ಜಿಲ್ಲೆಗಳು

ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ: ಆರೋಪ

ಪಾಂಡವಪುರ: ಪಟ್ಟಣದ ವಲಯ ಅರಣ್ಯಾಧಿಕಾರಿಗಳ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ನೌಕರರ ಕೂಲಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಇಲಾಖೆಯ ದಿನಗೂಲಿ ನೌಕರರು ಅರಣ್ಯ ಇಲಾಖೆ ಎದುರು ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

ಅರಣ್ಯ ಇಲಾಖೆಯ ದಿನಗೂಲಿ ನೌಕರರ ಸಂಘದ ರಾಜ್ಯಾಧ್ಯಕ್ಷ ಎ.ಎಂ.ನಾಗರಾಜು ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳ ಕಚೇರಿಯ ಎದುರು ಧರಣಿ ಆರಂಭಿಸಿದ ನೌಕರರು, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಪುಟ್ಟಸ್ವಾಮಿ ಎಂಬುವರು ವಲಯ ಅರಣ್ಯಾಧಿಕಾರಿಯಾಗಿ ಬಂದ ಬಳಿಕ ಇಲಾಖೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಸುತ್ತಿದ್ದಾರೆ. ದಿನಗೂಲಿ, ಹೊರಗುತ್ತಿಗೆ ನೌಕರರಿಗೆ ಸರ್ಕಾರ ನಿಗದಿ ಮಾಡಿರುವ ದರಪಟ್ಟಿಯoತೆ ಸಂಬಳ ನೀಡದೆ ತಾರತಮ್ಯ ಮಾಡುತ್ತಿದ್ದಾರೆ. ಸರ್ಕಾರ ಎಲ್ಲ ನೌಕರರಿಗೂ ಒಂದೇ ದರ ನಿಗದಿ ಮಾಡಿ ಸಂಬಳ ನೀಡಬೇಕು ಎಂದು ಸೂಚಿಸಿದ್ದರೂ ನೌಕರರಿಗೆ ಒಂದೊಂದು ರೀತಿಯಲ್ಲಿ ಸಂಬಳ ನೀಡುತ್ತಿದ್ದಾರೆ ಎಂದು ದೂರಿದರು.

ವಲಯಾಧಿಕಾರಿ ಸರ್ಕಾರ ನಿಗದಿ ಮಾಡಿರುವ ಅನುದಾನ ಪ್ರಕಾರ ಇಲಾಖೆಯ ದರಪಟ್ಟಿ ನೀಡಬೇಕು. ನೌಕರರ ಬಾಕಿ ಸಂಬಳ ತಕ್ಷಣವೇ ಜಾರಿಗೊಳಿಸಬೇಕು. ತಪ್ಪಿದರೆ ಅನಿರ್ಧಿಷ್ಟ ಅವಧಿ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧ್ಯಕ್ಷ ತೊಳಿಸಿಕುಮಾರ್, ನೌಕರರಾದ ರಾಘು, ಮಂಜು, ಮಹೇಶ್, ಪ್ರಕಾಶ್, ಸ್ವಾಮೀಗೌಡ, ಚಂದ್ರಹಾಸ, ನಾಗರಾಜು, ಕುಮಾರ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

2 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

13 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

13 hours ago