ಮೈಸೂರು : ಹೆಚ್ ಡಿ ಕೋಟೆಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆದಿವಾಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಜೇನುಕುರುಬ ಸಮುದಾಯಕ್ಕೆ ಸೇರಿದ ಕರಿಯಪ್ಪ ಎಂಬ ವ್ಯಕ್ತಿಯೇ ಸಾವಿಗೀಡಾದವರು.ಇವರು ಜಿಂಕೆ ಮಾಂಸವನ್ನು ಮಾರಾಟ ಮಾಡಿದರೆಂದ ಆರೋಪದ ಮೇಲೆ ಬಂಧಿಸಲಾಗಿತ್ತು. ಆದರೆ ಈತ ಬಂಧನಕ್ಕೊಳಗಾಗಿದ್ದ ಸಂದರ್ಭದಲ್ಲೇ ಸಾವಿಗೀಡಾಗಿದ್ದರಿಂದ ಸಾವಿನ ಕುರಿತು ಕುಟುಂಬಸ್ಥರು ಅನುಮಾನವನ್ನು ಹೊರಹಾಕಿದ್ದಾರೆ.
ಹೊಸಳ್ಳಿ ಹಾಡಿಯ ನಿವಾಸಿಯಾಗಿರುವ ಕರಿಯಪ್ಪ ಅವರನ್ನು ಕಳೆದ ಮೂರು ದಿನಗಳ ಹಿಂದ ಜಿಂಕೆ ಮಾಂಸ ಮಾರಾಟ ಮಾಡಿದರೆಂದ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್ ಡಿ ಕೋಟೆ ತಾಲ್ಲೂಕಿನ ಎನ್ ಬೇಗೂರು ವಲಯ ಅರಣ್ಯಾಧಿಕಾರಿಗಳ ಕಚೇರಿಗೆ ಕರೆತಂದು ವಿಚಾರಣೆ ನಡೆಸಿ ಬಂಧಿಸಲಾಗಿತ್ತು. ಮಂಗಳವಾರ ತಡ ರಾತ್ರಿ ಕರಿಯಪ್ಪ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ ಕೂಡಲೇ ಅವರನ್ನು ಅರಣ್ಯಾಧಿಕಾರಿಗಳು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಈ ವೇಳೆಗ ಕರಿಯಪ್ಪ ನಿಧನರಾಗಿದ್ದಾರೆ. ಈ ಸಂಬಂಧ ಪೊಲೀಸಿನವರು ಆತನನ್ನು ವಿಚಾರಣೆಯ ನೆಪದಲ್ಲಿ ಹೊಡೆದು ಕೊಂದಿದ್ದಾರೆಂದು ಆತನ ತಾಯಿ ಮತ್ತು ಕುಟುಂಬದವರು ಆರೋಪಿಸಿದ್ದಾರೆ.
ಕರಿಯಪ್ಪ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ. ಕರಿಯಪ್ಪ ಅವರ ತಲೆಗೆ ಏಟು ಬಿದ್ದಿದ್ದು ಇದರಿಂದಾಗಿಯೇ ಅವರು ಸಾಪನ್ನಪ್ಪಿದ್ದಾರೆ ಇದಕ್ಕೆ ಅರಣ್ಯಾಧಿಕಾರಿಗಳೇ ಕಾರಣವೆಂದು ಆರೋಪ ಮಾಡಿರುವ ಆತನ ಕುಟುಂಬದವರು ಶವವನ್ನು ವಲಯ ಅರಣ್ಯಾಧಿಕಾರಿ ಕಲಚೇರಿಯ ಮುಂದಿಟ್ಟು ಪ್ರತಿಭಟನೆಯನ್ನು ನಡೆಸಲು ಮುಂದಾಗಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…