ಜಿಲ್ಲೆಗಳು

ಉಳುಮೆ ಮಾಡೋ ರೈತನ ಮೇಲೆ ಕ್ರಿಮಿನಲ್ ಕೇಸ್ ಹಾಕಬಾರದು : ಸಚಿವ ಆರ್‌ ಅಶೋಕ್‌

ಗ್ರಾಮ ವಾಸ್ತವ್ಯ ಎಂಬುದೊಂದು ಪಾಠ ಶಾಲೆ

ಮೈಸೂರು : ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುವ ರೈತನ ಮೇಲೆ ಯಾವುದೇ ಕಾರಣಕ್ಕೂ ಕ್ರಿಮಿನಲ್ ಕೇಸ್ ಹಾಕಬಾರದು ಎಂದು ಕಂದಾಯ ಸಚಿವರಾದ ಆರ್. ಅಶೋಕ ಹೇಳಿದರು
ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ತಾಲೂಕು ಆಡಳಿತ ಹೆಚ್. ಡಿ.ಕೋಟೆ ಇವರ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಹಿಂದೆ ಸರ್ಕಾರಿ ಜಮೀನಿನಲ್ಲಿ ಅಥವ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುವ ರೈತರನ್ನು ಒಂದು ರೀತಿ ಭೂ ಕಬಳಿಕೆದಾರರು ಎಂಬಂತೆ ನೋಡಲಾಗುತಿತ್ತು ಅವರುಗಳು ಮೇಲೆ ಕೇಸ್ ದಾಖಲಿಸಿ ರೈತರು ಬೇಲ್ ಗಾಗಿ ಕೋರ್ಟಿಗೆ ಅಲೆಯಬೇಕಾಗಿತ್ತು. ಈಗ ಆ ಪರಿಸ್ಥಿತಿ ಇಲ್ಲ ಎಂದರು.
ಮೈಸೂರು ಜಿಲ್ಲೆಯ 3060 ರೈತರಿಗೆ 2.55 ಕೋಟಿ ಬೆಳೆ ಹಾನಿ ಪರಿಹಾರ ನೀಡಲಾಗಿದೆ,5640 ಮನೆ ಹಾನಿ ಪ್ರಕರಣಗಳಲ್ಲಿ 45 ಕೋಟಿ ಹಾಗೂ ಕೋವಿಡ್ ನಿಂದ ಮೃತಪಟ್ಟ 3664 ಕುಟುಂಬದವರಿಗೆ 27.35 ಕೋಟಿ ಪರಿಹಾರ ವಿತರಿಸಲಾಗಿದೆ ಎಂದರು.
ವೃದ್ದಾಪ್ಯ ವೇತನ ಪಡೆಯಲು ಆಗುತಿದ್ದ ವಿಳಂಬ ತಪ್ಪಿಸಿ ದೂರವಾಣಿ ಮುಖಾಂತರ ‘ ಹಲೋ ಕಂದಾಯ ಸಚಿವರೇ ಎಂದು ಕರೆ ಮಾಡುವ ಮೂಲಕ ಕೇವಲ 72 ಗಂಟೆಯೊಳಗಾಗಿ ವೃದ್ದಾಪ್ಯ ಪಿಂಚಣಿ ಪಡೆಯಬಹುದಾಗಿದೆ ಎಂದರು. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳವರು ಮನೆ ಕಟ್ಟಲು ಭೂ ಪರಿವರ್ತನೆಗಾಗಿ ತಿಂಗಳುಗಟ್ಟಲೆ ಕಾಯಬೇಕಿಲ್ಲ,ಜಿಲ್ಲಾಧಿಕಾರಿಗಳ ಹಂತದಲ್ಲಿ ಕೇವಲ 7 ದಿನದಲ್ಲಿ ಭೂ ಪರಿವರ್ತನೆ ಆಗಲಿದೆ ಹಾಗೂ ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟುವವರಿಗೆ ಆ ಜಾಗದ ಮಾಲೀಕತ್ವವನ್ನು 94 ಸಿ ಅಡಿ ನೀಡಲಾಗುವುದು.

ಜಿಲ್ಲಾಧಿಕಾರಿಗಳು,ತಿಂಗಳಿಗೊಮ್ಮೆ ಗ್ರಾಮಗಳಿಗೆ ತೆರಳಿ ಊರಿನ ಅಂಗನವಾಡಿಯಲ್ಲಿ ಊಟ ಮಾಡಿ, ಸರ್ಕಾರಿ ಶಾಲೆಗಳಲ್ಲಿ ವಾಸ್ತವ್ಯ ಮಾಡಿ ಸ್ಥಳದಲ್ಲಿಯೇ ಗ್ರಾಮದ ಗ್ರಾಮಸ್ಥರ ಸಮಸ್ಯೆ ಬಗೆಹರಿಸಲೆಂದೇ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರೂಪಿಸಿದ್ದು ಸಮಸ್ಯೆಗಳ ಅರಿಯಲು ,ಸಮಸ್ಯೆಗಳ ಪರಿಹರಿಸುವ ಒಂದು ಪಾಠ ಶಾಲೆಯಿದ್ದಂತೆ ಈ ಗ್ರಾಮ ವಾಸ್ತವ್ಯ ಎಂದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

8 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

9 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

24 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago