ಜಿಲ್ಲೆಗಳು

ಮುಂದುವರಿದ ಕಬ್ಬು ಬೆಳೆಗಾರರ ತಟ್ಟೆ ಲೋಟ ಚಳವಳಿ

ಮೈಸೂರು: ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಬ್ಬು ಬೆಳೆಗಾರರ ತಟ್ಟೆ ಲೋಟ ಚಳವಳಿ ಮತ್ತು ಧರಣಿ ಐದನೇ ದಿನಕ್ಕೆ ಮುಂದುವರಿದಿದೆ.

ನವೆಂಬರ್‌ ಎಂಟರಂದು ಜಿಲ್ಲಾ ಉಸ್ತುವಾರಿ ಸಚಿವರು ಕಬ್ಬು ಬೆಳೆಗಾರರ ಜತೆ ಖುದ್ದು ಚರ್ಚೆಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರು ಮನವಿ ಮಾಡಿದ ಹೊರತಾಗಿಯೂ ಕುರುಬೂರು ಶಾಂತಕುಮಾರ್‌ ನೇತೃತ್ವದ ರಾಜ್ಯ ಕಬ್ಬು ಬೆಳಗಾರರ ಸಂಘ ಪ್ರತಿಭಟನೆಯನ್ನು ಕೈ ಬಿಡಲು ನಿರಾಕರಿಸಿದೆ.

ಸರಕಾರ ಹಾಗೂ ಜಿಲ್ಲಾಡಳಿತ ರೈತರನ್ನು ಕಡೆಗಣಿಸಿದೆ ಎಂದು ಆರೋಪಿಸಿದ ಬೆಳೆಗಾರರು ಎಲ್ಲ ಬೇಡಿಕೆಗಳನ್ನು ಈಡೇರಿಸಿದ ನಂತರವೇ ಪ್ರತಿಭಟನೆ ವಾಪಸ್‌ ಪಡೆಯುವುದಾಗಿ ಪಟ್ಟು ಹಿಡಿದರು.

ಇವರೇ ಭಿಕ್ಷುಕರ ರೀತಿ ವರ್ತಿಸುತ್ತಿರುವುದರಿಂದ ಇವರ ವಿರುದ್ಧ ತಟ್ಟೆ ಲೋಟ ಬಡಿದುಕೊಂಡು ಇವರನ್ನು ಅಣಕಿಸುವ ಚಳುವಳಿಯ ಮೂಲಕ ಕುರುಡು ಮೂಕ ಕಿವುಡು ಬಂಡ ಸರ್ಕಾರವನ್ನು ಎಚ್ಚರಿಸಲು ಚಳುವಳಿ ನಡೆಸಲಾಯಿತು

ನಾಲ್ಕನೇ ದಿನದ ಚಳುವಳಿ ನಿರತ ರೈತರ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ “”ನಾನು ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್ .ಟಿ ಸೋಮಶೇಖರ್ ಅವರ ಜೊತೆ ಮಾತನಾಡಿದ್ದು ಇದೆ 8ನೇ ತಾರೀಕು ಸಭೆ ಕರೆಯಲು ಮನವಿ ಮಾಡಿದ್ದೇನೆ. ಅಂದು ಅವರು ಬರದಿದ್ದರೆ ನಾನೇ ಸಭೆ ಮಾಡಿ ನಿಮ್ಮ ಒತ್ತಾಯಗಳನ್ನು ಸರ್ಕಾರದ ಗಮನಕ್ಕೆ ತರುವುದಾಗಿ ತರುತ್ತೇನೆʼʼ ಎಂದು ತಿಳಿಸಿ ಆಹೋ ರಾತ್ರಿ ಧರಣಿಯನ್ನು ಕೈ ಬಿಡಬೇಕೆಂದು ಮನವಿ ಮಾಡಿದರು.

ಇದಕ್ಕೆ ಒಪ್ಪದ ರೈತರು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನಮ್ಮೆಲ್ಲ ಒತ್ತಾಯಗಳನ್ನು ಈಡೇರಿಸಿದರೆ ಮಾತ್ರ ನಾವು ಅಹೋರಾತ್ರಿ ಧರಣಿ ಕೈ ಬಿಡುವುದಾಗಿ ತಿಳಿಸಿದರು.ಕಬ್ಬಿನ ಎಫ್ ಆರ್ ಪಿ ಬೆಲೆ ಅವೈಜ್ಞಾನಿಕವಾಗಿದ್ದು ಇದಕ್ಕೆ ಹೆಚ್ಚುವರಿಯಾಗಿ ಎಸ್ಎಪಿ ಬೆಲೆ ಸೇರಿಸಿ ಒಂದು ಟನ್‌ ಗೆ 3500 ಬೆಲೆ ನಿಗದಿಯಾಗಬೇಕು. ಈಗಾಗಲೇ ಕಾರ್ಖಾನೆಗಳು ಮುಂಗಡ ಎಂದು 2500 ನೀಡಿರುವುದು ಸರಿಯಾದ ನೀತಿಯಲ್ಲ. ಎಫ್ ಆರ್ ಪಿ 3050 ಮುಂಗಡ ನೀಡಬೇಕು. ನೈಜ ರೈತರಿಗೆ ಸಾಗುವಳಿ ಪತ್ರವನ್ನು ಕೊಡಿಸುವಂತಾಗಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜು, ಜಿಲ್ಲಾಧ್ಯಕ್ಷ ಪಿ ಸೋಮಶೇಖರ್, ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಉಪಾಧ್ಯಕ್ಷ ಕೆರೆಹುಂಡಿ ರಾಜಣ್ಣ ನಂಜನಗೂಡು ತಾಲೂಕು ಅಧ್ಯಕ್ಷ ಹಾಡ್ಯ ರವಿ, ಅಂಬಳೆ ಮಂಜುನಾಥ್, ಕೆರೆಹುಂಡಿ ಶಿವಣ್ಣ, ಚುಂಚರಾಯನಹುಂಡಿ ಮಂಜು, ಸಿದ್ದರಾಮ, ಮಲ್ಲಪ್ಪ, ಶಿವು, ಗಿರೀಶ್, ಕುಮಾರ್, ಕೂಶಣ್ಣ, ರಾಜಣ್ಣ, ರಾಜೇಶ್, ಮಾರ್ಬಳ್ಳಿ ನೀಲಕಂಠಪ್ಪ,ಹಿರೇನಂದಿ ಮಹದೇವಪ್ಪ ಮತ್ತಿತರರು ಭಾಗವಹಿಸಿದ್ದರು.

andolanait

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

3 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

3 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

3 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

4 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

4 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

5 hours ago