ಜಿಲ್ಲೆಗಳು

ರೈತರ ಆತ್ಮಹತ್ಯೆ ಬೇಸಾಯದ ಬದುಕಿನ ತಲ್ಲಣಗಳ ಪ್ರತಿರೂಪ : ರೂಪ ಹಾಸನ

ಟಿ.ಜಿ.ಎಸ್.ಅವಿನಾಶ್ ವಿರಚಿತ ‘ಬೆಳಕಿನ ಬೇಸಾಯ’ ಪುಸ್ತಕ ಬಿಡುಗಡೆ

ಸಾಮ್ರಾಜ್ಯಗಳನ್ನು  ಕಟ್ಟಲು ತಳಹದಿ ಹಾಕಿಕೊಟ್ಟಿರುವುದು ಕೃಷಿ. ಅದನ್ನು ಲಾಭದಾಯಕ ಮಾಡಲು ನಿಸರ್ಗದೊಂದಿಗೆ ನಡೆಯಬೇಕು. ನಿಸರ್ಗದೊಂದಿಗೆ ಅನುಸಂಧಾನ ಮಾಡಬೇಕೇ ಹೊರತು ಅದರೊಂದಿಗೆ ಯುದ್ಧಕ್ಕೆ ಇಳಿಯಬಾರದು.

-ಡಾ.ಬಂಜಗೆರೆ ಜಯಪ್ರಕಾಶ್

ಮೈಸೂರು: ದೇಶದ ಶೇ.೬೦ರಷ್ಟು ಮಂದಿ ತೊಡಗಿರುವ ಕೃಷಿ ಕ್ಷೇತ್ರ ಅವನತಿಯ ಹಾದಿಯಲ್ಲಿರುವ ಧಾರುಣತೆಯನ್ನು ಕಾಣುತ್ತಿದ್ದೇವೆ ಎಂದು ಸಾಹಿತಿ ರೂಪ ಹಾಸನ ಕಳವಳ ವ್ಯಕ್ತಪಡಿಸಿದರು.

ನಗರದ ದಿ ಇನ್‌ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಅಹರ್ನಿಶಿ ಪ್ರಕಾಶನ ಹೊರತಂದಿರುವ ಟಿ.ಜಿ.ಎಸ್.ಅವಿನಾಶ್ ವಿರಚಿತ ‘ಬೆಳಕಿನ ಬೇಸಾಯ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೃಷಿಯಲ್ಲಿ ರಚನಾತ್ಮಕ, ಕ್ರಿಯಾಶೀಲ ಹಾಗೂ ಪ್ರಕೃತಿಗೆ ಹತ್ತಿರವಾದ ಪ್ರಯೋಗಗಳನ್ನು ಇಂದು ಮಾಡಬೇಕು. ಪ್ರಕೃತಿ ಧರ್ಮವನ್ನು ಅರಿಯಬೇಕು; ಅನುಸರಿಸಬೇಕು. ನಮ್ಮೊಂದಿಗಿರುವ ಜೀವವೈವಿಧ್ಯವನ್ನೂ ತಿಳಿದುಕೊಳ್ಳಬೇಕು. ಪ್ರಾಕೃತಿಕ ಸಂರಚನೆ ಇರುವುದು ನಮಗಾಗಿ ಮಾತ್ರವೇ ಎಂದು ಭಾವಿಸಿದ್ದೇವೆ. ಆದರೆ, ಮನುಷ್ಯನು ಜೀವ ವಿಕಸನ ಪ್ರಕ್ರಿಯೆಯಲ್ಲಿ ಈಚೆಗೆ ಬಂದವರು ಎನ್ನುವುದನ್ನು ನೆನಪಿಟ್ಟುಕೊಳ್ಳಬೇಕು. ಮಕ್ಕಳಿಗೆ ಪ್ರಕೃತಿಯ ಬಗ್ಗೆ ಅರ್ಥ ಮಾಡಿಸಬೇಕು. ಇಲ್ಲದಿದ್ದರೆ ಮನುಷ್ಯ ಸಂತತಿಗೆ ಹೆಚ್ಚು ಉಳಿಗಾಲವಿಲ್ಲ ಎಂದರು.
ನಾವಿಂದು ಪರಿಸರದ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ರೈತರ ಆತ್ಮಹತ್ಯೆ ಪ್ರಕರಣಗಳು ಬೇಸಾಯದ ಬದುಕಿನ ತಲ್ಲಣಗಳ ಪ್ರತಿರೂಪವಾಗಿವೆ. ಜಾಗತಿಕ ತಾಪಮಾನ ಹಾಗೂ ಹವಾಮಾನ ವೈಪತೀತ್ಯವು ಕೃಷಿಯ ಮೇಲೆ ದೊಡ್ಡ ಪರಿಣಾಮ ಬೀರುತ್ತಿದೆ ಎಂದು ತಿಳಿಸಿದರು. ಪ್ರಕೃತಿಗೆ ಹತ್ತಿರವಾದ ನೈಸರ್ಗಿಕ ಮೂಲದ ಕೃಷಿಯನ್ನು ಬೆಂಬಲಿಸುತ್ತೇವೆ ಎಂಬುದನ್ನು ರಾಜಕೀಯ ಪಕ್ಷಗಳು ಪ್ರಣಾಳಿಕೆಯಲ್ಲಿ ತಿಳಿಸಬೇಕು. ಸಾಮುದಾಯಿಕ ಹಾಗೂ ಸಂಘಟನಾತ್ಮಕ ಕೃಷಿ ಪ್ರಜ್ಞೆ ಬೆಳೆಸಬೇಕು. ಎಲ್ಲೆಲ್ಲಿ ಸರ್ಕಾರಿ ಜಾಗ ಲಭ್ಯವಿದೆಯೋ ಅಲ್ಲಿ ‘ಬೆಳಕಿನ ಬೇಸಾಯ’ ಪ್ರಯೋಗಗಳನ್ನು ಮಾಡಬೇಕು. ಇದಕ್ಕೆ ಗ್ರಾಮ ಪಂಚಾಯಿತಿಗಳ ಮೂಲಕ ಸರ್ಕಾರ ಬೆಂಬಲ ನೀಡಬೇಕು. ಇದಕ್ಕೆ ಬೆಳಕು ತೋರುವಲ್ಲಿ ‘ಬೆಳಕಿನ ಬೇಸಾಯ’ ಕೃತಿಯು ಸಹಕಾರಿಯಾಗಿದೆ ಎಂದು ಹೇಳಿದರು.

ಚಿಂತಕ ಬಂಜಗೆರೆ ಜಯಪ್ರಕಾಶ್ ಮಾತನಾಡಿ, ಕೃಷಿಯು ಸುಲಭವಲ್ಲ. ವಿಪರೀತ ತಾಳ್ಮೆ ಮತ್ತು ಶ್ರಮವನ್ನು ಬೇಡುತ್ತದೆ. ಇದಕ್ಕಾಗಿ ದೃಢ ನಿಶ್ಚಯವೂ ಇರಬೇಕಾಗುತ್ತದೆ. ನಾವು ನಿಸರ್ಗದ ಚಕ್ರವರ್ತಿಗಳೂ ಅಲ್ಲ, ಸಾಮ್ರಾಟರೂ ಅಲ್ಲ. ಅದರ ಒಂದು ಭಾಗವಷ್ಟೆ. ಅನ್ನವನ್ನು ಚಿನ್ನ ಮಾಡುವ ದುರಾಸೆ ಸಲ್ಲದು. ಪ್ರಕೃತಿಯಲ್ಲಿರುವ ಎಲ್ಲವನ್ನೂ ದೇವರೆಂದು ಭಾವಿಸಬೇಕು ಎಂದರು.

ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ರೈತರು ಬಹಳ ಸಮಸ್ಯೆ ಎದುರಿಸುತ್ತಿದ್ದಾರೆ. ಅವುಗಳಿಗೆ ಪರಿಹಾರ ಒದಗಿಸುವ ಕೆಲಸ ನಡೆಯಬೇಕಿದೆ ಎಂದರು.

ಕೃಷಿ ವಿಜ್ಞಾನಿ ಪ್ರಕಾಶ್ ಕಮ್ಮರಡಿ ಮಾತನಾಡಿ, ಬೇಸಾಯದ ಮೇಲೆ ಹಲವು ವಿಷಯಗಳಲ್ಲಿ ಬೆಳಕು ಚೆಲ್ಲುವ ಕೆಲಸವನ್ನು ಬೆಳಕಿನ ಬೇಸಾಯ ಕೃತಿಯು ಮಾಡಿದೆ ಎಂದು ತಿಳಿಸಿದರು.

ಲೇಖಕ ಟಿ.ಜಿ.ಎಸ್.ಅವಿನಾಶ್, ಅಹರ್ನಿಶಿ ಪ್ರಕಾಶನದ ಅಕ್ಷತಾ ಹುಂಚದಕಟ್ಟೆ, ಪತ್ರಕರ್ತ ಡಿ.ಆರ್.ಅಶೋಕ್ ರಾಮ್, ಹಿರಿಯ ಸಾಹಿತಿ ದೇವನೂರ ಮಹಾದೇವ, ಪ್ರೊ.ಸುಮಿತ್ರಾ ಬಾಯಿ ಕಾರ್ಯಕ್ರಮದಲ್ಲಿ ಉಪಸ್ಥಿರಿದ್ದರು.

 

andolanait

Recent Posts

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

1 hour ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

4 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

4 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

4 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

4 hours ago

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

8 hours ago