ಜಿಲ್ಲೆಗಳು

“ಮುಂದಿಲ್ಲ ಮೋದಿ-2024 ಅಭಿಯಾನಕ್ಕೆ ಮಾಜಿ ಶಾಸಕ ಎಂಕೆ.ಸೋಮಶೇಖರ್ ಚಾಲನೆ !

ಮೈಸೂರು :  “ಮುಂದಿಲ್ಲ ಮೋದಿ 2024″ಎಂಬ ಧ್ಯೇಯದೊಂದಿಗೆ ರಾಮಸ್ವಾಮಿ ವೃತ್ತದಲ್ಲಿ  ಹಮ್ಮಿಕೊಳ್ಳಲಾಗಿದ್ದ ಅಭಿಯಾನಕ್ಕೆ  ಮಾಜಿ ಶಾಸಕರಾದ ಎಂಕೆ.ಸೋಮಶೇಖರ್ ಚಾಲನೆ ನೀಡಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಗರದಲ್ಲಿ ನೆನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಮೈಸೂರಿನಿಂದಲೇ ಮತ್ತೊಮ್ಮೆ ಮೋದಿ-2024 ಎಂಬ ಗೋಡೆ ಬರಹಕ್ಕೆ ಚಾಲನೆ ನೀಡಲಾಯಿತು. ಈ ಮೂಲಕ ಮತ್ತೊಮ್ಮೆ ದೇಶವನ್ನು ಕೋಮು ಗಲಭೆಯ,ಆರ್ಥಿಕ ಸುಭದ್ರವಿಲ್ಲದ, ಬಡ ಮಧ್ಯಮ ಮತ್ತು ಎಲ್ಲಾ ವರ್ಗದ ವಿರೋಧಿ ನಾಯಕನನ್ನು ಬೆಂಬಲಿಸಲು ಅಭಿವೃದ್ಧಿ ಹೊರತಾಗಿ ರಾಮ ರಾಜಕೀಯ, ಧರ್ಮ ರಾಜಕೀಯ, ಭಾವನಾತ್ಮಕ ರಾಜಕೀಯದ ಮೂಲಕ ಆಡಳಿತಕ್ಕೇರುವ ಮತ್ತು ಏಕಾಧಿಪತಿ ಆಡಳಿತ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ ಎಂದರು.
ಇಂತಹ ವ್ಯಕ್ತಿ ಮತ್ತೊಮ್ಮೆ ದೇಶದ ಅಗ್ರಮಾನ್ಯ ಪದವಿಯಾದ ಪ್ರಧಾನಿ ಹುದ್ದೆಗೆ ಏರಬಾರದು,ಹಿಟ್ಲರ್ ಆಡಳಿತ ಇಲ್ಲಿಗೆ ಕೊನೆಯಾಗಲಿ ಎಂಬ ಗುರಿಯೊಂದಿಗೆ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ದೇಶದ ಪ್ರಧಾನಿ ಸರ್ವಾಧಿಕಾರಿ ಹಿಟ್ಲರ್ ಮನಸ್ಥಿತಿಯನ್ನು ಹೊಂದಿರುವಂತವರು.ಕಳೆದ ಹತ್ತು ವರ್ಷಗಳಿಂದ ಒಂದು ಮೀಡಿಯಾದ ಜೊತೆ ಆಗಲಿ ಮಾಧ್ಯಮದ ಜೊತೆಯಾಗಲಿ ಅಥವಾ ಸಾರ್ವಜನಿಕ ಸಂವಾದದಲ್ಲಿ ಭಾಗವಹಿಸಿಲ್ಲ.
ಕೇವಲ ಏಕಮುಖ ಭಾಷಣದಿಂದಲೇ ಕಾಲ ಕಳೆಯುತ್ತಿದ್ದಾರೆ. ದೇಶದಲ್ಲಿ ಹಸಿವು ಬಡತನ ನಿರುದ್ಯೋಗ ತಾಂಡವಡುತ್ತಿದೆ.ಹಸಿವಿನ ಸೂಚ್ಯಂಕದಲ್ಲಿ ಬಾಂಗ್ಲಾದೇಶಕ್ಕಿಂತಲೂ ಕಡೆಯಾಗಿದೆ.
ಈ ಹಸಿವನ್ನು ತಾಳಲಾರದೆ ನಮ್ಮ ದೇಶದ ಬಡಜನ 20,000 ಕಾರ್ಮಿಕರು ಇಲ್ಲಿ ಹಸಿವಿನಿಂದ ಸಾಯುವ ಬದಲು ಇಸ್ರೇಲಿನ ಯುದ್ಧ ಭೂಮಿಯಲ್ಲಿ ಸತ್ತರೂ ಸಾಯೋಣ ಎಂದು ಕೆಲಸವನ್ನು ಹರಸಿ 20,000 ಜನ ಭಾರತದಿಂದ ಇಸ್ರೇಲಿಗೆ ಹೊರಟಿದ್ದಾರೆ.
ಇದನ್ನು ನೋಡಿದಾಗ ದೇಶದ ಪರಿಸ್ಥಿತಿ ಏನೆಂದು ಎಲ್ಲರಿಗೂ ಅರ್ಥವಾಗುತ್ತದೆ.ಇವರು ಮೋದಿ ಮೋದಿ ಎಂದು ಭ್ರಮೆಯನ್ನ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ.ಆದರೆ ನೈಜ ಪರಿಸ್ಥಿತಿಯೇ ಬೇರೆಯಾಗಿದೆ.
ಚುನಾವಣೆ ಎಷ್ಟು ಬೇಗ ಬರುತ್ತದೆಯೋ ಮೋದಿಯವರನ್ನು ಅಧಿಕಾರದಿಂದ  ಕಿತ್ತೊಗೆಯಲು ಚುನಾವಣೆಗಾಗಿ ಜನ ತುದಿಗಾಲದಲ್ಲಿ ನಿಂತಿದ್ದಾರೆ.ಒಬ್ಬ ಪ್ರಧಾನಿಯಾದವರನ್ನ ಗೋಡೆಯಲ್ಲಿ ಬರೆದು ಜನರಿಗೆ ತೋರಿಸುವ ಕೆಲಸ ಬಿಜೆಪಿಯವರು ಮಾಡುತ್ತಿದ್ದು ಇದು ಬಿಜೆಪಿಗೆ ಬಂದಿರುವ ದುಸ್ಥಿತಿಯನ್ನು ಸೂಚಿಸುತ್ತದೆ.
ಮೋದಿ ಮತ್ತೊಮ್ಮೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ ಹೊರತು ಈ ದೇಶದ ಜನರು ಹೇಳುತ್ತಿಲ್ಲ. ಆಗಾಗೀ ನಾವು ಜನರ ಭಾವನೆಯಾದ “ಮುಂದಿಲ್ಲ ಮೋದಿ 2024″ಅಭಿಯಾನವನ್ನೂ ಮೈಸೂರಿನಿಂದಲೇ ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.
ನಂತರ ಕೆಪಿಸಿಸಿ ವಕ್ತಾರರಾದ ಹೆಚ್.ಎ ವೆಂಕಟೇಶ್ ರವರು ಮಾತನಾಡಿ ಸನ್ಮಾನ್ಯ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರ ಆಟ ನಡೆಯದು.ಸನ್ಮಾನ್ಯ ಯಡಿಯೂರಪ್ಪನವರು ಈ ನಾಡಿನ ಮುಖ್ಯಮಂತ್ರಿಗಳಾಗಿದ್ದವರು ಅಂಥವರು ಇಂತಹ ಅಭಿಯಾನ ಮಾಡುತ್ತಿರುವುದು ನಿಜಕ್ಕೂ ಅತ್ಯಂತ  ನಾಚಿಕೆಗೇಡಿನ ಸಂಗತಿ ಎಂದು ಆರೋಪಿಸಿದರು.
ಈ ದೇಶದ ಈ ರಾಜ್ಯದ ಜನರ ಮನಸ್ಸಿನಲ್ಲಿ ಮೋದಿಯವರು ಅಳಿಸಿ ಹೋಗಿದ್ದಾರೆ.ಹಾಗಾಗಿ ಬಿಜೆಪಿಯವರು ಮೋದಿಯವರ ಹೆಸರನ್ನು ಗೋಡೆ ಮೇಲೆ ಬರೆಯುವ ಮೂಲಕ ಮೋದಿಯವರನ್ನು ನೆನಪಿಸುವಂತಹ ಕೆಲಸವನ್ನು ಮಾಡುತ್ತಿದ್ದಾರೆ. ಇದು ಮೋದಿ ಅವರಿಗೆ ಬಂದಿರುವ ದು‌ಸ್ಥಿತಿಯನ್ನು ಸೂಚಿಸುತ್ತದೆ ಎಂದು ವ್ಯಂಗ್ಯವಾಡಿದರು.‌
ಈ ವೇಳೆ ಕೆಪಿಸಿಸಿ ವಕ್ತಾರರಾದ ಎಚ್.ಎ.ವೆಂಕಟೇಶ್,ಬ್ಲಾಕ್ ಅಧ್ಯಕ್ಷರುಗಳಾದ ಜಿ.ಸೋಮಶೇಖರ್,ಶ್ರೀಧರ್,ಮಾಜಿ ಮಹಾಪೌರರುಗಳಾದ ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ, ಪಾಲಿಕೆ ಸದಸ್ಯರಾದ ಜೆ.ಗೋಪಿ,ಜೋಗಿ ಮಹೇಶ್,ಮಂಜು, ವಿಜಯ್ ಕುಮಾರ್, ರವಿಶಂಕರ್, ಪರಶಿವಮೂರ್ತಿ, ಗುಣಶೇಖರ್, ವಿಶ್ವ ನಾಥ್, ರಮೇಶ್ ರಾಮಪ್ಪ,ಮಹ್ಮದ್ ಫಾರೂಖ್,ಮಧುರಾಜ್,ಇಂದಿರಾ,ಎನ್ ಎಸ್ ಯು ಐ ಅಧ್ಯಕ್ಷ ಮನೋಜ್,ವಿನಯ್, ಕುಮಾರ್, ಲೋಕೇಶ್ ಕುಮಾರ್, ನಾಗರತ್ನ ಮಂಜುನಾಥ್, ಉತ್ತನಹಳ್ಳಿ ಶಿವಣ್ಣ ಮತ್ತಿತರು ಉಪಸ್ಥಿತರಿದ್ದರು.
andolanait

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

9 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

9 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

10 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

10 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

10 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

10 hours ago