ಜಿಲ್ಲೆಗಳು

ಅರಣ್ಯ ರಕ್ಷಣೆಗೆ ಸಾರ್ವಜನಿಕರು ಸಹಕಾರ ನೀಡಲಿ : ನ್ಯಾ. ಬಿ.ಎಸ್.ಭಾರತಿ ಸಲಹೆ

ಚಾಮರಾಜನಗರ: ಅರಣ್ಯ ಸಂರಕ್ಷಣೆಗಾಗಿ ಕಷ್ಟ ಪಡುವ ಅರಣ್ಯ ಇಲಾಖೆಯ ಸಿಬ್ಬಂದಿ ಜೊತೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಸಲಹೆ ನೀಡಿದರು.

ನಗರದ ಅರಣ್ಯ ಸಸ್ಯಕ್ಷೇತ್ರದಲ್ಲಿ ಅರಣ್ಯ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಸಮಾರಂಭದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವಿರಿಸಿದ ನಂತರ ಮಾತನಾಡಿದರು.
ವನ್ಯಸಂಪತ್ತು ಉಳಿಸಲು ಕೆಲವು ಅರಣ್ಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನು ಕೆಲವರು ಪ್ರಾಣಿಗಳಿಂದ ದಾಳಿಗೆ ಒಳಗಾಗಿದ್ದಾರೆ ಅಲ್ಲದೆ ಗಾಯಗೊಂಡಿರುವ ಬಗ್ಗೆ ತಿಳಿದುಬಂದಿದೆ. ಕಾಡುಗಳ್ಳ ವೀರಪ್ಪನ್‌ನಿಂದ ಡಿಸಿಎಫ್ ಆಗಿದ್ದ ಶ್ರೀನಿವಾಸ್, ಡಿವೈಎಸ್ಪಿ ಹರೀಶಕುಮಾರ್ ಹತ್ಯೆಯಾಗಿದ್ದಾರೆ. ರಾಮಾಪುರ ಪೊಲೀಸ್ ಠಾಣೆ ಮೇಲೆಯೂ ದಾಳಿ ಮಾಡಿದ್ದ ಎಂಬುದನ್ನು ಅರಣ್ಯಾಧಿಕಾರಿಗಳು ನನ್ನ ಗಮನಕ್ಕೆ ತಂದಿದ್ಧಾರೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದ ಡಿಎಫ್‌ಒ ಡಾ.ಸಂತೋಷಕುಮಾರ್ ಅವರು, ಕಾಡುಗಳ್ಳ ವೀರಪ್ಪನ್‌ನಿಂದ ಡಿಸಿಎಫ್ ಶ್ರೀನಿವಾಸ್ ನ.೧೧ ರಂದು ಹತ್ಯೆಯಾದರು. ಆ ದಿನವನ್ನು ಕರ್ನಾಟಕ ಸರ್ಕಾರ ಅರಣ್ಯ ಹುತಾತ್ಮರ ದಿನವಾಗಿ ಆಚರಿಸುತ್ತಿತ್ತು. ರಾಜಸ್ತಾನದಲ್ಲಿ ರಾಜನೊಬ್ಬ ಅರಣ್ಯ ರಕ್ಷಣೆಗೆ ಮುಂದಾಗಿದ್ದ ಬಿಷ್ಣೊಯಿ ಸಮುದಾಯವನ್ನು ಸೆ.೧೧ರಂದು ಸಾಮೂಹಿಕವಾಗಿ ಹತ್ಯೆ ಮಾಡಿಸಿದ್ದ. ಆ ದಿನವನ್ನು ಕೇಂದ್ರ ಸರ್ಕಾರ ಅರಣ್ಯ ಹುತಾತ್ಮರ ದಿನವಾಗಿ ಆಚರಿಸುತ್ತಿದೆ. ಅಂದಿನಿAದ ದೇಶಾದ್ಯಂತ ಸೆ.೧೧ ರಂದು ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ವೀರಪ್ಪನ್‌ನಿಂದ ಡಿಸಿಎಫ್ ಶ್ರೀನಿವಾಸ್ ೧೯೯೧ರ ನ.೧೦ ರಂದು ಹತ್ಯೆಯಾದರು. ಅವರ ಕಾರ್ಯದಕ್ಷತೆಯನ್ನು ಮೆಚ್ಚಿ ಕೀರ್ತಿಚಕ್ರ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಳೆದ ೫೪ ವರ್ಷಗಳಲ್ಲಿ ಅರಣ್ಯ ಸಂರಕ್ಷಣೆಗಾಗಿ ಹೋರಾಡುವಾಗ ಮೃತರಾದ ಅರಣ್ಯ ಇಲಾಖೆಯ ಸಿಬ್ಬಂದಿ, ನೌಕರರ ಸೇವೆ ಸ್ಮರಿಸಿ ಶ್ರದ್ದಾಂಜಲಿ ಸಲ್ಲಿಸಲು ಈ ಹುತಾತ್ಮರ ದಿನ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯ ಅರಣ್ಯಗಳಲ್ಲಿ ಸೇವೆ ಸಲ್ಲಿಸುವಾಗ ಮೃತರಾದ ಮಾದನಾಯಕ, ಜೋಗೆಗೌಡ, ಅಬ್ದುಲ್ ಅಹಮ್ಮದ್, ಅಹಮ್ಮದ್ ಖಾನ್, ಹುಚ್ಚಶೆಟ್ಟಿ, ಜಿ.ಕೆ.ಅಣ್ಣಯ್ಯ, ಮುರುಗಪ್ಪ, ಪಿ.ಶ್ರೀನಿವಾಸ್ ಸೇರಿದಂತೆ ರಾಜ್ಯದ ೫೪ ನೌಕರರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಾಮಾಜಿಕ ವಲಯ ಅರಣ್ಯದ ಡಿಸಿಎಫ್ ಡಿ.ವೈ.ರಾಜು, ಎಸಿಎಫ್‌ಗಳಾದ ಕೆ.ಸುರೇಶ್, ಮಹದೇವಯ್ಯ, ಸಭ್ಯಶ್ರೀ ಇತರರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವಿರಿಸಿ ಗೌರವ ಸಲ್ಲಿಸಿದರು. ಅರಣ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

andolanait

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

5 hours ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

6 hours ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

6 hours ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

6 hours ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

6 hours ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

6 hours ago