ಜಿಲ್ಲೆಗಳು

ನ್ಯಾಯ ಕೇಳಿದ್ದಕ್ಕೆ ಕೊಲೆಯಾಗಿ ಹೋದರೇ ಮಾಜಿ ಐಬಿ ಅಧಿಕಾರಿ ?

ಕೊಲೆ ಸಂಚಿನ ಬಗ್ಗೆ ಪೊಲೀಸರಿಂದ ಹಿಡಿದು ಪ್ರಧಾನಿ ತನಕ ದೂರಿತ್ತರೂ ಬದುಕುಳಿಯಲಿಲ್ಲ ಹಿರಿ ಜೀವ

ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್ಸಿನಲ್ಲಿ ಕಾರು ಡಿಕ್ಕಿಯಾಗಿ ಮೃತಪಟ್ಟ ಕೇಂದ್ರ ಗುಪ್ತಚರ ಇಲಾಖೆ (ಇಂಟಲಿಜೆನ್ಸ್ ಬ್ಯುರೋ) ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಸಾವಿನ ಪ್ರಕರಣ ಸಂಬಂಧಪಟ್ಟಂತೆ ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನ್ಯಾಯ ಕೇಳಿದ್ದಕ್ಕೆ ಕುಲಕರ್ಣಿ ಅವರ ಕೊಲೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಶಾರದಾದೇವಿನಗರದ ನಿವಾಸಿ ಕುಲಕರ್ಣಿ ಅವರು ನಿತ್ಯದಂತೆ ವಾಕ್ ಮಾಡಲು ನ.4ರಂದು ಸಂಜೆ 5 ಗಂಟೆ ಮನೆಯನ್ನು ಬಿಟ್ಟಿದ್ದು, ಕಾರು ಚಾಲಕನೊಂದಿಗೆ ಮಾನಸಗಂಗೋತ್ರಿ ಕ್ಯಾಂಪಸ್ಗೆ ಬಂದಿದ್ದಾರೆ. ಮಾಮೂಲಿಯಂತೆ ಕಾರನ್ನು ನಿಲ್ಲಿಸಿ, ಚಾಲಕನನ್ನು ಕಾರಿನ ಬಳಿಯೇ ಇರಲು ಹೇಳಿ. ವಾಕ್ ಮಾಡಲು ಹೋಗಿದ್ದಾರೆ. ಹೀಗೆ ವಾಕ್ ಮಾಡುತ್ತಾ, ಕ್ಯಾಂಪಸಿನ ಬಯೋ ಟೆಕ್ನಾಲಜಿ ಡಿಪಾರ್ಟ್ಮೆಂಟ್ ಬಳಿ ಹೋಗುವಾಗ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಕ್ಯಾಂಪಸ್ನಲ್ಲಿದ್ದ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ನೋಂದಣಿ ಸಂಖ್ಯೆ ಇಲ್ಲದ ಕಾರು ಡಿಕ್ಕಿ ಹೊಡೆದು ಪರಾರಿಯಾಗಿರುವುದು ಕಂಡು ಬಂದಿದೆ. ತಕ್ಷಣ ಆಸ್ಪತ್ರೆಗೆ ಸೇರಿದಾಗ್ಯೂ ತಲೆಗೆ ತೀವ್ರವಾದ ಪೆಟ್ಟಾದ ಕಾರಣ ಅವರು ಮೃತಪಟ್ಟಿದ್ದಾರೆ.

ಡ್ರೈವರ್ ಹೇಳಿಕೆ : ‘ಕುಲಕರ್ಣಿ ಅವರು ಗಂಗೋತ್ರಿ ಕ್ಯಾಂಪಸ್ನಲ್ಲಿ ವಾಯು ವಿಹಾರ ಮಾಡುತ್ತಿದ್ದಾಗ ನಾನು ಎಂದಿನಂತೆ ಒಂದು ಜಾಗದಲ್ಲಿ ಕಾರು ನಿಲ್ಲಿಸಿಕೊಂಡು ಕಾಯುತ್ತಿದ್ದೆ. ಆದರೆ ಸುಮಾರು ಸಂಜೆ ೫.೪೫ರ ವೇಳೆಯಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಯಾರೋ ಒಬ್ಬರು ನೀವು ನಿತ್ಯ ಕರೆದುಕೊಂಡು ಬರುತ್ತಿದ್ದ ವ್ಯಕ್ತಿಗೆ ಯಾವುದೋ ವಾಹನ ಗುದ್ದಿಕೊಂಡು ಹೋಗಿದೆ ಎಂದು ತಿಳಿಸಿದರು. ನಾನು ತಕ್ಷಣ ಅವರನ್ನು ಕಾಮಾಕ್ಷಿ ಆಸ್ಪತ್ರೆಗೆ ಆಸ್ಪತ್ರೆಗೆ ಸೇರಿಸಿ, ನಂತರ ಸಂಜೆ 6.31ಕ್ಕೆ ಅವರ ಅಳಿಯನಿಗೆ ಕರೆ ಮಾಡಿ ವಿಷಯ ತಿಳಿಸಿರುವುದಾಗಿ ಚಾಲಕ ನಿಂಗರಾಜು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನ್ಯಾಯ ಕೇಳಿದ್ದಕ್ಕೆ ಕೊಲೆಯಾದ್ರಾ ?

‘ಕುಲಕರ್ಣಿ ಅವರ ಮನೆಯ ಬಳಿ ಸ್ವಲ್ಪವೂ ಅಂತರ ಬಿಡದೆ ಮಾದಪ್ಪ ಎಂಬವರು ಕಾನೂನು ಬಾಹಿರವಾಗಿ ಮತ್ತು ಮಹಾನಗರ ಪಾಲಿಕೆ ಬೈಲಾದ ವಿರುದ್ಧವಾಗಿ ಮನೆ ಕಟ್ಟಿದ್ದರು. ಮನೆಯನ್ನು ಕಟ್ಟುವ ಹಂತದಲ್ಲಿಯೇ ಜಾಗ ಬಿಡುವಂತೆ ಕುಲಕರ್ಣಿ ಅವರು ಮಾದಪ್ಪನವರನ್ನು ಕೇಳಿದ್ದರು. ಆದರೆ, ಈ ಕೋರಿಕೆಯನ್ನು ಮಾದಪ್ಪ ತಿರಸ್ಕರಿಸಿದ್ದರು. ಹೀಗಾಗಿ, ಕಾನೂನು ಬಾಹಿರವಾಗಿ ಮನೆಯನ್ನು ನಿರ್ಮಾಣ ಮಾಡಿದ ಮಾದಪ್ಪ ಅವರ ವಿರುದ್ಧ ಆರ್.ಎನ್.ಕುಲಕರ್ಣಿ ಅವರು ಕಾನೂನು ಹೋರಾಟ ಆರಂಭಿಸಿದ್ದರು. ನ.2ರಂದು ಮಾದಪ್ಪ ಕಾನೂನು ಬಾಹಿರವಾಗಿ ಮನೆ ಕಟ್ಟಿರುವುದನ್ನು ತೆರವುಗೊಳಿಸುವಂತೆ ಕೋರ್ಟ್ ಆದೇಶ ಮಾಡಿತ್ತು’

‘ಇನ್ನು ಕಾನೂನು ಹೋರಾಟವನ್ನು ಆರಂಭಿಸಿದ್ದಾಗಿನಿಂದ ಮಾದಪ್ಪ ಮತ್ತು ಅವರ ಮಕ್ಕಳು, ಸಹಚರರು ನನ್ನನ್ನು ಹತ್ಯೆ ಮಾಡಲು ಸಂಚು ಮಾಡುತ್ತಿದೆ’ ಎಂದು ಕುಲಕರ್ಣಿ ಅವರು ಅಮೇರಿಕಾದಲ್ಲಿ ಇದ್ದ ತಮ್ಮ ಮಗಳು ಮತ್ತು ಅಳಿಯನ ಜೊತೆಗೆ ಹೇಳಿಕೊಂಡಿದ್ದರು. ಮಗಳು ಮತ್ತು ಅಳಿಯನ ಸಲಹೆ ಮೇರೆಗೆ ಕೊಲೆ ಮಾಡಲು ಪಯತ್ನಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಠಾಣೆ, ನಗರ ಪೊಲೀಸ್ ಆಯುಕ್ತರು, ಪ್ರಧಾನ ಮಂತ್ರಿಯವರಿಗೂ ಮಾದಪ್ಪ ಮತ್ತು ಮಕ್ಕಳು ಬಳಸುವ ವಾಹನಗಳ ನಂಬರ್ ಸಮೇತ ದೂರು ನೀಡಿದ್ದರು ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ.

ಕೊಲೆ ಉದ್ದೇಶ: ಎಫ್ಐಆರ್ನಲ್ಲಿ ಉಲ್ಲೇಖವಾಗಿರುವ ಅಂಶಗಳು ಮತ್ತು ಸಿಸಿಟಿವಿ ಕ್ಯಾಮೆರಾ ಫೂಟೇಜ್ಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕೊಲೆಯ ಉದ್ದೇಶದಿಂದಲೇ ಅಪಘಾತ ಮಾಡಲಾಗಿದೆ ಎಂದು ತನಿಖೆ ಆರಂಭಿಸಿದ್ದಾರೆ. ಮಾದಪ್ಪ ಮತ್ತು ಮಕ್ಕಳ ವಿರುದ್ಧ ಕುಲಕರ್ಣಿ ಅವರ ಅಳಿಯ ಸಂಜಯ ಅಂಗಡಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 302 ಅಡಿ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago