ಜಿಲ್ಲೆಗಳು

ಅನ್ನದಾತನಿಗೆ ಸಂಕಷ್ಟ ತಂದೊಡ್ಡಿದ ಅಕಾಲಿಕ ಮಳೆ..!

ಮಳೆಯಿಂದ ತೇವಾಂಶ ಹೆಚ್ಚಾಗಿ ನೀರುಪಾಲಾಗುತ್ತಿರುವ ಭತ್ತ: ಗುಣಮಟ್ಟ ಕಳೆದುಕೊಳ್ಳುತ್ತಿರುವ ಕಾಫಿ ಬೆಳೆ

ಸೋಮವಾರಪೇಟೆ: ತಾಲೂಕಿನದ್ಯಂತ ಅಕಾಲಿಕ ಮಳೆ, ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಮಳೆಯಿಂದ ಭತ್ತ ಹಾಗೂ ಕಾಫಿ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದರೆ.

ಅಕಾಲಿಕ ಮಳೆಯು ಭತ್ತದ ಕೃಷಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ಕೊಯ್ಲು ಮಾಡಿದ ಭತ್ತವನ್ನು ಮನೆ ತುಂಬಿಸಿಕೊಳ್ಳಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗದ್ದೆಗಳಲ್ಲಿ ಕೊಯ್ಲು ಮಾಡಿದ ಫಸಲನ್ನು ಹಾಗೆಯೇ ಬಿಟ್ಟಿದ್ದು, ಮಳೆಯಿಂದ ತೇವಾಂಶ ಹೆಚ್ಚಾಗಿ ಭತ್ತ ಮಣ್ಣು ಪಾಲಾಗುತ್ತಿದೆ. ತಾಲೂಕಿನ ಶಾಂತಲ್ಲಿ ಹಾಗು ಸೋಮವಾರಪೇಟೆ ಕಸಬಾ ಹೋಬಳ್ಳಿ ವ್ಯಾಪ್ತಿಯಲ್ಲಿ ಈಗಾಗಲೇ ಕೆಲ ರೈತರು ಭತ್ತ ಕಟಾವು ಮಾಡಿದ್ದು ಅಕಾಲಿಕ ಮಳೆಗೆ ಸಿಲುಕಿಕೊಂಡಿದ್ದಾರೆ. ಒಂದೆಡೆ ಕಾಡು ಪ್ರಾಣಿಗಳ ಹಾವಳಿ ಇನ್ನೊಂದೆಡೆ ಮಳೆಯಾದರೆ ಇದು ರೈತರಲ್ಲಿ ಚಿಂತೆಗೆಡು ಮಾಡಿದೆ.

ಭತ್ತ ಹಾಗೂ ಕಾಫಿ ಎರಡು ಕೃಷಿಯು ಒಂದೇ ಬಾರಿ ಕೂಯ್ಲಿಗೆ ಬಂದಿದ್ದು ರೈತರು ಆತಂಕ ಪಡಬೇಕಾದ ಪರಿಸ್ಥಿತಿಯಲ್ಲಿದ್ದಾರೆ. ಕೊಯ್ಲು ಮಾಡಿದ ಹಣ್ಣನ್ನು ಪಲ್ಟಿಂಗ್ ಮಾಡಿಸಿ ಮನೆಯ ಅಂಗಳ ಕಣದಲ್ಲಿ ಹಾಕಲಾಗಿದೆ. ಅಲ್ಲಿಯೂ ಕಾಫಿ ಗುಣಮಟ್ಟ ಕಳೆದುಕೊಳ್ಳುತ್ತಿದೆ. ಪಾರ್ಚ್‌ಮೆಂಟ್ ಕಾಫಿ ಒಣಗಿಸಲು ಹಲವು ದಿನಗಳ ಬೇಕು. ಆದರೆ, ಕಳೆದ ಒಂದು ವಾರದಿಂದ ಮೋಡದ ವಾತಾವರಣ ಮುಂದುವರಿದಿದ್ದು, ಕಾಫಿ ಬೀಜ ಬಣ್ಣ ಹಾಗೂ ಗುಣಮಟ್ಟ ಕಳೆದುಕೊಳ್ಳುತ್ತಿರುವುದರಿಂದ ಬೆಳೆಗಾರರು ದೊಡ್ಡಮಟ್ಟದ ನ? ಅನುಭವಿಸುವಂತಾಗಿದೆ.

ಕಳೆದ ವ? ಅರೇಬಿಕಾ ಕಾಫಿಗೆ ಉತ್ತಮ ಬೆಲೆ ಸಿಕ್ಕಿತ್ತು. ೫೦ ಕೆ.ಜಿ. ತೂಕದ ಅರೇಬಿಕಾ ಪಾರ್ಚ್‌ಮೆಂಟ್‌ಗೆ ೧೫ ರಿಂದ ೧೬ ಸಾವಿರ ಹಾಗೂ ಅರೇಬಿಕಾ ಚೆರಿಗೆ ೫ರಿಂದ ೭ಸಾವಿರ ಸಿಕ್ಕಿತ್ತು. ಇದ್ದಕ್ಕಿದ್ದಂತೆ ತೋಟಗಳಲ್ಲಿ ಬಿಳಿಕಾಂಡಕೊರಕ ಕೀಟ ಬಾಧೆ ಹೆಚ್ಚಾಗಿ ಆರೇಬಿಕಾ ತೋಟದಲ್ಲಿ ಗಿಡಗಳು ಕಾಣೆಯಾಗುತ್ತಿದ್ದು, ಉಳಿದಿರುವ ಆರೇಬಿಕಾ ಕಾಫಿ ಆಕಾಲಿಕ ಮಳೆಯಿಂದಾಗಿ ಬೆಳೆಗಾರರ ಕೈ ಸೇರುತ್ತಿಲ್ಲ.
ಸೋಮವಾರಪೇಟೆ ವ್ಯಾಪ್ತಿಯಲ್ಲಿ ಹೆಚ್ಚು ಅರೇಬಿಕಾ ಬೆಳೆಗಾರರಿದ್ದರೂ ಕಾಫಿ ಬೀಜಗಳನ್ನು ವೈಜ್ಞಾನಿವಾಗಿ ಒಣಗಿಸುವ ಘಟಕಗಳು ಇಲ್ಲ. ಒಂದಿಬ್ಬರು ಮಾತ್ರ ಡ್ರೈಯಿಂಗ್ ಯಾರ್ಡ್‌ಗಳನ್ನು ನಿರ್ಮಿಸಿಕೊಂಡಿದ್ದು, ಅವರ ತೋಟದ ಕಾಫಿಗೆ ವರದಾನವಾಗಿದೆ. ಸೋಮವಾರಪೇಟೆಯ ಕನಿ? ನಾಲೈದು ಭಾಗಗಳಲ್ಲಿ ಕಾಫಿ ಒಣಗಿಸುವ ಡ್ರೈಯಿಂಗ್ ಯಾರ್ಡ್ ನಿರ್ಮಿಸಿದಲ್ಲಿ ಕೃಷಿಕರಿಗೆ ಅನುಕೂಲವಾಗಲಿದೆ.

andolanait

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

46 mins ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

48 mins ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

51 mins ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

53 mins ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

60 mins ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

1 hour ago