ಜಿಲ್ಲೆಗಳು

ಉಳುಮೆ ಮಾಡೋ ರೈತನ ಮೇಲೆ ಕ್ರಿಮಿನಲ್ ಕೇಸ್ ಹಾಕಬಾರದು : ಸಚಿವ ಆರ್‌ ಅಶೋಕ್‌

ಗ್ರಾಮ ವಾಸ್ತವ್ಯ ಎಂಬುದೊಂದು ಪಾಠ ಶಾಲೆ

ಮೈಸೂರು : ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುವ ರೈತನ ಮೇಲೆ ಯಾವುದೇ ಕಾರಣಕ್ಕೂ ಕ್ರಿಮಿನಲ್ ಕೇಸ್ ಹಾಕಬಾರದು ಎಂದು ಕಂದಾಯ ಸಚಿವರಾದ ಆರ್. ಅಶೋಕ ಹೇಳಿದರು
ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ತಾಲೂಕು ಆಡಳಿತ ಹೆಚ್. ಡಿ.ಕೋಟೆ ಇವರ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಹಿಂದೆ ಸರ್ಕಾರಿ ಜಮೀನಿನಲ್ಲಿ ಅಥವ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುವ ರೈತರನ್ನು ಒಂದು ರೀತಿ ಭೂ ಕಬಳಿಕೆದಾರರು ಎಂಬಂತೆ ನೋಡಲಾಗುತಿತ್ತು ಅವರುಗಳು ಮೇಲೆ ಕೇಸ್ ದಾಖಲಿಸಿ ರೈತರು ಬೇಲ್ ಗಾಗಿ ಕೋರ್ಟಿಗೆ ಅಲೆಯಬೇಕಾಗಿತ್ತು. ಈಗ ಆ ಪರಿಸ್ಥಿತಿ ಇಲ್ಲ ಎಂದರು.
ಮೈಸೂರು ಜಿಲ್ಲೆಯ 3060 ರೈತರಿಗೆ 2.55 ಕೋಟಿ ಬೆಳೆ ಹಾನಿ ಪರಿಹಾರ ನೀಡಲಾಗಿದೆ,5640 ಮನೆ ಹಾನಿ ಪ್ರಕರಣಗಳಲ್ಲಿ 45 ಕೋಟಿ ಹಾಗೂ ಕೋವಿಡ್ ನಿಂದ ಮೃತಪಟ್ಟ 3664 ಕುಟುಂಬದವರಿಗೆ 27.35 ಕೋಟಿ ಪರಿಹಾರ ವಿತರಿಸಲಾಗಿದೆ ಎಂದರು.
ವೃದ್ದಾಪ್ಯ ವೇತನ ಪಡೆಯಲು ಆಗುತಿದ್ದ ವಿಳಂಬ ತಪ್ಪಿಸಿ ದೂರವಾಣಿ ಮುಖಾಂತರ ‘ ಹಲೋ ಕಂದಾಯ ಸಚಿವರೇ ಎಂದು ಕರೆ ಮಾಡುವ ಮೂಲಕ ಕೇವಲ 72 ಗಂಟೆಯೊಳಗಾಗಿ ವೃದ್ದಾಪ್ಯ ಪಿಂಚಣಿ ಪಡೆಯಬಹುದಾಗಿದೆ ಎಂದರು. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳವರು ಮನೆ ಕಟ್ಟಲು ಭೂ ಪರಿವರ್ತನೆಗಾಗಿ ತಿಂಗಳುಗಟ್ಟಲೆ ಕಾಯಬೇಕಿಲ್ಲ,ಜಿಲ್ಲಾಧಿಕಾರಿಗಳ ಹಂತದಲ್ಲಿ ಕೇವಲ 7 ದಿನದಲ್ಲಿ ಭೂ ಪರಿವರ್ತನೆ ಆಗಲಿದೆ ಹಾಗೂ ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟುವವರಿಗೆ ಆ ಜಾಗದ ಮಾಲೀಕತ್ವವನ್ನು 94 ಸಿ ಅಡಿ ನೀಡಲಾಗುವುದು.

ಜಿಲ್ಲಾಧಿಕಾರಿಗಳು,ತಿಂಗಳಿಗೊಮ್ಮೆ ಗ್ರಾಮಗಳಿಗೆ ತೆರಳಿ ಊರಿನ ಅಂಗನವಾಡಿಯಲ್ಲಿ ಊಟ ಮಾಡಿ, ಸರ್ಕಾರಿ ಶಾಲೆಗಳಲ್ಲಿ ವಾಸ್ತವ್ಯ ಮಾಡಿ ಸ್ಥಳದಲ್ಲಿಯೇ ಗ್ರಾಮದ ಗ್ರಾಮಸ್ಥರ ಸಮಸ್ಯೆ ಬಗೆಹರಿಸಲೆಂದೇ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರೂಪಿಸಿದ್ದು ಸಮಸ್ಯೆಗಳ ಅರಿಯಲು ,ಸಮಸ್ಯೆಗಳ ಪರಿಹರಿಸುವ ಒಂದು ಪಾಠ ಶಾಲೆಯಿದ್ದಂತೆ ಈ ಗ್ರಾಮ ವಾಸ್ತವ್ಯ ಎಂದರು.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago