ಜಿಲ್ಲೆಗಳು

ರೈತ ವಿರೋಧಿ ನೀತಿಗಳ ವಿರುದ್ಧ ಸಂಘಟಿತ ಹೋರಾಟ ಅಗತ್ಯ : ನವೀನ್ ಕುಮಾರ್

ಮೈಸೂರು: ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ದ ಸಂಘಟಿತ ಹೋರಾಟಕ್ಕೆ ಕರ್ನಾಟಕ ಪಾಂತ ರೈತ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ H.R.ನವೀನ್ ಕುಮಾರ್ ಕರೆ ನೀಡಿದರು. ಕರ್ನಾಟಕ ಪ್ರಾಂತ ರೈತ ಸಂಘದ 2ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಮುಂದುವರೆದು ಕೇಂದ್ರ ಸರ್ಕಾರದ ಶ್ರೀಮಂತ ಕಾರ್ಪೋರೆಟ್ ಕಂಪನಿಗಳ ಸಾಲ ಮನ್ನ ಮಾಡುವಲ್ಲಿ ತೋರುವ ಆಸಕ್ತಿಯನ್ನು ರೈತರ ಸಾಲ ಮನ್ನಾ ಮಾಡುವಲ್ಲಿ ಆಸಕ್ತಿ ತೋರುತ್ತಿಲ್ಲ‌ಇದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ತೋರಿಸುತ್ತದೆ. ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿ ಮಾಡುತ್ತೇನೆಂದು ಹೇಳಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ರೈತರಿಗೆ ಮೋಸಮಾಡಿ ವರದಿ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಅಫಿಡೇವಿಟ್ ಸಲ್ಲಿಸಿದೆ. ಅಲ್ಲದೆ ಕಾರ್ಪೊರೇಟ್ ಕಂಪನಿಗಳಿ ಅನುಕೂಲ ಮಾಡಿಕೊಡಲು ಕರಾಳ ಕೃಷಿ ಕಾನೂನನ್ನು ತಂದಿತ್ತು ಅದನ್ನು ಧಿರಾದ್ದೋತ ಹೋರಾಟದ ಮೂಲಕ ತಡೆಹಿಡಿಯಲಾಯಿತು. ಆದರೆ ಮೋದಿ ಸರ್ಕಾರ ಪುನಃ ಕರಾಳ ಕಾಯಿದೆಯನ್ನು ತರಲು ಹುನ್ನಾರ ನಡೆಸುತ್ತಿದೆ. ಇದನ್ನು ಹಿಮ್ಮೆಟ್ಟಿಸಲು ಸಂಘಟಿತರಾಗಬೇಕು,ಅಲ್ಲದೆ ಭೂಮಿಗಾಗಿ 50-60 ವರ್ಷಗಳಿಂದ ಸಾಗುವಳಿ ಪತ್ರಕ್ಕೆ ಅರ್ಜಿ ಸಲ್ಲಿಸಿ ಹಕ್ಕು ಪತ್ರಕ್ಕೆ ಕಾಯುತ್ತಿರುವ ರೈತರಿಗೆ ಸಾಗುವಳಿ ಪತ್ರ ನೀಡದೆ,ಕಾನೂನಿನ ನೆಪ ಹೇಳಿ ಸಾಗುವಳಿ ನಿರಾಕರಿಸುತ್ತಿದ್ದಾರೆ. ಆದರೆ ಅದೇ ಸಾಗುವಳಿ ಭೂಮಿಯನ್ನು ಸಂಘ ಸಂಸ್ಥೆಗಳಿಗೆ ನೀಡಲು ಕಂದಾಯ ಸಚಿವರ ನೇತೃತ್ವದಲ್ಲಿ ಸಮಿತಿ ಮಾಡಿ ಖಾಸಗಿ ಸಂಘ ಸಂಸ್ಥೆಗಳಿಗೆ ನೀಡುತ್ತಿದ್ದಾರೆ ಈ ಭೂಗಳ್ಳ ಸರ್ಕಾರದ ವಿರುದ್ಧ ತೀವ್ರ ಹೋರಾಟಕ್ಕೆ ಅಣಿನೆರೆಸಬೇಕಿದೆ ಎಂದರು.

ವೇದಿಕೆಯಲ್ಲಿ ಅಥಿತಿಗಳಾಗಿ CITU ನ ಜಿಲ್ಲಾ ಕಾರ್ಯದರ್ಶಿ ಜಯರಾಂ, ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಕೆ.ಬಸವರಾಜ್, ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ‌್ಯ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ನೂರಾಣಿ ಜಿಲ್ಲಾ ಅಧ್ಯಕ್ಷರಾದ ಚಿಕ್ಕಣ್ಣೇಗೌಡ, ಕೆಂಪಯ್ಯ,ಚಂದ್ರಶೇಖರ್ ಮುಂತಾದವರು ಇದ್ದರು. ಇದಕ್ಕೂ ಮುಂಚೆ ರಾಮಸ್ವಾಮಿ ವೃತ್ತದಿಂದ ಬುದ್ದ ವಿಹಾರದ ವರೆಗೆ ಮೆರವಣಿಗೆ ನಡೆಸಲಾಯಿತು.

ಈ ಸಮ್ಮೇಳನದಲ್ಲಿ ನೂತನ ಜಿಲ್ಲಾ ಸಮಿತಿ ರಚಿಸಲಾಯಿತು. ಜಿಲ್ಲಾಧ್ಯಕ್ಷರಾಗಿ ಚಿಕ್ಕಣ್ಣೇಗೌಡ ಪ್ರಾಧಾನ ಕಾರ್ಯದರ್ಶಿಯಾಗಿ ಜಗದೀಶ್ ಸೂರ‌್ಯ, ಖಜಾಂಚಿಯಾಗಿ ಮರಳಯ್ಯನಕೊಪ್ಪಲು ಚಂದ್ರಶೇಖರ್ ಉ ಪಾಧ್ಯಕ್ಷರಾಗಿ ಕೆ.ಬಸವರಾಜ್,, ಕೆಂಪಯ್ಯ,ನೀರಾಣಿ,ಬಿ.ಎಂ.ಶಿವಣ್ಣ, ಸಹ ಕಾರ್ಯದರ್ಶಿಯಾಗಿ ಪುಟ್ಟರಾಜ, ಸೋಮಶೇಖರ್, ಸ್ವಾಮಿ ಮುಂದಿನ ಮೂರು ವರ್ಷದ ಅವದಿಗೆ ಆಯ್ಕೆಯಾದರು.

andolanait

Recent Posts

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

59 mins ago

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

1 hour ago

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

1 hour ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

2 hours ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

2 hours ago

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ…

2 hours ago