ಟಿ.ಜಿ.ಎಸ್.ಅವಿನಾಶ್ ವಿರಚಿತ ‘ಬೆಳಕಿನ ಬೇಸಾಯ’ ಪುಸ್ತಕ ಬಿಡುಗಡೆ
ಸಾಮ್ರಾಜ್ಯಗಳನ್ನು ಕಟ್ಟಲು ತಳಹದಿ ಹಾಕಿಕೊಟ್ಟಿರುವುದು ಕೃಷಿ. ಅದನ್ನು ಲಾಭದಾಯಕ ಮಾಡಲು ನಿಸರ್ಗದೊಂದಿಗೆ ನಡೆಯಬೇಕು. ನಿಸರ್ಗದೊಂದಿಗೆ ಅನುಸಂಧಾನ ಮಾಡಬೇಕೇ ಹೊರತು ಅದರೊಂದಿಗೆ ಯುದ್ಧಕ್ಕೆ ಇಳಿಯಬಾರದು.
-ಡಾ.ಬಂಜಗೆರೆ ಜಯಪ್ರಕಾಶ್
ಮೈಸೂರು: ದೇಶದ ಶೇ.೬೦ರಷ್ಟು ಮಂದಿ ತೊಡಗಿರುವ ಕೃಷಿ ಕ್ಷೇತ್ರ ಅವನತಿಯ ಹಾದಿಯಲ್ಲಿರುವ ಧಾರುಣತೆಯನ್ನು ಕಾಣುತ್ತಿದ್ದೇವೆ ಎಂದು ಸಾಹಿತಿ ರೂಪ ಹಾಸನ ಕಳವಳ ವ್ಯಕ್ತಪಡಿಸಿದರು.
ನಗರದ ದಿ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಅಹರ್ನಿಶಿ ಪ್ರಕಾಶನ ಹೊರತಂದಿರುವ ಟಿ.ಜಿ.ಎಸ್.ಅವಿನಾಶ್ ವಿರಚಿತ ‘ಬೆಳಕಿನ ಬೇಸಾಯ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಚಿಂತಕ ಬಂಜಗೆರೆ ಜಯಪ್ರಕಾಶ್ ಮಾತನಾಡಿ, ಕೃಷಿಯು ಸುಲಭವಲ್ಲ. ವಿಪರೀತ ತಾಳ್ಮೆ ಮತ್ತು ಶ್ರಮವನ್ನು ಬೇಡುತ್ತದೆ. ಇದಕ್ಕಾಗಿ ದೃಢ ನಿಶ್ಚಯವೂ ಇರಬೇಕಾಗುತ್ತದೆ. ನಾವು ನಿಸರ್ಗದ ಚಕ್ರವರ್ತಿಗಳೂ ಅಲ್ಲ, ಸಾಮ್ರಾಟರೂ ಅಲ್ಲ. ಅದರ ಒಂದು ಭಾಗವಷ್ಟೆ. ಅನ್ನವನ್ನು ಚಿನ್ನ ಮಾಡುವ ದುರಾಸೆ ಸಲ್ಲದು. ಪ್ರಕೃತಿಯಲ್ಲಿರುವ ಎಲ್ಲವನ್ನೂ ದೇವರೆಂದು ಭಾವಿಸಬೇಕು ಎಂದರು.
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ರೈತರು ಬಹಳ ಸಮಸ್ಯೆ ಎದುರಿಸುತ್ತಿದ್ದಾರೆ. ಅವುಗಳಿಗೆ ಪರಿಹಾರ ಒದಗಿಸುವ ಕೆಲಸ ನಡೆಯಬೇಕಿದೆ ಎಂದರು.
ಕೃಷಿ ವಿಜ್ಞಾನಿ ಪ್ರಕಾಶ್ ಕಮ್ಮರಡಿ ಮಾತನಾಡಿ, ಬೇಸಾಯದ ಮೇಲೆ ಹಲವು ವಿಷಯಗಳಲ್ಲಿ ಬೆಳಕು ಚೆಲ್ಲುವ ಕೆಲಸವನ್ನು ಬೆಳಕಿನ ಬೇಸಾಯ ಕೃತಿಯು ಮಾಡಿದೆ ಎಂದು ತಿಳಿಸಿದರು.
ಲೇಖಕ ಟಿ.ಜಿ.ಎಸ್.ಅವಿನಾಶ್, ಅಹರ್ನಿಶಿ ಪ್ರಕಾಶನದ ಅಕ್ಷತಾ ಹುಂಚದಕಟ್ಟೆ, ಪತ್ರಕರ್ತ ಡಿ.ಆರ್.ಅಶೋಕ್ ರಾಮ್, ಹಿರಿಯ ಸಾಹಿತಿ ದೇವನೂರ ಮಹಾದೇವ, ಪ್ರೊ.ಸುಮಿತ್ರಾ ಬಾಯಿ ಕಾರ್ಯಕ್ರಮದಲ್ಲಿ ಉಪಸ್ಥಿರಿದ್ದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…