ಟಿ.ಜಿ.ಎಸ್.ಅವಿನಾಶ್ ವಿರಚಿತ ‘ಬೆಳಕಿನ ಬೇಸಾಯ’ ಪುಸ್ತಕ ಬಿಡುಗಡೆ
ಸಾಮ್ರಾಜ್ಯಗಳನ್ನು ಕಟ್ಟಲು ತಳಹದಿ ಹಾಕಿಕೊಟ್ಟಿರುವುದು ಕೃಷಿ. ಅದನ್ನು ಲಾಭದಾಯಕ ಮಾಡಲು ನಿಸರ್ಗದೊಂದಿಗೆ ನಡೆಯಬೇಕು. ನಿಸರ್ಗದೊಂದಿಗೆ ಅನುಸಂಧಾನ ಮಾಡಬೇಕೇ ಹೊರತು ಅದರೊಂದಿಗೆ ಯುದ್ಧಕ್ಕೆ ಇಳಿಯಬಾರದು.
-ಡಾ.ಬಂಜಗೆರೆ ಜಯಪ್ರಕಾಶ್
ಮೈಸೂರು: ದೇಶದ ಶೇ.೬೦ರಷ್ಟು ಮಂದಿ ತೊಡಗಿರುವ ಕೃಷಿ ಕ್ಷೇತ್ರ ಅವನತಿಯ ಹಾದಿಯಲ್ಲಿರುವ ಧಾರುಣತೆಯನ್ನು ಕಾಣುತ್ತಿದ್ದೇವೆ ಎಂದು ಸಾಹಿತಿ ರೂಪ ಹಾಸನ ಕಳವಳ ವ್ಯಕ್ತಪಡಿಸಿದರು.
ನಗರದ ದಿ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಅಹರ್ನಿಶಿ ಪ್ರಕಾಶನ ಹೊರತಂದಿರುವ ಟಿ.ಜಿ.ಎಸ್.ಅವಿನಾಶ್ ವಿರಚಿತ ‘ಬೆಳಕಿನ ಬೇಸಾಯ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಚಿಂತಕ ಬಂಜಗೆರೆ ಜಯಪ್ರಕಾಶ್ ಮಾತನಾಡಿ, ಕೃಷಿಯು ಸುಲಭವಲ್ಲ. ವಿಪರೀತ ತಾಳ್ಮೆ ಮತ್ತು ಶ್ರಮವನ್ನು ಬೇಡುತ್ತದೆ. ಇದಕ್ಕಾಗಿ ದೃಢ ನಿಶ್ಚಯವೂ ಇರಬೇಕಾಗುತ್ತದೆ. ನಾವು ನಿಸರ್ಗದ ಚಕ್ರವರ್ತಿಗಳೂ ಅಲ್ಲ, ಸಾಮ್ರಾಟರೂ ಅಲ್ಲ. ಅದರ ಒಂದು ಭಾಗವಷ್ಟೆ. ಅನ್ನವನ್ನು ಚಿನ್ನ ಮಾಡುವ ದುರಾಸೆ ಸಲ್ಲದು. ಪ್ರಕೃತಿಯಲ್ಲಿರುವ ಎಲ್ಲವನ್ನೂ ದೇವರೆಂದು ಭಾವಿಸಬೇಕು ಎಂದರು.
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ರೈತರು ಬಹಳ ಸಮಸ್ಯೆ ಎದುರಿಸುತ್ತಿದ್ದಾರೆ. ಅವುಗಳಿಗೆ ಪರಿಹಾರ ಒದಗಿಸುವ ಕೆಲಸ ನಡೆಯಬೇಕಿದೆ ಎಂದರು.
ಕೃಷಿ ವಿಜ್ಞಾನಿ ಪ್ರಕಾಶ್ ಕಮ್ಮರಡಿ ಮಾತನಾಡಿ, ಬೇಸಾಯದ ಮೇಲೆ ಹಲವು ವಿಷಯಗಳಲ್ಲಿ ಬೆಳಕು ಚೆಲ್ಲುವ ಕೆಲಸವನ್ನು ಬೆಳಕಿನ ಬೇಸಾಯ ಕೃತಿಯು ಮಾಡಿದೆ ಎಂದು ತಿಳಿಸಿದರು.
ಲೇಖಕ ಟಿ.ಜಿ.ಎಸ್.ಅವಿನಾಶ್, ಅಹರ್ನಿಶಿ ಪ್ರಕಾಶನದ ಅಕ್ಷತಾ ಹುಂಚದಕಟ್ಟೆ, ಪತ್ರಕರ್ತ ಡಿ.ಆರ್.ಅಶೋಕ್ ರಾಮ್, ಹಿರಿಯ ಸಾಹಿತಿ ದೇವನೂರ ಮಹಾದೇವ, ಪ್ರೊ.ಸುಮಿತ್ರಾ ಬಾಯಿ ಕಾರ್ಯಕ್ರಮದಲ್ಲಿ ಉಪಸ್ಥಿರಿದ್ದರು.
ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…