ಜಿಲ್ಲೆಗಳು

ನ್ಯಾಯ ಕೇಳಿದ್ದಕ್ಕೆ ಕೊಲೆಯಾಗಿ ಹೋದರೇ ಮಾಜಿ ಐಬಿ ಅಧಿಕಾರಿ ?

ಕೊಲೆ ಸಂಚಿನ ಬಗ್ಗೆ ಪೊಲೀಸರಿಂದ ಹಿಡಿದು ಪ್ರಧಾನಿ ತನಕ ದೂರಿತ್ತರೂ ಬದುಕುಳಿಯಲಿಲ್ಲ ಹಿರಿ ಜೀವ

ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್ಸಿನಲ್ಲಿ ಕಾರು ಡಿಕ್ಕಿಯಾಗಿ ಮೃತಪಟ್ಟ ಕೇಂದ್ರ ಗುಪ್ತಚರ ಇಲಾಖೆ (ಇಂಟಲಿಜೆನ್ಸ್ ಬ್ಯುರೋ) ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಸಾವಿನ ಪ್ರಕರಣ ಸಂಬಂಧಪಟ್ಟಂತೆ ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನ್ಯಾಯ ಕೇಳಿದ್ದಕ್ಕೆ ಕುಲಕರ್ಣಿ ಅವರ ಕೊಲೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಶಾರದಾದೇವಿನಗರದ ನಿವಾಸಿ ಕುಲಕರ್ಣಿ ಅವರು ನಿತ್ಯದಂತೆ ವಾಕ್ ಮಾಡಲು ನ.4ರಂದು ಸಂಜೆ 5 ಗಂಟೆ ಮನೆಯನ್ನು ಬಿಟ್ಟಿದ್ದು, ಕಾರು ಚಾಲಕನೊಂದಿಗೆ ಮಾನಸಗಂಗೋತ್ರಿ ಕ್ಯಾಂಪಸ್ಗೆ ಬಂದಿದ್ದಾರೆ. ಮಾಮೂಲಿಯಂತೆ ಕಾರನ್ನು ನಿಲ್ಲಿಸಿ, ಚಾಲಕನನ್ನು ಕಾರಿನ ಬಳಿಯೇ ಇರಲು ಹೇಳಿ. ವಾಕ್ ಮಾಡಲು ಹೋಗಿದ್ದಾರೆ. ಹೀಗೆ ವಾಕ್ ಮಾಡುತ್ತಾ, ಕ್ಯಾಂಪಸಿನ ಬಯೋ ಟೆಕ್ನಾಲಜಿ ಡಿಪಾರ್ಟ್ಮೆಂಟ್ ಬಳಿ ಹೋಗುವಾಗ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಕ್ಯಾಂಪಸ್ನಲ್ಲಿದ್ದ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ನೋಂದಣಿ ಸಂಖ್ಯೆ ಇಲ್ಲದ ಕಾರು ಡಿಕ್ಕಿ ಹೊಡೆದು ಪರಾರಿಯಾಗಿರುವುದು ಕಂಡು ಬಂದಿದೆ. ತಕ್ಷಣ ಆಸ್ಪತ್ರೆಗೆ ಸೇರಿದಾಗ್ಯೂ ತಲೆಗೆ ತೀವ್ರವಾದ ಪೆಟ್ಟಾದ ಕಾರಣ ಅವರು ಮೃತಪಟ್ಟಿದ್ದಾರೆ.

ಡ್ರೈವರ್ ಹೇಳಿಕೆ : ‘ಕುಲಕರ್ಣಿ ಅವರು ಗಂಗೋತ್ರಿ ಕ್ಯಾಂಪಸ್ನಲ್ಲಿ ವಾಯು ವಿಹಾರ ಮಾಡುತ್ತಿದ್ದಾಗ ನಾನು ಎಂದಿನಂತೆ ಒಂದು ಜಾಗದಲ್ಲಿ ಕಾರು ನಿಲ್ಲಿಸಿಕೊಂಡು ಕಾಯುತ್ತಿದ್ದೆ. ಆದರೆ ಸುಮಾರು ಸಂಜೆ ೫.೪೫ರ ವೇಳೆಯಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಯಾರೋ ಒಬ್ಬರು ನೀವು ನಿತ್ಯ ಕರೆದುಕೊಂಡು ಬರುತ್ತಿದ್ದ ವ್ಯಕ್ತಿಗೆ ಯಾವುದೋ ವಾಹನ ಗುದ್ದಿಕೊಂಡು ಹೋಗಿದೆ ಎಂದು ತಿಳಿಸಿದರು. ನಾನು ತಕ್ಷಣ ಅವರನ್ನು ಕಾಮಾಕ್ಷಿ ಆಸ್ಪತ್ರೆಗೆ ಆಸ್ಪತ್ರೆಗೆ ಸೇರಿಸಿ, ನಂತರ ಸಂಜೆ 6.31ಕ್ಕೆ ಅವರ ಅಳಿಯನಿಗೆ ಕರೆ ಮಾಡಿ ವಿಷಯ ತಿಳಿಸಿರುವುದಾಗಿ ಚಾಲಕ ನಿಂಗರಾಜು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನ್ಯಾಯ ಕೇಳಿದ್ದಕ್ಕೆ ಕೊಲೆಯಾದ್ರಾ ?

‘ಕುಲಕರ್ಣಿ ಅವರ ಮನೆಯ ಬಳಿ ಸ್ವಲ್ಪವೂ ಅಂತರ ಬಿಡದೆ ಮಾದಪ್ಪ ಎಂಬವರು ಕಾನೂನು ಬಾಹಿರವಾಗಿ ಮತ್ತು ಮಹಾನಗರ ಪಾಲಿಕೆ ಬೈಲಾದ ವಿರುದ್ಧವಾಗಿ ಮನೆ ಕಟ್ಟಿದ್ದರು. ಮನೆಯನ್ನು ಕಟ್ಟುವ ಹಂತದಲ್ಲಿಯೇ ಜಾಗ ಬಿಡುವಂತೆ ಕುಲಕರ್ಣಿ ಅವರು ಮಾದಪ್ಪನವರನ್ನು ಕೇಳಿದ್ದರು. ಆದರೆ, ಈ ಕೋರಿಕೆಯನ್ನು ಮಾದಪ್ಪ ತಿರಸ್ಕರಿಸಿದ್ದರು. ಹೀಗಾಗಿ, ಕಾನೂನು ಬಾಹಿರವಾಗಿ ಮನೆಯನ್ನು ನಿರ್ಮಾಣ ಮಾಡಿದ ಮಾದಪ್ಪ ಅವರ ವಿರುದ್ಧ ಆರ್.ಎನ್.ಕುಲಕರ್ಣಿ ಅವರು ಕಾನೂನು ಹೋರಾಟ ಆರಂಭಿಸಿದ್ದರು. ನ.2ರಂದು ಮಾದಪ್ಪ ಕಾನೂನು ಬಾಹಿರವಾಗಿ ಮನೆ ಕಟ್ಟಿರುವುದನ್ನು ತೆರವುಗೊಳಿಸುವಂತೆ ಕೋರ್ಟ್ ಆದೇಶ ಮಾಡಿತ್ತು’

‘ಇನ್ನು ಕಾನೂನು ಹೋರಾಟವನ್ನು ಆರಂಭಿಸಿದ್ದಾಗಿನಿಂದ ಮಾದಪ್ಪ ಮತ್ತು ಅವರ ಮಕ್ಕಳು, ಸಹಚರರು ನನ್ನನ್ನು ಹತ್ಯೆ ಮಾಡಲು ಸಂಚು ಮಾಡುತ್ತಿದೆ’ ಎಂದು ಕುಲಕರ್ಣಿ ಅವರು ಅಮೇರಿಕಾದಲ್ಲಿ ಇದ್ದ ತಮ್ಮ ಮಗಳು ಮತ್ತು ಅಳಿಯನ ಜೊತೆಗೆ ಹೇಳಿಕೊಂಡಿದ್ದರು. ಮಗಳು ಮತ್ತು ಅಳಿಯನ ಸಲಹೆ ಮೇರೆಗೆ ಕೊಲೆ ಮಾಡಲು ಪಯತ್ನಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಠಾಣೆ, ನಗರ ಪೊಲೀಸ್ ಆಯುಕ್ತರು, ಪ್ರಧಾನ ಮಂತ್ರಿಯವರಿಗೂ ಮಾದಪ್ಪ ಮತ್ತು ಮಕ್ಕಳು ಬಳಸುವ ವಾಹನಗಳ ನಂಬರ್ ಸಮೇತ ದೂರು ನೀಡಿದ್ದರು ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ.

ಕೊಲೆ ಉದ್ದೇಶ: ಎಫ್ಐಆರ್ನಲ್ಲಿ ಉಲ್ಲೇಖವಾಗಿರುವ ಅಂಶಗಳು ಮತ್ತು ಸಿಸಿಟಿವಿ ಕ್ಯಾಮೆರಾ ಫೂಟೇಜ್ಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕೊಲೆಯ ಉದ್ದೇಶದಿಂದಲೇ ಅಪಘಾತ ಮಾಡಲಾಗಿದೆ ಎಂದು ತನಿಖೆ ಆರಂಭಿಸಿದ್ದಾರೆ. ಮಾದಪ್ಪ ಮತ್ತು ಮಕ್ಕಳ ವಿರುದ್ಧ ಕುಲಕರ್ಣಿ ಅವರ ಅಳಿಯ ಸಂಜಯ ಅಂಗಡಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 302 ಅಡಿ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolana

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

3 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

4 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

4 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

4 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

4 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

4 hours ago