ಜಿಲ್ಲೆಗಳು

ರೈತ ವಿರೋಧಿ ನೀತಿಗಳ ವಿರುದ್ಧ ಸಂಘಟಿತ ಹೋರಾಟ ಅಗತ್ಯ : ನವೀನ್ ಕುಮಾರ್

ಮೈಸೂರು: ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ದ ಸಂಘಟಿತ ಹೋರಾಟಕ್ಕೆ ಕರ್ನಾಟಕ ಪಾಂತ ರೈತ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ H.R.ನವೀನ್ ಕುಮಾರ್ ಕರೆ ನೀಡಿದರು. ಕರ್ನಾಟಕ ಪ್ರಾಂತ ರೈತ ಸಂಘದ 2ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಮುಂದುವರೆದು ಕೇಂದ್ರ ಸರ್ಕಾರದ ಶ್ರೀಮಂತ ಕಾರ್ಪೋರೆಟ್ ಕಂಪನಿಗಳ ಸಾಲ ಮನ್ನ ಮಾಡುವಲ್ಲಿ ತೋರುವ ಆಸಕ್ತಿಯನ್ನು ರೈತರ ಸಾಲ ಮನ್ನಾ ಮಾಡುವಲ್ಲಿ ಆಸಕ್ತಿ ತೋರುತ್ತಿಲ್ಲ‌ಇದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ತೋರಿಸುತ್ತದೆ. ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿ ಮಾಡುತ್ತೇನೆಂದು ಹೇಳಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ರೈತರಿಗೆ ಮೋಸಮಾಡಿ ವರದಿ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಅಫಿಡೇವಿಟ್ ಸಲ್ಲಿಸಿದೆ. ಅಲ್ಲದೆ ಕಾರ್ಪೊರೇಟ್ ಕಂಪನಿಗಳಿ ಅನುಕೂಲ ಮಾಡಿಕೊಡಲು ಕರಾಳ ಕೃಷಿ ಕಾನೂನನ್ನು ತಂದಿತ್ತು ಅದನ್ನು ಧಿರಾದ್ದೋತ ಹೋರಾಟದ ಮೂಲಕ ತಡೆಹಿಡಿಯಲಾಯಿತು. ಆದರೆ ಮೋದಿ ಸರ್ಕಾರ ಪುನಃ ಕರಾಳ ಕಾಯಿದೆಯನ್ನು ತರಲು ಹುನ್ನಾರ ನಡೆಸುತ್ತಿದೆ. ಇದನ್ನು ಹಿಮ್ಮೆಟ್ಟಿಸಲು ಸಂಘಟಿತರಾಗಬೇಕು,ಅಲ್ಲದೆ ಭೂಮಿಗಾಗಿ 50-60 ವರ್ಷಗಳಿಂದ ಸಾಗುವಳಿ ಪತ್ರಕ್ಕೆ ಅರ್ಜಿ ಸಲ್ಲಿಸಿ ಹಕ್ಕು ಪತ್ರಕ್ಕೆ ಕಾಯುತ್ತಿರುವ ರೈತರಿಗೆ ಸಾಗುವಳಿ ಪತ್ರ ನೀಡದೆ,ಕಾನೂನಿನ ನೆಪ ಹೇಳಿ ಸಾಗುವಳಿ ನಿರಾಕರಿಸುತ್ತಿದ್ದಾರೆ. ಆದರೆ ಅದೇ ಸಾಗುವಳಿ ಭೂಮಿಯನ್ನು ಸಂಘ ಸಂಸ್ಥೆಗಳಿಗೆ ನೀಡಲು ಕಂದಾಯ ಸಚಿವರ ನೇತೃತ್ವದಲ್ಲಿ ಸಮಿತಿ ಮಾಡಿ ಖಾಸಗಿ ಸಂಘ ಸಂಸ್ಥೆಗಳಿಗೆ ನೀಡುತ್ತಿದ್ದಾರೆ ಈ ಭೂಗಳ್ಳ ಸರ್ಕಾರದ ವಿರುದ್ಧ ತೀವ್ರ ಹೋರಾಟಕ್ಕೆ ಅಣಿನೆರೆಸಬೇಕಿದೆ ಎಂದರು.

ವೇದಿಕೆಯಲ್ಲಿ ಅಥಿತಿಗಳಾಗಿ CITU ನ ಜಿಲ್ಲಾ ಕಾರ್ಯದರ್ಶಿ ಜಯರಾಂ, ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಕೆ.ಬಸವರಾಜ್, ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ‌್ಯ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ನೂರಾಣಿ ಜಿಲ್ಲಾ ಅಧ್ಯಕ್ಷರಾದ ಚಿಕ್ಕಣ್ಣೇಗೌಡ, ಕೆಂಪಯ್ಯ,ಚಂದ್ರಶೇಖರ್ ಮುಂತಾದವರು ಇದ್ದರು. ಇದಕ್ಕೂ ಮುಂಚೆ ರಾಮಸ್ವಾಮಿ ವೃತ್ತದಿಂದ ಬುದ್ದ ವಿಹಾರದ ವರೆಗೆ ಮೆರವಣಿಗೆ ನಡೆಸಲಾಯಿತು.

ಈ ಸಮ್ಮೇಳನದಲ್ಲಿ ನೂತನ ಜಿಲ್ಲಾ ಸಮಿತಿ ರಚಿಸಲಾಯಿತು. ಜಿಲ್ಲಾಧ್ಯಕ್ಷರಾಗಿ ಚಿಕ್ಕಣ್ಣೇಗೌಡ ಪ್ರಾಧಾನ ಕಾರ್ಯದರ್ಶಿಯಾಗಿ ಜಗದೀಶ್ ಸೂರ‌್ಯ, ಖಜಾಂಚಿಯಾಗಿ ಮರಳಯ್ಯನಕೊಪ್ಪಲು ಚಂದ್ರಶೇಖರ್ ಉ ಪಾಧ್ಯಕ್ಷರಾಗಿ ಕೆ.ಬಸವರಾಜ್,, ಕೆಂಪಯ್ಯ,ನೀರಾಣಿ,ಬಿ.ಎಂ.ಶಿವಣ್ಣ, ಸಹ ಕಾರ್ಯದರ್ಶಿಯಾಗಿ ಪುಟ್ಟರಾಜ, ಸೋಮಶೇಖರ್, ಸ್ವಾಮಿ ಮುಂದಿನ ಮೂರು ವರ್ಷದ ಅವದಿಗೆ ಆಯ್ಕೆಯಾದರು.

andolanait

Recent Posts

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಚಿವ ಆರ್.‌ಬಿ.ತಿಮ್ಮಾಪುರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಸದಸ್ಯರು ಆರ್.‌ಅಶೋಕ್‌ ನೇತೃತ್ವದಲ್ಲಿ…

56 mins ago

ಮಾರ್ಚ್.‌18ರಿಂದ ಏಪ್ರಿಲ್.‌2ರವರೆಗೆ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ…

1 hour ago

ಹನೂರು| 6 ಹಸುಗಳು ಅನುಮಾನಸ್ಪದ ಸಾವು: ವಿಷಪ್ರಾಶನ ಶಂಕೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ…

2 hours ago

ಸಿದ್ದಾಪುರ| ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ನವೀನ್‌ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು  ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…

3 hours ago

ಓದುಗರ ಪತ್ರ: ಗಾಂಜಾ ಮಾರಾಟ ತಡೆಗಟ್ಟಿ

ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…

4 hours ago

ಓದುಗರ ಪತ್ರ: ಕೇರಳದಲ್ಲಿ ಉಚಿತ ಶಿಕ್ಷಣ ಶ್ಲಾಘನೀಯ

ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…

4 hours ago