ಜಿಲ್ಲೆಗಳು

ಅರಣ್ಯ ರಕ್ಷಣೆಗೆ ಸಾರ್ವಜನಿಕರು ಸಹಕಾರ ನೀಡಲಿ : ನ್ಯಾ. ಬಿ.ಎಸ್.ಭಾರತಿ ಸಲಹೆ

ಚಾಮರಾಜನಗರ: ಅರಣ್ಯ ಸಂರಕ್ಷಣೆಗಾಗಿ ಕಷ್ಟ ಪಡುವ ಅರಣ್ಯ ಇಲಾಖೆಯ ಸಿಬ್ಬಂದಿ ಜೊತೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಸಲಹೆ ನೀಡಿದರು.

ನಗರದ ಅರಣ್ಯ ಸಸ್ಯಕ್ಷೇತ್ರದಲ್ಲಿ ಅರಣ್ಯ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಸಮಾರಂಭದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವಿರಿಸಿದ ನಂತರ ಮಾತನಾಡಿದರು.
ವನ್ಯಸಂಪತ್ತು ಉಳಿಸಲು ಕೆಲವು ಅರಣ್ಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನು ಕೆಲವರು ಪ್ರಾಣಿಗಳಿಂದ ದಾಳಿಗೆ ಒಳಗಾಗಿದ್ದಾರೆ ಅಲ್ಲದೆ ಗಾಯಗೊಂಡಿರುವ ಬಗ್ಗೆ ತಿಳಿದುಬಂದಿದೆ. ಕಾಡುಗಳ್ಳ ವೀರಪ್ಪನ್‌ನಿಂದ ಡಿಸಿಎಫ್ ಆಗಿದ್ದ ಶ್ರೀನಿವಾಸ್, ಡಿವೈಎಸ್ಪಿ ಹರೀಶಕುಮಾರ್ ಹತ್ಯೆಯಾಗಿದ್ದಾರೆ. ರಾಮಾಪುರ ಪೊಲೀಸ್ ಠಾಣೆ ಮೇಲೆಯೂ ದಾಳಿ ಮಾಡಿದ್ದ ಎಂಬುದನ್ನು ಅರಣ್ಯಾಧಿಕಾರಿಗಳು ನನ್ನ ಗಮನಕ್ಕೆ ತಂದಿದ್ಧಾರೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದ ಡಿಎಫ್‌ಒ ಡಾ.ಸಂತೋಷಕುಮಾರ್ ಅವರು, ಕಾಡುಗಳ್ಳ ವೀರಪ್ಪನ್‌ನಿಂದ ಡಿಸಿಎಫ್ ಶ್ರೀನಿವಾಸ್ ನ.೧೧ ರಂದು ಹತ್ಯೆಯಾದರು. ಆ ದಿನವನ್ನು ಕರ್ನಾಟಕ ಸರ್ಕಾರ ಅರಣ್ಯ ಹುತಾತ್ಮರ ದಿನವಾಗಿ ಆಚರಿಸುತ್ತಿತ್ತು. ರಾಜಸ್ತಾನದಲ್ಲಿ ರಾಜನೊಬ್ಬ ಅರಣ್ಯ ರಕ್ಷಣೆಗೆ ಮುಂದಾಗಿದ್ದ ಬಿಷ್ಣೊಯಿ ಸಮುದಾಯವನ್ನು ಸೆ.೧೧ರಂದು ಸಾಮೂಹಿಕವಾಗಿ ಹತ್ಯೆ ಮಾಡಿಸಿದ್ದ. ಆ ದಿನವನ್ನು ಕೇಂದ್ರ ಸರ್ಕಾರ ಅರಣ್ಯ ಹುತಾತ್ಮರ ದಿನವಾಗಿ ಆಚರಿಸುತ್ತಿದೆ. ಅಂದಿನಿAದ ದೇಶಾದ್ಯಂತ ಸೆ.೧೧ ರಂದು ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ವೀರಪ್ಪನ್‌ನಿಂದ ಡಿಸಿಎಫ್ ಶ್ರೀನಿವಾಸ್ ೧೯೯೧ರ ನ.೧೦ ರಂದು ಹತ್ಯೆಯಾದರು. ಅವರ ಕಾರ್ಯದಕ್ಷತೆಯನ್ನು ಮೆಚ್ಚಿ ಕೀರ್ತಿಚಕ್ರ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಳೆದ ೫೪ ವರ್ಷಗಳಲ್ಲಿ ಅರಣ್ಯ ಸಂರಕ್ಷಣೆಗಾಗಿ ಹೋರಾಡುವಾಗ ಮೃತರಾದ ಅರಣ್ಯ ಇಲಾಖೆಯ ಸಿಬ್ಬಂದಿ, ನೌಕರರ ಸೇವೆ ಸ್ಮರಿಸಿ ಶ್ರದ್ದಾಂಜಲಿ ಸಲ್ಲಿಸಲು ಈ ಹುತಾತ್ಮರ ದಿನ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯ ಅರಣ್ಯಗಳಲ್ಲಿ ಸೇವೆ ಸಲ್ಲಿಸುವಾಗ ಮೃತರಾದ ಮಾದನಾಯಕ, ಜೋಗೆಗೌಡ, ಅಬ್ದುಲ್ ಅಹಮ್ಮದ್, ಅಹಮ್ಮದ್ ಖಾನ್, ಹುಚ್ಚಶೆಟ್ಟಿ, ಜಿ.ಕೆ.ಅಣ್ಣಯ್ಯ, ಮುರುಗಪ್ಪ, ಪಿ.ಶ್ರೀನಿವಾಸ್ ಸೇರಿದಂತೆ ರಾಜ್ಯದ ೫೪ ನೌಕರರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಾಮಾಜಿಕ ವಲಯ ಅರಣ್ಯದ ಡಿಸಿಎಫ್ ಡಿ.ವೈ.ರಾಜು, ಎಸಿಎಫ್‌ಗಳಾದ ಕೆ.ಸುರೇಶ್, ಮಹದೇವಯ್ಯ, ಸಭ್ಯಶ್ರೀ ಇತರರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವಿರಿಸಿ ಗೌರವ ಸಲ್ಲಿಸಿದರು. ಅರಣ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

andolanait

Recent Posts

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

3 hours ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

4 hours ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

6 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

6 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

7 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

8 hours ago