ಜಿಲ್ಲೆಗಳು

ಉಳುಮೆ ಮಾಡೋ ರೈತನ ಮೇಲೆ ಕ್ರಿಮಿನಲ್ ಕೇಸ್ ಹಾಕಬಾರದು : ಸಚಿವ ಆರ್‌ ಅಶೋಕ್‌

ಗ್ರಾಮ ವಾಸ್ತವ್ಯ ಎಂಬುದೊಂದು ಪಾಠ ಶಾಲೆ

ಮೈಸೂರು : ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುವ ರೈತನ ಮೇಲೆ ಯಾವುದೇ ಕಾರಣಕ್ಕೂ ಕ್ರಿಮಿನಲ್ ಕೇಸ್ ಹಾಕಬಾರದು ಎಂದು ಕಂದಾಯ ಸಚಿವರಾದ ಆರ್. ಅಶೋಕ ಹೇಳಿದರು
ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ತಾಲೂಕು ಆಡಳಿತ ಹೆಚ್. ಡಿ.ಕೋಟೆ ಇವರ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಹಿಂದೆ ಸರ್ಕಾರಿ ಜಮೀನಿನಲ್ಲಿ ಅಥವ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುವ ರೈತರನ್ನು ಒಂದು ರೀತಿ ಭೂ ಕಬಳಿಕೆದಾರರು ಎಂಬಂತೆ ನೋಡಲಾಗುತಿತ್ತು ಅವರುಗಳು ಮೇಲೆ ಕೇಸ್ ದಾಖಲಿಸಿ ರೈತರು ಬೇಲ್ ಗಾಗಿ ಕೋರ್ಟಿಗೆ ಅಲೆಯಬೇಕಾಗಿತ್ತು. ಈಗ ಆ ಪರಿಸ್ಥಿತಿ ಇಲ್ಲ ಎಂದರು.
ಮೈಸೂರು ಜಿಲ್ಲೆಯ 3060 ರೈತರಿಗೆ 2.55 ಕೋಟಿ ಬೆಳೆ ಹಾನಿ ಪರಿಹಾರ ನೀಡಲಾಗಿದೆ,5640 ಮನೆ ಹಾನಿ ಪ್ರಕರಣಗಳಲ್ಲಿ 45 ಕೋಟಿ ಹಾಗೂ ಕೋವಿಡ್ ನಿಂದ ಮೃತಪಟ್ಟ 3664 ಕುಟುಂಬದವರಿಗೆ 27.35 ಕೋಟಿ ಪರಿಹಾರ ವಿತರಿಸಲಾಗಿದೆ ಎಂದರು.
ವೃದ್ದಾಪ್ಯ ವೇತನ ಪಡೆಯಲು ಆಗುತಿದ್ದ ವಿಳಂಬ ತಪ್ಪಿಸಿ ದೂರವಾಣಿ ಮುಖಾಂತರ ‘ ಹಲೋ ಕಂದಾಯ ಸಚಿವರೇ ಎಂದು ಕರೆ ಮಾಡುವ ಮೂಲಕ ಕೇವಲ 72 ಗಂಟೆಯೊಳಗಾಗಿ ವೃದ್ದಾಪ್ಯ ಪಿಂಚಣಿ ಪಡೆಯಬಹುದಾಗಿದೆ ಎಂದರು. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳವರು ಮನೆ ಕಟ್ಟಲು ಭೂ ಪರಿವರ್ತನೆಗಾಗಿ ತಿಂಗಳುಗಟ್ಟಲೆ ಕಾಯಬೇಕಿಲ್ಲ,ಜಿಲ್ಲಾಧಿಕಾರಿಗಳ ಹಂತದಲ್ಲಿ ಕೇವಲ 7 ದಿನದಲ್ಲಿ ಭೂ ಪರಿವರ್ತನೆ ಆಗಲಿದೆ ಹಾಗೂ ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟುವವರಿಗೆ ಆ ಜಾಗದ ಮಾಲೀಕತ್ವವನ್ನು 94 ಸಿ ಅಡಿ ನೀಡಲಾಗುವುದು.

ಜಿಲ್ಲಾಧಿಕಾರಿಗಳು,ತಿಂಗಳಿಗೊಮ್ಮೆ ಗ್ರಾಮಗಳಿಗೆ ತೆರಳಿ ಊರಿನ ಅಂಗನವಾಡಿಯಲ್ಲಿ ಊಟ ಮಾಡಿ, ಸರ್ಕಾರಿ ಶಾಲೆಗಳಲ್ಲಿ ವಾಸ್ತವ್ಯ ಮಾಡಿ ಸ್ಥಳದಲ್ಲಿಯೇ ಗ್ರಾಮದ ಗ್ರಾಮಸ್ಥರ ಸಮಸ್ಯೆ ಬಗೆಹರಿಸಲೆಂದೇ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರೂಪಿಸಿದ್ದು ಸಮಸ್ಯೆಗಳ ಅರಿಯಲು ,ಸಮಸ್ಯೆಗಳ ಪರಿಹರಿಸುವ ಒಂದು ಪಾಠ ಶಾಲೆಯಿದ್ದಂತೆ ಈ ಗ್ರಾಮ ವಾಸ್ತವ್ಯ ಎಂದರು.

andolanait

Recent Posts

ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ…

7 mins ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ…

44 mins ago

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

2 hours ago

ಡಿಕೆಶಿಗೆ ಮೇ.15ರೊಳಗೆ ಸಿಗಲಿದೆ ಸಿಹಿಸುದ್ದಿ: ಕುಣಿಗಲ್‌ ಶಾಸಕ ರಂಗನಾಥ್‌ ವಿಶ್ವಾಸ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್‌ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

2 hours ago

ಹೀಟ್‌ಸ್ಟ್ರೋಕ್‌ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…

2 hours ago

ಮೈಸೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್‌ ಬ್ರಿಡ್ಜ್‌ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…

3 hours ago