ಜಿಲ್ಲೆಗಳು

ಅರಣ್ಯ ರಕ್ಷಣೆಗೆ ಸಾರ್ವಜನಿಕರು ಸಹಕಾರ ನೀಡಲಿ : ನ್ಯಾ. ಬಿ.ಎಸ್.ಭಾರತಿ ಸಲಹೆ

ಚಾಮರಾಜನಗರ: ಅರಣ್ಯ ಸಂರಕ್ಷಣೆಗಾಗಿ ಕಷ್ಟ ಪಡುವ ಅರಣ್ಯ ಇಲಾಖೆಯ ಸಿಬ್ಬಂದಿ ಜೊತೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಸಲಹೆ ನೀಡಿದರು.

ನಗರದ ಅರಣ್ಯ ಸಸ್ಯಕ್ಷೇತ್ರದಲ್ಲಿ ಅರಣ್ಯ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಸಮಾರಂಭದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವಿರಿಸಿದ ನಂತರ ಮಾತನಾಡಿದರು.
ವನ್ಯಸಂಪತ್ತು ಉಳಿಸಲು ಕೆಲವು ಅರಣ್ಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನು ಕೆಲವರು ಪ್ರಾಣಿಗಳಿಂದ ದಾಳಿಗೆ ಒಳಗಾಗಿದ್ದಾರೆ ಅಲ್ಲದೆ ಗಾಯಗೊಂಡಿರುವ ಬಗ್ಗೆ ತಿಳಿದುಬಂದಿದೆ. ಕಾಡುಗಳ್ಳ ವೀರಪ್ಪನ್‌ನಿಂದ ಡಿಸಿಎಫ್ ಆಗಿದ್ದ ಶ್ರೀನಿವಾಸ್, ಡಿವೈಎಸ್ಪಿ ಹರೀಶಕುಮಾರ್ ಹತ್ಯೆಯಾಗಿದ್ದಾರೆ. ರಾಮಾಪುರ ಪೊಲೀಸ್ ಠಾಣೆ ಮೇಲೆಯೂ ದಾಳಿ ಮಾಡಿದ್ದ ಎಂಬುದನ್ನು ಅರಣ್ಯಾಧಿಕಾರಿಗಳು ನನ್ನ ಗಮನಕ್ಕೆ ತಂದಿದ್ಧಾರೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದ ಡಿಎಫ್‌ಒ ಡಾ.ಸಂತೋಷಕುಮಾರ್ ಅವರು, ಕಾಡುಗಳ್ಳ ವೀರಪ್ಪನ್‌ನಿಂದ ಡಿಸಿಎಫ್ ಶ್ರೀನಿವಾಸ್ ನ.೧೧ ರಂದು ಹತ್ಯೆಯಾದರು. ಆ ದಿನವನ್ನು ಕರ್ನಾಟಕ ಸರ್ಕಾರ ಅರಣ್ಯ ಹುತಾತ್ಮರ ದಿನವಾಗಿ ಆಚರಿಸುತ್ತಿತ್ತು. ರಾಜಸ್ತಾನದಲ್ಲಿ ರಾಜನೊಬ್ಬ ಅರಣ್ಯ ರಕ್ಷಣೆಗೆ ಮುಂದಾಗಿದ್ದ ಬಿಷ್ಣೊಯಿ ಸಮುದಾಯವನ್ನು ಸೆ.೧೧ರಂದು ಸಾಮೂಹಿಕವಾಗಿ ಹತ್ಯೆ ಮಾಡಿಸಿದ್ದ. ಆ ದಿನವನ್ನು ಕೇಂದ್ರ ಸರ್ಕಾರ ಅರಣ್ಯ ಹುತಾತ್ಮರ ದಿನವಾಗಿ ಆಚರಿಸುತ್ತಿದೆ. ಅಂದಿನಿAದ ದೇಶಾದ್ಯಂತ ಸೆ.೧೧ ರಂದು ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ವೀರಪ್ಪನ್‌ನಿಂದ ಡಿಸಿಎಫ್ ಶ್ರೀನಿವಾಸ್ ೧೯೯೧ರ ನ.೧೦ ರಂದು ಹತ್ಯೆಯಾದರು. ಅವರ ಕಾರ್ಯದಕ್ಷತೆಯನ್ನು ಮೆಚ್ಚಿ ಕೀರ್ತಿಚಕ್ರ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಳೆದ ೫೪ ವರ್ಷಗಳಲ್ಲಿ ಅರಣ್ಯ ಸಂರಕ್ಷಣೆಗಾಗಿ ಹೋರಾಡುವಾಗ ಮೃತರಾದ ಅರಣ್ಯ ಇಲಾಖೆಯ ಸಿಬ್ಬಂದಿ, ನೌಕರರ ಸೇವೆ ಸ್ಮರಿಸಿ ಶ್ರದ್ದಾಂಜಲಿ ಸಲ್ಲಿಸಲು ಈ ಹುತಾತ್ಮರ ದಿನ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯ ಅರಣ್ಯಗಳಲ್ಲಿ ಸೇವೆ ಸಲ್ಲಿಸುವಾಗ ಮೃತರಾದ ಮಾದನಾಯಕ, ಜೋಗೆಗೌಡ, ಅಬ್ದುಲ್ ಅಹಮ್ಮದ್, ಅಹಮ್ಮದ್ ಖಾನ್, ಹುಚ್ಚಶೆಟ್ಟಿ, ಜಿ.ಕೆ.ಅಣ್ಣಯ್ಯ, ಮುರುಗಪ್ಪ, ಪಿ.ಶ್ರೀನಿವಾಸ್ ಸೇರಿದಂತೆ ರಾಜ್ಯದ ೫೪ ನೌಕರರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಾಮಾಜಿಕ ವಲಯ ಅರಣ್ಯದ ಡಿಸಿಎಫ್ ಡಿ.ವೈ.ರಾಜು, ಎಸಿಎಫ್‌ಗಳಾದ ಕೆ.ಸುರೇಶ್, ಮಹದೇವಯ್ಯ, ಸಭ್ಯಶ್ರೀ ಇತರರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವಿರಿಸಿ ಗೌರವ ಸಲ್ಲಿಸಿದರು. ಅರಣ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago