು ಜಿಂಕೆ ಮಾಂಸವನ್ನು ಮಾರಾಟ ಮಾಡಿದರೆಂದ ಆರೋಪದ ಮೇಲೆ ಬಂಧಿಸಲಾಗಿತ್ತು. ಆದರೆ ಈತ ಬಂಧನಕ್ಕೊಳಗಾಗಿದ್ದ ಸಂದರ್ಭದಲ್ಲೇ ಸಾವಿಗೀಡಾಗಿದ್ದರಿಂದ ಸಾವಿನ ಕುರಿತು ಕುಟುಂಬಸ್ಥರು ಅನುಮಾನವನ್ನು ಹೊರಹಾಕಿದ್ದಾರೆ.

ಹೊಸಳ್ಳಿ ಹಾಡಿಯ ನಿವಾಸಿಯಾಗಿರುವ ಕರಿಯಪ್ಪ ಅವರನ್ನು ಕಳೆದ ಮೂರು ದಿನಗಳ ಹಿಂದ  ಜಿಂಕೆ ಮಾಂಸ ಮಾರಾಟ ಮಾಡಿದರೆಂದ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್‌ ಡಿ ಕೋಟೆ ತಾಲ್ಲೂಕಿನ ಎನ್‌ ಬೇಗೂರು ವಲಯ ಅರಣ್ಯಾಧಿಕಾರಿಗಳ ಕಚೇರಿಗೆ ಕರೆತಂದು ವಿಚಾರಣೆ ನಡೆಸಿ ಬಂಧಿಸಲಾಗಿತ್ತು. ಮಂಗಳವಾರ ತಡ ರಾತ್ರಿ ಕರಿಯಪ್ಪ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ ಕೂಡಲೇ ಅವರನ್ನು ಅರಣ್ಯಾಧಿಕಾರಿಗಳು ಮೈಸೂರಿನ ಕೆ ಆರ್‌ ಆಸ್ಪತ್ರೆಗೆ ದಾಖಲು ಮಾಡಿದ್ದರು. ಈ ವೇಳೆಗ ಕರಿಯಪ್ಪ ನಿಧನರಾಗಿದ್ದಾರೆ. ಈ ಸಂಬಂಧ ಪೊಲೀಸಿನವರು ಆತನನ್ನು ವಿಚಾರಣೆಯ ನೆಪದಲ್ಲಿ ಹೊಡೆದು ಕೊಂದಿದ್ದಾರೆಂದು ಆತನ ತಾಯಿ ಮತ್ತು ಕುಟುಂಬದವರು ಆರೋಪಿಸಿದ್ದಾರೆ.

ಕರಿಯಪ್ಪ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ. ಕರಿಯಪ್ಪ ಅವರ ತಲೆಗೆ ಏಟು ಬಿದ್ದಿದ್ದು ಇದರಿಂದಾಗಿಯೇ ಅವರು ಸಾಪನ್ನಪ್ಪಿದ್ದಾರೆ ಇದಕ್ಕೆ ಅರಣ್ಯಾಧಿಕಾರಿಗಳೇ ಕಾರಣವೆಂದು ಆರೋಪ ಮಾಡಿರುವ ಆತನ ಕುಟುಂಬದವರು ಶವವನ್ನು ವಲಯ ಅರಣ್ಯಾಧಿಕಾರಿ ಕಲಚೇರಿಯ ಮುಂದಿಟ್ಟು ಪ್ರತಿಭಟನೆಯನ್ನು ನಡೆಸಲು ಮುಂದಾಗಿದ್ದಾರೆ.

andolanait

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

4 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

18 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

18 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

18 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

18 hours ago