ಜಿಲ್ಲೆಗಳು

ಉಳುಮೆ ಮಾಡೋ ರೈತನ ಮೇಲೆ ಕ್ರಿಮಿನಲ್ ಕೇಸ್ ಹಾಕಬಾರದು : ಸಚಿವ ಆರ್‌ ಅಶೋಕ್‌

ಗ್ರಾಮ ವಾಸ್ತವ್ಯ ಎಂಬುದೊಂದು ಪಾಠ ಶಾಲೆ

ಮೈಸೂರು : ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುವ ರೈತನ ಮೇಲೆ ಯಾವುದೇ ಕಾರಣಕ್ಕೂ ಕ್ರಿಮಿನಲ್ ಕೇಸ್ ಹಾಕಬಾರದು ಎಂದು ಕಂದಾಯ ಸಚಿವರಾದ ಆರ್. ಅಶೋಕ ಹೇಳಿದರು
ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ತಾಲೂಕು ಆಡಳಿತ ಹೆಚ್. ಡಿ.ಕೋಟೆ ಇವರ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಹಿಂದೆ ಸರ್ಕಾರಿ ಜಮೀನಿನಲ್ಲಿ ಅಥವ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುವ ರೈತರನ್ನು ಒಂದು ರೀತಿ ಭೂ ಕಬಳಿಕೆದಾರರು ಎಂಬಂತೆ ನೋಡಲಾಗುತಿತ್ತು ಅವರುಗಳು ಮೇಲೆ ಕೇಸ್ ದಾಖಲಿಸಿ ರೈತರು ಬೇಲ್ ಗಾಗಿ ಕೋರ್ಟಿಗೆ ಅಲೆಯಬೇಕಾಗಿತ್ತು. ಈಗ ಆ ಪರಿಸ್ಥಿತಿ ಇಲ್ಲ ಎಂದರು.
ಮೈಸೂರು ಜಿಲ್ಲೆಯ 3060 ರೈತರಿಗೆ 2.55 ಕೋಟಿ ಬೆಳೆ ಹಾನಿ ಪರಿಹಾರ ನೀಡಲಾಗಿದೆ,5640 ಮನೆ ಹಾನಿ ಪ್ರಕರಣಗಳಲ್ಲಿ 45 ಕೋಟಿ ಹಾಗೂ ಕೋವಿಡ್ ನಿಂದ ಮೃತಪಟ್ಟ 3664 ಕುಟುಂಬದವರಿಗೆ 27.35 ಕೋಟಿ ಪರಿಹಾರ ವಿತರಿಸಲಾಗಿದೆ ಎಂದರು.
ವೃದ್ದಾಪ್ಯ ವೇತನ ಪಡೆಯಲು ಆಗುತಿದ್ದ ವಿಳಂಬ ತಪ್ಪಿಸಿ ದೂರವಾಣಿ ಮುಖಾಂತರ ‘ ಹಲೋ ಕಂದಾಯ ಸಚಿವರೇ ಎಂದು ಕರೆ ಮಾಡುವ ಮೂಲಕ ಕೇವಲ 72 ಗಂಟೆಯೊಳಗಾಗಿ ವೃದ್ದಾಪ್ಯ ಪಿಂಚಣಿ ಪಡೆಯಬಹುದಾಗಿದೆ ಎಂದರು. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳವರು ಮನೆ ಕಟ್ಟಲು ಭೂ ಪರಿವರ್ತನೆಗಾಗಿ ತಿಂಗಳುಗಟ್ಟಲೆ ಕಾಯಬೇಕಿಲ್ಲ,ಜಿಲ್ಲಾಧಿಕಾರಿಗಳ ಹಂತದಲ್ಲಿ ಕೇವಲ 7 ದಿನದಲ್ಲಿ ಭೂ ಪರಿವರ್ತನೆ ಆಗಲಿದೆ ಹಾಗೂ ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟುವವರಿಗೆ ಆ ಜಾಗದ ಮಾಲೀಕತ್ವವನ್ನು 94 ಸಿ ಅಡಿ ನೀಡಲಾಗುವುದು.

ಜಿಲ್ಲಾಧಿಕಾರಿಗಳು,ತಿಂಗಳಿಗೊಮ್ಮೆ ಗ್ರಾಮಗಳಿಗೆ ತೆರಳಿ ಊರಿನ ಅಂಗನವಾಡಿಯಲ್ಲಿ ಊಟ ಮಾಡಿ, ಸರ್ಕಾರಿ ಶಾಲೆಗಳಲ್ಲಿ ವಾಸ್ತವ್ಯ ಮಾಡಿ ಸ್ಥಳದಲ್ಲಿಯೇ ಗ್ರಾಮದ ಗ್ರಾಮಸ್ಥರ ಸಮಸ್ಯೆ ಬಗೆಹರಿಸಲೆಂದೇ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರೂಪಿಸಿದ್ದು ಸಮಸ್ಯೆಗಳ ಅರಿಯಲು ,ಸಮಸ್ಯೆಗಳ ಪರಿಹರಿಸುವ ಒಂದು ಪಾಠ ಶಾಲೆಯಿದ್ದಂತೆ ಈ ಗ್ರಾಮ ವಾಸ್ತವ್ಯ ಎಂದರು.

andolanait

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

9 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

9 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

9 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

9 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

10 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

10 hours ago