ಜಿಲ್ಲೆಗಳು

ನ್ಯಾಯ ಕೇಳಿದ್ದಕ್ಕೆ ಕೊಲೆಯಾಗಿ ಹೋದರೇ ಮಾಜಿ ಐಬಿ ಅಧಿಕಾರಿ ?

ಕೊಲೆ ಸಂಚಿನ ಬಗ್ಗೆ ಪೊಲೀಸರಿಂದ ಹಿಡಿದು ಪ್ರಧಾನಿ ತನಕ ದೂರಿತ್ತರೂ ಬದುಕುಳಿಯಲಿಲ್ಲ ಹಿರಿ ಜೀವ

ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್ಸಿನಲ್ಲಿ ಕಾರು ಡಿಕ್ಕಿಯಾಗಿ ಮೃತಪಟ್ಟ ಕೇಂದ್ರ ಗುಪ್ತಚರ ಇಲಾಖೆ (ಇಂಟಲಿಜೆನ್ಸ್ ಬ್ಯುರೋ) ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಸಾವಿನ ಪ್ರಕರಣ ಸಂಬಂಧಪಟ್ಟಂತೆ ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನ್ಯಾಯ ಕೇಳಿದ್ದಕ್ಕೆ ಕುಲಕರ್ಣಿ ಅವರ ಕೊಲೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಶಾರದಾದೇವಿನಗರದ ನಿವಾಸಿ ಕುಲಕರ್ಣಿ ಅವರು ನಿತ್ಯದಂತೆ ವಾಕ್ ಮಾಡಲು ನ.4ರಂದು ಸಂಜೆ 5 ಗಂಟೆ ಮನೆಯನ್ನು ಬಿಟ್ಟಿದ್ದು, ಕಾರು ಚಾಲಕನೊಂದಿಗೆ ಮಾನಸಗಂಗೋತ್ರಿ ಕ್ಯಾಂಪಸ್ಗೆ ಬಂದಿದ್ದಾರೆ. ಮಾಮೂಲಿಯಂತೆ ಕಾರನ್ನು ನಿಲ್ಲಿಸಿ, ಚಾಲಕನನ್ನು ಕಾರಿನ ಬಳಿಯೇ ಇರಲು ಹೇಳಿ. ವಾಕ್ ಮಾಡಲು ಹೋಗಿದ್ದಾರೆ. ಹೀಗೆ ವಾಕ್ ಮಾಡುತ್ತಾ, ಕ್ಯಾಂಪಸಿನ ಬಯೋ ಟೆಕ್ನಾಲಜಿ ಡಿಪಾರ್ಟ್ಮೆಂಟ್ ಬಳಿ ಹೋಗುವಾಗ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಕ್ಯಾಂಪಸ್ನಲ್ಲಿದ್ದ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ನೋಂದಣಿ ಸಂಖ್ಯೆ ಇಲ್ಲದ ಕಾರು ಡಿಕ್ಕಿ ಹೊಡೆದು ಪರಾರಿಯಾಗಿರುವುದು ಕಂಡು ಬಂದಿದೆ. ತಕ್ಷಣ ಆಸ್ಪತ್ರೆಗೆ ಸೇರಿದಾಗ್ಯೂ ತಲೆಗೆ ತೀವ್ರವಾದ ಪೆಟ್ಟಾದ ಕಾರಣ ಅವರು ಮೃತಪಟ್ಟಿದ್ದಾರೆ.

ಡ್ರೈವರ್ ಹೇಳಿಕೆ : ‘ಕುಲಕರ್ಣಿ ಅವರು ಗಂಗೋತ್ರಿ ಕ್ಯಾಂಪಸ್ನಲ್ಲಿ ವಾಯು ವಿಹಾರ ಮಾಡುತ್ತಿದ್ದಾಗ ನಾನು ಎಂದಿನಂತೆ ಒಂದು ಜಾಗದಲ್ಲಿ ಕಾರು ನಿಲ್ಲಿಸಿಕೊಂಡು ಕಾಯುತ್ತಿದ್ದೆ. ಆದರೆ ಸುಮಾರು ಸಂಜೆ ೫.೪೫ರ ವೇಳೆಯಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಯಾರೋ ಒಬ್ಬರು ನೀವು ನಿತ್ಯ ಕರೆದುಕೊಂಡು ಬರುತ್ತಿದ್ದ ವ್ಯಕ್ತಿಗೆ ಯಾವುದೋ ವಾಹನ ಗುದ್ದಿಕೊಂಡು ಹೋಗಿದೆ ಎಂದು ತಿಳಿಸಿದರು. ನಾನು ತಕ್ಷಣ ಅವರನ್ನು ಕಾಮಾಕ್ಷಿ ಆಸ್ಪತ್ರೆಗೆ ಆಸ್ಪತ್ರೆಗೆ ಸೇರಿಸಿ, ನಂತರ ಸಂಜೆ 6.31ಕ್ಕೆ ಅವರ ಅಳಿಯನಿಗೆ ಕರೆ ಮಾಡಿ ವಿಷಯ ತಿಳಿಸಿರುವುದಾಗಿ ಚಾಲಕ ನಿಂಗರಾಜು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನ್ಯಾಯ ಕೇಳಿದ್ದಕ್ಕೆ ಕೊಲೆಯಾದ್ರಾ ?

‘ಕುಲಕರ್ಣಿ ಅವರ ಮನೆಯ ಬಳಿ ಸ್ವಲ್ಪವೂ ಅಂತರ ಬಿಡದೆ ಮಾದಪ್ಪ ಎಂಬವರು ಕಾನೂನು ಬಾಹಿರವಾಗಿ ಮತ್ತು ಮಹಾನಗರ ಪಾಲಿಕೆ ಬೈಲಾದ ವಿರುದ್ಧವಾಗಿ ಮನೆ ಕಟ್ಟಿದ್ದರು. ಮನೆಯನ್ನು ಕಟ್ಟುವ ಹಂತದಲ್ಲಿಯೇ ಜಾಗ ಬಿಡುವಂತೆ ಕುಲಕರ್ಣಿ ಅವರು ಮಾದಪ್ಪನವರನ್ನು ಕೇಳಿದ್ದರು. ಆದರೆ, ಈ ಕೋರಿಕೆಯನ್ನು ಮಾದಪ್ಪ ತಿರಸ್ಕರಿಸಿದ್ದರು. ಹೀಗಾಗಿ, ಕಾನೂನು ಬಾಹಿರವಾಗಿ ಮನೆಯನ್ನು ನಿರ್ಮಾಣ ಮಾಡಿದ ಮಾದಪ್ಪ ಅವರ ವಿರುದ್ಧ ಆರ್.ಎನ್.ಕುಲಕರ್ಣಿ ಅವರು ಕಾನೂನು ಹೋರಾಟ ಆರಂಭಿಸಿದ್ದರು. ನ.2ರಂದು ಮಾದಪ್ಪ ಕಾನೂನು ಬಾಹಿರವಾಗಿ ಮನೆ ಕಟ್ಟಿರುವುದನ್ನು ತೆರವುಗೊಳಿಸುವಂತೆ ಕೋರ್ಟ್ ಆದೇಶ ಮಾಡಿತ್ತು’

‘ಇನ್ನು ಕಾನೂನು ಹೋರಾಟವನ್ನು ಆರಂಭಿಸಿದ್ದಾಗಿನಿಂದ ಮಾದಪ್ಪ ಮತ್ತು ಅವರ ಮಕ್ಕಳು, ಸಹಚರರು ನನ್ನನ್ನು ಹತ್ಯೆ ಮಾಡಲು ಸಂಚು ಮಾಡುತ್ತಿದೆ’ ಎಂದು ಕುಲಕರ್ಣಿ ಅವರು ಅಮೇರಿಕಾದಲ್ಲಿ ಇದ್ದ ತಮ್ಮ ಮಗಳು ಮತ್ತು ಅಳಿಯನ ಜೊತೆಗೆ ಹೇಳಿಕೊಂಡಿದ್ದರು. ಮಗಳು ಮತ್ತು ಅಳಿಯನ ಸಲಹೆ ಮೇರೆಗೆ ಕೊಲೆ ಮಾಡಲು ಪಯತ್ನಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಠಾಣೆ, ನಗರ ಪೊಲೀಸ್ ಆಯುಕ್ತರು, ಪ್ರಧಾನ ಮಂತ್ರಿಯವರಿಗೂ ಮಾದಪ್ಪ ಮತ್ತು ಮಕ್ಕಳು ಬಳಸುವ ವಾಹನಗಳ ನಂಬರ್ ಸಮೇತ ದೂರು ನೀಡಿದ್ದರು ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ.

ಕೊಲೆ ಉದ್ದೇಶ: ಎಫ್ಐಆರ್ನಲ್ಲಿ ಉಲ್ಲೇಖವಾಗಿರುವ ಅಂಶಗಳು ಮತ್ತು ಸಿಸಿಟಿವಿ ಕ್ಯಾಮೆರಾ ಫೂಟೇಜ್ಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕೊಲೆಯ ಉದ್ದೇಶದಿಂದಲೇ ಅಪಘಾತ ಮಾಡಲಾಗಿದೆ ಎಂದು ತನಿಖೆ ಆರಂಭಿಸಿದ್ದಾರೆ. ಮಾದಪ್ಪ ಮತ್ತು ಮಕ್ಕಳ ವಿರುದ್ಧ ಕುಲಕರ್ಣಿ ಅವರ ಅಳಿಯ ಸಂಜಯ ಅಂಗಡಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 302 ಅಡಿ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolana

Recent Posts

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

44 mins ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

1 hour ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

1 hour ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

1 hour ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

1 hour ago

ನಾಳೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…

1 hour ago