ಮಳೆಯಿಂದ ತೇವಾಂಶ ಹೆಚ್ಚಾಗಿ ನೀರುಪಾಲಾಗುತ್ತಿರುವ ಭತ್ತ: ಗುಣಮಟ್ಟ ಕಳೆದುಕೊಳ್ಳುತ್ತಿರುವ ಕಾಫಿ ಬೆಳೆ
ಸೋಮವಾರಪೇಟೆ: ತಾಲೂಕಿನದ್ಯಂತ ಅಕಾಲಿಕ ಮಳೆ, ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಮಳೆಯಿಂದ ಭತ್ತ ಹಾಗೂ ಕಾಫಿ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದರೆ.
ಅಕಾಲಿಕ ಮಳೆಯು ಭತ್ತದ ಕೃಷಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ಕೊಯ್ಲು ಮಾಡಿದ ಭತ್ತವನ್ನು ಮನೆ ತುಂಬಿಸಿಕೊಳ್ಳಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗದ್ದೆಗಳಲ್ಲಿ ಕೊಯ್ಲು ಮಾಡಿದ ಫಸಲನ್ನು ಹಾಗೆಯೇ ಬಿಟ್ಟಿದ್ದು, ಮಳೆಯಿಂದ ತೇವಾಂಶ ಹೆಚ್ಚಾಗಿ ಭತ್ತ ಮಣ್ಣು ಪಾಲಾಗುತ್ತಿದೆ. ತಾಲೂಕಿನ ಶಾಂತಲ್ಲಿ ಹಾಗು ಸೋಮವಾರಪೇಟೆ ಕಸಬಾ ಹೋಬಳ್ಳಿ ವ್ಯಾಪ್ತಿಯಲ್ಲಿ ಈಗಾಗಲೇ ಕೆಲ ರೈತರು ಭತ್ತ ಕಟಾವು ಮಾಡಿದ್ದು ಅಕಾಲಿಕ ಮಳೆಗೆ ಸಿಲುಕಿಕೊಂಡಿದ್ದಾರೆ. ಒಂದೆಡೆ ಕಾಡು ಪ್ರಾಣಿಗಳ ಹಾವಳಿ ಇನ್ನೊಂದೆಡೆ ಮಳೆಯಾದರೆ ಇದು ರೈತರಲ್ಲಿ ಚಿಂತೆಗೆಡು ಮಾಡಿದೆ.
ಭತ್ತ ಹಾಗೂ ಕಾಫಿ ಎರಡು ಕೃಷಿಯು ಒಂದೇ ಬಾರಿ ಕೂಯ್ಲಿಗೆ ಬಂದಿದ್ದು ರೈತರು ಆತಂಕ ಪಡಬೇಕಾದ ಪರಿಸ್ಥಿತಿಯಲ್ಲಿದ್ದಾರೆ. ಕೊಯ್ಲು ಮಾಡಿದ ಹಣ್ಣನ್ನು ಪಲ್ಟಿಂಗ್ ಮಾಡಿಸಿ ಮನೆಯ ಅಂಗಳ ಕಣದಲ್ಲಿ ಹಾಕಲಾಗಿದೆ. ಅಲ್ಲಿಯೂ ಕಾಫಿ ಗುಣಮಟ್ಟ ಕಳೆದುಕೊಳ್ಳುತ್ತಿದೆ. ಪಾರ್ಚ್ಮೆಂಟ್ ಕಾಫಿ ಒಣಗಿಸಲು ಹಲವು ದಿನಗಳ ಬೇಕು. ಆದರೆ, ಕಳೆದ ಒಂದು ವಾರದಿಂದ ಮೋಡದ ವಾತಾವರಣ ಮುಂದುವರಿದಿದ್ದು, ಕಾಫಿ ಬೀಜ ಬಣ್ಣ ಹಾಗೂ ಗುಣಮಟ್ಟ ಕಳೆದುಕೊಳ್ಳುತ್ತಿರುವುದರಿಂದ ಬೆಳೆಗಾರರು ದೊಡ್ಡಮಟ್ಟದ ನ? ಅನುಭವಿಸುವಂತಾಗಿದೆ.
ಕಳೆದ ವ? ಅರೇಬಿಕಾ ಕಾಫಿಗೆ ಉತ್ತಮ ಬೆಲೆ ಸಿಕ್ಕಿತ್ತು. ೫೦ ಕೆ.ಜಿ. ತೂಕದ ಅರೇಬಿಕಾ ಪಾರ್ಚ್ಮೆಂಟ್ಗೆ ೧೫ ರಿಂದ ೧೬ ಸಾವಿರ ಹಾಗೂ ಅರೇಬಿಕಾ ಚೆರಿಗೆ ೫ರಿಂದ ೭ಸಾವಿರ ಸಿಕ್ಕಿತ್ತು. ಇದ್ದಕ್ಕಿದ್ದಂತೆ ತೋಟಗಳಲ್ಲಿ ಬಿಳಿಕಾಂಡಕೊರಕ ಕೀಟ ಬಾಧೆ ಹೆಚ್ಚಾಗಿ ಆರೇಬಿಕಾ ತೋಟದಲ್ಲಿ ಗಿಡಗಳು ಕಾಣೆಯಾಗುತ್ತಿದ್ದು, ಉಳಿದಿರುವ ಆರೇಬಿಕಾ ಕಾಫಿ ಆಕಾಲಿಕ ಮಳೆಯಿಂದಾಗಿ ಬೆಳೆಗಾರರ ಕೈ ಸೇರುತ್ತಿಲ್ಲ.
ಸೋಮವಾರಪೇಟೆ ವ್ಯಾಪ್ತಿಯಲ್ಲಿ ಹೆಚ್ಚು ಅರೇಬಿಕಾ ಬೆಳೆಗಾರರಿದ್ದರೂ ಕಾಫಿ ಬೀಜಗಳನ್ನು ವೈಜ್ಞಾನಿವಾಗಿ ಒಣಗಿಸುವ ಘಟಕಗಳು ಇಲ್ಲ. ಒಂದಿಬ್ಬರು ಮಾತ್ರ ಡ್ರೈಯಿಂಗ್ ಯಾರ್ಡ್ಗಳನ್ನು ನಿರ್ಮಿಸಿಕೊಂಡಿದ್ದು, ಅವರ ತೋಟದ ಕಾಫಿಗೆ ವರದಾನವಾಗಿದೆ. ಸೋಮವಾರಪೇಟೆಯ ಕನಿ? ನಾಲೈದು ಭಾಗಗಳಲ್ಲಿ ಕಾಫಿ ಒಣಗಿಸುವ ಡ್ರೈಯಿಂಗ್ ಯಾರ್ಡ್ ನಿರ್ಮಿಸಿದಲ್ಲಿ ಕೃಷಿಕರಿಗೆ ಅನುಕೂಲವಾಗಲಿದೆ.
ಏಕಸ್ವಾಮ್ಯ ಸಾಧಿಸಲು ತಯಾರು ಪರಮಾಣು ಅಣ್ವಸ್ತ್ರ ಅದಕ್ಕಾಗಿಯೇ ನಿಲ್ಲದೆ ನಡೆಯುತ್ತಿದೆ ವಾಯು, ಡ್ರೋನ್, ಕ್ಷಿಪಣಿ ದಾಳಿ ನೆತ್ತರು ಹರಿಯುತ್ತಿದೆ ಹಿಂಸೆ…
ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ !…
ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಿರ್ಗಮನ ದ್ವಾರದ ಬಳಿ ಮರವೊಂದು ಒಣಗಿ ನಿಂತಿದ್ದು, ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ. ಕ್ರಾ-ರ್ಡ್ ಹಾಲ್…
ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ…
ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ…
ಬೇಸಿಗೆಯಲ್ಲೂ ೨.೮೦ ಲಕ್ಷ ಲೀ. ಹಾಲು ಸಂಗ್ರಹ; ಚಾಮುಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು. ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಸಹಕಾರ ಹಾಲು…