ಜಿಲ್ಲೆಗಳು

ಉಳುಮೆ ಮಾಡೋ ರೈತನ ಮೇಲೆ ಕ್ರಿಮಿನಲ್ ಕೇಸ್ ಹಾಕಬಾರದು : ಸಚಿವ ಆರ್‌ ಅಶೋಕ್‌

ಗ್ರಾಮ ವಾಸ್ತವ್ಯ ಎಂಬುದೊಂದು ಪಾಠ ಶಾಲೆ

ಮೈಸೂರು : ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುವ ರೈತನ ಮೇಲೆ ಯಾವುದೇ ಕಾರಣಕ್ಕೂ ಕ್ರಿಮಿನಲ್ ಕೇಸ್ ಹಾಕಬಾರದು ಎಂದು ಕಂದಾಯ ಸಚಿವರಾದ ಆರ್. ಅಶೋಕ ಹೇಳಿದರು
ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ತಾಲೂಕು ಆಡಳಿತ ಹೆಚ್. ಡಿ.ಕೋಟೆ ಇವರ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಹಿಂದೆ ಸರ್ಕಾರಿ ಜಮೀನಿನಲ್ಲಿ ಅಥವ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುವ ರೈತರನ್ನು ಒಂದು ರೀತಿ ಭೂ ಕಬಳಿಕೆದಾರರು ಎಂಬಂತೆ ನೋಡಲಾಗುತಿತ್ತು ಅವರುಗಳು ಮೇಲೆ ಕೇಸ್ ದಾಖಲಿಸಿ ರೈತರು ಬೇಲ್ ಗಾಗಿ ಕೋರ್ಟಿಗೆ ಅಲೆಯಬೇಕಾಗಿತ್ತು. ಈಗ ಆ ಪರಿಸ್ಥಿತಿ ಇಲ್ಲ ಎಂದರು.
ಮೈಸೂರು ಜಿಲ್ಲೆಯ 3060 ರೈತರಿಗೆ 2.55 ಕೋಟಿ ಬೆಳೆ ಹಾನಿ ಪರಿಹಾರ ನೀಡಲಾಗಿದೆ,5640 ಮನೆ ಹಾನಿ ಪ್ರಕರಣಗಳಲ್ಲಿ 45 ಕೋಟಿ ಹಾಗೂ ಕೋವಿಡ್ ನಿಂದ ಮೃತಪಟ್ಟ 3664 ಕುಟುಂಬದವರಿಗೆ 27.35 ಕೋಟಿ ಪರಿಹಾರ ವಿತರಿಸಲಾಗಿದೆ ಎಂದರು.
ವೃದ್ದಾಪ್ಯ ವೇತನ ಪಡೆಯಲು ಆಗುತಿದ್ದ ವಿಳಂಬ ತಪ್ಪಿಸಿ ದೂರವಾಣಿ ಮುಖಾಂತರ ‘ ಹಲೋ ಕಂದಾಯ ಸಚಿವರೇ ಎಂದು ಕರೆ ಮಾಡುವ ಮೂಲಕ ಕೇವಲ 72 ಗಂಟೆಯೊಳಗಾಗಿ ವೃದ್ದಾಪ್ಯ ಪಿಂಚಣಿ ಪಡೆಯಬಹುದಾಗಿದೆ ಎಂದರು. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳವರು ಮನೆ ಕಟ್ಟಲು ಭೂ ಪರಿವರ್ತನೆಗಾಗಿ ತಿಂಗಳುಗಟ್ಟಲೆ ಕಾಯಬೇಕಿಲ್ಲ,ಜಿಲ್ಲಾಧಿಕಾರಿಗಳ ಹಂತದಲ್ಲಿ ಕೇವಲ 7 ದಿನದಲ್ಲಿ ಭೂ ಪರಿವರ್ತನೆ ಆಗಲಿದೆ ಹಾಗೂ ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟುವವರಿಗೆ ಆ ಜಾಗದ ಮಾಲೀಕತ್ವವನ್ನು 94 ಸಿ ಅಡಿ ನೀಡಲಾಗುವುದು.

ಜಿಲ್ಲಾಧಿಕಾರಿಗಳು,ತಿಂಗಳಿಗೊಮ್ಮೆ ಗ್ರಾಮಗಳಿಗೆ ತೆರಳಿ ಊರಿನ ಅಂಗನವಾಡಿಯಲ್ಲಿ ಊಟ ಮಾಡಿ, ಸರ್ಕಾರಿ ಶಾಲೆಗಳಲ್ಲಿ ವಾಸ್ತವ್ಯ ಮಾಡಿ ಸ್ಥಳದಲ್ಲಿಯೇ ಗ್ರಾಮದ ಗ್ರಾಮಸ್ಥರ ಸಮಸ್ಯೆ ಬಗೆಹರಿಸಲೆಂದೇ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರೂಪಿಸಿದ್ದು ಸಮಸ್ಯೆಗಳ ಅರಿಯಲು ,ಸಮಸ್ಯೆಗಳ ಪರಿಹರಿಸುವ ಒಂದು ಪಾಠ ಶಾಲೆಯಿದ್ದಂತೆ ಈ ಗ್ರಾಮ ವಾಸ್ತವ್ಯ ಎಂದರು.

andolanait

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…

1 hour ago

ಮಹದೇಶ್ವರ ಬೆಟ್ಟ| ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ…

1 hour ago

ತಮಿಳುನಾಡಿನಲ್ಲಿ ಕನ್ನಡ ಧ್ವಜ ಹಾಕದಂತೆ ಎಚ್ಚರಿಕೆ: ಶಬರಿಮಲೆಗೆ ಹೊರಟಿದ್ದ ವಾಹನ ತಡೆದು ದಬ್ಬಾಳಿಕೆ

ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ…

2 hours ago

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತೆ: ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್‌…

2 hours ago

ಬೆಂಗಳೂರಿನಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ ಬಸ್‌

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಇಂದು…

2 hours ago

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ ಗಾಮಿನಿ ಚೀತಾ

ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್‌…

3 hours ago