ಮೈಸೂರು: ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಬ್ಬು ಬೆಳೆಗಾರರ ತಟ್ಟೆ ಲೋಟ ಚಳವಳಿ ಮತ್ತು ಧರಣಿ ಐದನೇ ದಿನಕ್ಕೆ ಮುಂದುವರಿದಿದೆ.
ನವೆಂಬರ್ ಎಂಟರಂದು ಜಿಲ್ಲಾ ಉಸ್ತುವಾರಿ ಸಚಿವರು ಕಬ್ಬು ಬೆಳೆಗಾರರ ಜತೆ ಖುದ್ದು ಚರ್ಚೆಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರು ಮನವಿ ಮಾಡಿದ ಹೊರತಾಗಿಯೂ ಕುರುಬೂರು ಶಾಂತಕುಮಾರ್ ನೇತೃತ್ವದ ರಾಜ್ಯ ಕಬ್ಬು ಬೆಳಗಾರರ ಸಂಘ ಪ್ರತಿಭಟನೆಯನ್ನು ಕೈ ಬಿಡಲು ನಿರಾಕರಿಸಿದೆ.
ಸರಕಾರ ಹಾಗೂ ಜಿಲ್ಲಾಡಳಿತ ರೈತರನ್ನು ಕಡೆಗಣಿಸಿದೆ ಎಂದು ಆರೋಪಿಸಿದ ಬೆಳೆಗಾರರು ಎಲ್ಲ ಬೇಡಿಕೆಗಳನ್ನು ಈಡೇರಿಸಿದ ನಂತರವೇ ಪ್ರತಿಭಟನೆ ವಾಪಸ್ ಪಡೆಯುವುದಾಗಿ ಪಟ್ಟು ಹಿಡಿದರು.
ಇವರೇ ಭಿಕ್ಷುಕರ ರೀತಿ ವರ್ತಿಸುತ್ತಿರುವುದರಿಂದ ಇವರ ವಿರುದ್ಧ ತಟ್ಟೆ ಲೋಟ ಬಡಿದುಕೊಂಡು ಇವರನ್ನು ಅಣಕಿಸುವ ಚಳುವಳಿಯ ಮೂಲಕ ಕುರುಡು ಮೂಕ ಕಿವುಡು ಬಂಡ ಸರ್ಕಾರವನ್ನು ಎಚ್ಚರಿಸಲು ಚಳುವಳಿ ನಡೆಸಲಾಯಿತು
ನಾಲ್ಕನೇ ದಿನದ ಚಳುವಳಿ ನಿರತ ರೈತರ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ “”ನಾನು ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್ .ಟಿ ಸೋಮಶೇಖರ್ ಅವರ ಜೊತೆ ಮಾತನಾಡಿದ್ದು ಇದೆ 8ನೇ ತಾರೀಕು ಸಭೆ ಕರೆಯಲು ಮನವಿ ಮಾಡಿದ್ದೇನೆ. ಅಂದು ಅವರು ಬರದಿದ್ದರೆ ನಾನೇ ಸಭೆ ಮಾಡಿ ನಿಮ್ಮ ಒತ್ತಾಯಗಳನ್ನು ಸರ್ಕಾರದ ಗಮನಕ್ಕೆ ತರುವುದಾಗಿ ತರುತ್ತೇನೆʼʼ ಎಂದು ತಿಳಿಸಿ ಆಹೋ ರಾತ್ರಿ ಧರಣಿಯನ್ನು ಕೈ ಬಿಡಬೇಕೆಂದು ಮನವಿ ಮಾಡಿದರು.
ಇದಕ್ಕೆ ಒಪ್ಪದ ರೈತರು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನಮ್ಮೆಲ್ಲ ಒತ್ತಾಯಗಳನ್ನು ಈಡೇರಿಸಿದರೆ ಮಾತ್ರ ನಾವು ಅಹೋರಾತ್ರಿ ಧರಣಿ ಕೈ ಬಿಡುವುದಾಗಿ ತಿಳಿಸಿದರು.ಕಬ್ಬಿನ ಎಫ್ ಆರ್ ಪಿ ಬೆಲೆ ಅವೈಜ್ಞಾನಿಕವಾಗಿದ್ದು ಇದಕ್ಕೆ ಹೆಚ್ಚುವರಿಯಾಗಿ ಎಸ್ಎಪಿ ಬೆಲೆ ಸೇರಿಸಿ ಒಂದು ಟನ್ ಗೆ 3500 ಬೆಲೆ ನಿಗದಿಯಾಗಬೇಕು. ಈಗಾಗಲೇ ಕಾರ್ಖಾನೆಗಳು ಮುಂಗಡ ಎಂದು 2500 ನೀಡಿರುವುದು ಸರಿಯಾದ ನೀತಿಯಲ್ಲ. ಎಫ್ ಆರ್ ಪಿ 3050 ಮುಂಗಡ ನೀಡಬೇಕು. ನೈಜ ರೈತರಿಗೆ ಸಾಗುವಳಿ ಪತ್ರವನ್ನು ಕೊಡಿಸುವಂತಾಗಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜು, ಜಿಲ್ಲಾಧ್ಯಕ್ಷ ಪಿ ಸೋಮಶೇಖರ್, ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಉಪಾಧ್ಯಕ್ಷ ಕೆರೆಹುಂಡಿ ರಾಜಣ್ಣ ನಂಜನಗೂಡು ತಾಲೂಕು ಅಧ್ಯಕ್ಷ ಹಾಡ್ಯ ರವಿ, ಅಂಬಳೆ ಮಂಜುನಾಥ್, ಕೆರೆಹುಂಡಿ ಶಿವಣ್ಣ, ಚುಂಚರಾಯನಹುಂಡಿ ಮಂಜು, ಸಿದ್ದರಾಮ, ಮಲ್ಲಪ್ಪ, ಶಿವು, ಗಿರೀಶ್, ಕುಮಾರ್, ಕೂಶಣ್ಣ, ರಾಜಣ್ಣ, ರಾಜೇಶ್, ಮಾರ್ಬಳ್ಳಿ ನೀಲಕಂಠಪ್ಪ,ಹಿರೇನಂದಿ ಮಹದೇವಪ್ಪ ಮತ್ತಿತರರು ಭಾಗವಹಿಸಿದ್ದರು.
ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…
ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…
ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…
ಅಮಿತ್ ಶಾ, ಅಜಿತ್ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರದ…
ಮೂಲ : ಪೂಜ ಹರೀಶ್, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ…