ಜಿಲ್ಲೆಗಳು

ಅರಣ್ಯ ರಕ್ಷಣೆಗೆ ಸಾರ್ವಜನಿಕರು ಸಹಕಾರ ನೀಡಲಿ : ನ್ಯಾ. ಬಿ.ಎಸ್.ಭಾರತಿ ಸಲಹೆ

ಚಾಮರಾಜನಗರ: ಅರಣ್ಯ ಸಂರಕ್ಷಣೆಗಾಗಿ ಕಷ್ಟ ಪಡುವ ಅರಣ್ಯ ಇಲಾಖೆಯ ಸಿಬ್ಬಂದಿ ಜೊತೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಸಲಹೆ ನೀಡಿದರು.

ನಗರದ ಅರಣ್ಯ ಸಸ್ಯಕ್ಷೇತ್ರದಲ್ಲಿ ಅರಣ್ಯ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಸಮಾರಂಭದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವಿರಿಸಿದ ನಂತರ ಮಾತನಾಡಿದರು.
ವನ್ಯಸಂಪತ್ತು ಉಳಿಸಲು ಕೆಲವು ಅರಣ್ಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನು ಕೆಲವರು ಪ್ರಾಣಿಗಳಿಂದ ದಾಳಿಗೆ ಒಳಗಾಗಿದ್ದಾರೆ ಅಲ್ಲದೆ ಗಾಯಗೊಂಡಿರುವ ಬಗ್ಗೆ ತಿಳಿದುಬಂದಿದೆ. ಕಾಡುಗಳ್ಳ ವೀರಪ್ಪನ್‌ನಿಂದ ಡಿಸಿಎಫ್ ಆಗಿದ್ದ ಶ್ರೀನಿವಾಸ್, ಡಿವೈಎಸ್ಪಿ ಹರೀಶಕುಮಾರ್ ಹತ್ಯೆಯಾಗಿದ್ದಾರೆ. ರಾಮಾಪುರ ಪೊಲೀಸ್ ಠಾಣೆ ಮೇಲೆಯೂ ದಾಳಿ ಮಾಡಿದ್ದ ಎಂಬುದನ್ನು ಅರಣ್ಯಾಧಿಕಾರಿಗಳು ನನ್ನ ಗಮನಕ್ಕೆ ತಂದಿದ್ಧಾರೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದ ಡಿಎಫ್‌ಒ ಡಾ.ಸಂತೋಷಕುಮಾರ್ ಅವರು, ಕಾಡುಗಳ್ಳ ವೀರಪ್ಪನ್‌ನಿಂದ ಡಿಸಿಎಫ್ ಶ್ರೀನಿವಾಸ್ ನ.೧೧ ರಂದು ಹತ್ಯೆಯಾದರು. ಆ ದಿನವನ್ನು ಕರ್ನಾಟಕ ಸರ್ಕಾರ ಅರಣ್ಯ ಹುತಾತ್ಮರ ದಿನವಾಗಿ ಆಚರಿಸುತ್ತಿತ್ತು. ರಾಜಸ್ತಾನದಲ್ಲಿ ರಾಜನೊಬ್ಬ ಅರಣ್ಯ ರಕ್ಷಣೆಗೆ ಮುಂದಾಗಿದ್ದ ಬಿಷ್ಣೊಯಿ ಸಮುದಾಯವನ್ನು ಸೆ.೧೧ರಂದು ಸಾಮೂಹಿಕವಾಗಿ ಹತ್ಯೆ ಮಾಡಿಸಿದ್ದ. ಆ ದಿನವನ್ನು ಕೇಂದ್ರ ಸರ್ಕಾರ ಅರಣ್ಯ ಹುತಾತ್ಮರ ದಿನವಾಗಿ ಆಚರಿಸುತ್ತಿದೆ. ಅಂದಿನಿAದ ದೇಶಾದ್ಯಂತ ಸೆ.೧೧ ರಂದು ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ವೀರಪ್ಪನ್‌ನಿಂದ ಡಿಸಿಎಫ್ ಶ್ರೀನಿವಾಸ್ ೧೯೯೧ರ ನ.೧೦ ರಂದು ಹತ್ಯೆಯಾದರು. ಅವರ ಕಾರ್ಯದಕ್ಷತೆಯನ್ನು ಮೆಚ್ಚಿ ಕೀರ್ತಿಚಕ್ರ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಳೆದ ೫೪ ವರ್ಷಗಳಲ್ಲಿ ಅರಣ್ಯ ಸಂರಕ್ಷಣೆಗಾಗಿ ಹೋರಾಡುವಾಗ ಮೃತರಾದ ಅರಣ್ಯ ಇಲಾಖೆಯ ಸಿಬ್ಬಂದಿ, ನೌಕರರ ಸೇವೆ ಸ್ಮರಿಸಿ ಶ್ರದ್ದಾಂಜಲಿ ಸಲ್ಲಿಸಲು ಈ ಹುತಾತ್ಮರ ದಿನ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯ ಅರಣ್ಯಗಳಲ್ಲಿ ಸೇವೆ ಸಲ್ಲಿಸುವಾಗ ಮೃತರಾದ ಮಾದನಾಯಕ, ಜೋಗೆಗೌಡ, ಅಬ್ದುಲ್ ಅಹಮ್ಮದ್, ಅಹಮ್ಮದ್ ಖಾನ್, ಹುಚ್ಚಶೆಟ್ಟಿ, ಜಿ.ಕೆ.ಅಣ್ಣಯ್ಯ, ಮುರುಗಪ್ಪ, ಪಿ.ಶ್ರೀನಿವಾಸ್ ಸೇರಿದಂತೆ ರಾಜ್ಯದ ೫೪ ನೌಕರರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಾಮಾಜಿಕ ವಲಯ ಅರಣ್ಯದ ಡಿಸಿಎಫ್ ಡಿ.ವೈ.ರಾಜು, ಎಸಿಎಫ್‌ಗಳಾದ ಕೆ.ಸುರೇಶ್, ಮಹದೇವಯ್ಯ, ಸಭ್ಯಶ್ರೀ ಇತರರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವಿರಿಸಿ ಗೌರವ ಸಲ್ಲಿಸಿದರು. ಅರಣ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

2 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

17 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

17 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

21 hours ago