ಜಿಲ್ಲೆಗಳು

ರೈತ ವಿರೋಧಿ ನೀತಿಗಳ ವಿರುದ್ಧ ಸಂಘಟಿತ ಹೋರಾಟ ಅಗತ್ಯ : ನವೀನ್ ಕುಮಾರ್

ಮೈಸೂರು: ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ದ ಸಂಘಟಿತ ಹೋರಾಟಕ್ಕೆ ಕರ್ನಾಟಕ ಪಾಂತ ರೈತ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ H.R.ನವೀನ್ ಕುಮಾರ್ ಕರೆ ನೀಡಿದರು. ಕರ್ನಾಟಕ ಪ್ರಾಂತ ರೈತ ಸಂಘದ 2ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಮುಂದುವರೆದು ಕೇಂದ್ರ ಸರ್ಕಾರದ ಶ್ರೀಮಂತ ಕಾರ್ಪೋರೆಟ್ ಕಂಪನಿಗಳ ಸಾಲ ಮನ್ನ ಮಾಡುವಲ್ಲಿ ತೋರುವ ಆಸಕ್ತಿಯನ್ನು ರೈತರ ಸಾಲ ಮನ್ನಾ ಮಾಡುವಲ್ಲಿ ಆಸಕ್ತಿ ತೋರುತ್ತಿಲ್ಲ‌ಇದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ತೋರಿಸುತ್ತದೆ. ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿ ಮಾಡುತ್ತೇನೆಂದು ಹೇಳಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ರೈತರಿಗೆ ಮೋಸಮಾಡಿ ವರದಿ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಅಫಿಡೇವಿಟ್ ಸಲ್ಲಿಸಿದೆ. ಅಲ್ಲದೆ ಕಾರ್ಪೊರೇಟ್ ಕಂಪನಿಗಳಿ ಅನುಕೂಲ ಮಾಡಿಕೊಡಲು ಕರಾಳ ಕೃಷಿ ಕಾನೂನನ್ನು ತಂದಿತ್ತು ಅದನ್ನು ಧಿರಾದ್ದೋತ ಹೋರಾಟದ ಮೂಲಕ ತಡೆಹಿಡಿಯಲಾಯಿತು. ಆದರೆ ಮೋದಿ ಸರ್ಕಾರ ಪುನಃ ಕರಾಳ ಕಾಯಿದೆಯನ್ನು ತರಲು ಹುನ್ನಾರ ನಡೆಸುತ್ತಿದೆ. ಇದನ್ನು ಹಿಮ್ಮೆಟ್ಟಿಸಲು ಸಂಘಟಿತರಾಗಬೇಕು,ಅಲ್ಲದೆ ಭೂಮಿಗಾಗಿ 50-60 ವರ್ಷಗಳಿಂದ ಸಾಗುವಳಿ ಪತ್ರಕ್ಕೆ ಅರ್ಜಿ ಸಲ್ಲಿಸಿ ಹಕ್ಕು ಪತ್ರಕ್ಕೆ ಕಾಯುತ್ತಿರುವ ರೈತರಿಗೆ ಸಾಗುವಳಿ ಪತ್ರ ನೀಡದೆ,ಕಾನೂನಿನ ನೆಪ ಹೇಳಿ ಸಾಗುವಳಿ ನಿರಾಕರಿಸುತ್ತಿದ್ದಾರೆ. ಆದರೆ ಅದೇ ಸಾಗುವಳಿ ಭೂಮಿಯನ್ನು ಸಂಘ ಸಂಸ್ಥೆಗಳಿಗೆ ನೀಡಲು ಕಂದಾಯ ಸಚಿವರ ನೇತೃತ್ವದಲ್ಲಿ ಸಮಿತಿ ಮಾಡಿ ಖಾಸಗಿ ಸಂಘ ಸಂಸ್ಥೆಗಳಿಗೆ ನೀಡುತ್ತಿದ್ದಾರೆ ಈ ಭೂಗಳ್ಳ ಸರ್ಕಾರದ ವಿರುದ್ಧ ತೀವ್ರ ಹೋರಾಟಕ್ಕೆ ಅಣಿನೆರೆಸಬೇಕಿದೆ ಎಂದರು.

ವೇದಿಕೆಯಲ್ಲಿ ಅಥಿತಿಗಳಾಗಿ CITU ನ ಜಿಲ್ಲಾ ಕಾರ್ಯದರ್ಶಿ ಜಯರಾಂ, ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಕೆ.ಬಸವರಾಜ್, ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ‌್ಯ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ನೂರಾಣಿ ಜಿಲ್ಲಾ ಅಧ್ಯಕ್ಷರಾದ ಚಿಕ್ಕಣ್ಣೇಗೌಡ, ಕೆಂಪಯ್ಯ,ಚಂದ್ರಶೇಖರ್ ಮುಂತಾದವರು ಇದ್ದರು. ಇದಕ್ಕೂ ಮುಂಚೆ ರಾಮಸ್ವಾಮಿ ವೃತ್ತದಿಂದ ಬುದ್ದ ವಿಹಾರದ ವರೆಗೆ ಮೆರವಣಿಗೆ ನಡೆಸಲಾಯಿತು.

ಈ ಸಮ್ಮೇಳನದಲ್ಲಿ ನೂತನ ಜಿಲ್ಲಾ ಸಮಿತಿ ರಚಿಸಲಾಯಿತು. ಜಿಲ್ಲಾಧ್ಯಕ್ಷರಾಗಿ ಚಿಕ್ಕಣ್ಣೇಗೌಡ ಪ್ರಾಧಾನ ಕಾರ್ಯದರ್ಶಿಯಾಗಿ ಜಗದೀಶ್ ಸೂರ‌್ಯ, ಖಜಾಂಚಿಯಾಗಿ ಮರಳಯ್ಯನಕೊಪ್ಪಲು ಚಂದ್ರಶೇಖರ್ ಉ ಪಾಧ್ಯಕ್ಷರಾಗಿ ಕೆ.ಬಸವರಾಜ್,, ಕೆಂಪಯ್ಯ,ನೀರಾಣಿ,ಬಿ.ಎಂ.ಶಿವಣ್ಣ, ಸಹ ಕಾರ್ಯದರ್ಶಿಯಾಗಿ ಪುಟ್ಟರಾಜ, ಸೋಮಶೇಖರ್, ಸ್ವಾಮಿ ಮುಂದಿನ ಮೂರು ವರ್ಷದ ಅವದಿಗೆ ಆಯ್ಕೆಯಾದರು.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

4 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

5 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

5 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

5 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

7 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

8 hours ago