ಟಿ.ಜಿ.ಎಸ್.ಅವಿನಾಶ್ ವಿರಚಿತ ‘ಬೆಳಕಿನ ಬೇಸಾಯ’ ಪುಸ್ತಕ ಬಿಡುಗಡೆ
ಸಾಮ್ರಾಜ್ಯಗಳನ್ನು ಕಟ್ಟಲು ತಳಹದಿ ಹಾಕಿಕೊಟ್ಟಿರುವುದು ಕೃಷಿ. ಅದನ್ನು ಲಾಭದಾಯಕ ಮಾಡಲು ನಿಸರ್ಗದೊಂದಿಗೆ ನಡೆಯಬೇಕು. ನಿಸರ್ಗದೊಂದಿಗೆ ಅನುಸಂಧಾನ ಮಾಡಬೇಕೇ ಹೊರತು ಅದರೊಂದಿಗೆ ಯುದ್ಧಕ್ಕೆ ಇಳಿಯಬಾರದು.
-ಡಾ.ಬಂಜಗೆರೆ ಜಯಪ್ರಕಾಶ್
ಮೈಸೂರು: ದೇಶದ ಶೇ.೬೦ರಷ್ಟು ಮಂದಿ ತೊಡಗಿರುವ ಕೃಷಿ ಕ್ಷೇತ್ರ ಅವನತಿಯ ಹಾದಿಯಲ್ಲಿರುವ ಧಾರುಣತೆಯನ್ನು ಕಾಣುತ್ತಿದ್ದೇವೆ ಎಂದು ಸಾಹಿತಿ ರೂಪ ಹಾಸನ ಕಳವಳ ವ್ಯಕ್ತಪಡಿಸಿದರು.
ನಗರದ ದಿ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಅಹರ್ನಿಶಿ ಪ್ರಕಾಶನ ಹೊರತಂದಿರುವ ಟಿ.ಜಿ.ಎಸ್.ಅವಿನಾಶ್ ವಿರಚಿತ ‘ಬೆಳಕಿನ ಬೇಸಾಯ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಚಿಂತಕ ಬಂಜಗೆರೆ ಜಯಪ್ರಕಾಶ್ ಮಾತನಾಡಿ, ಕೃಷಿಯು ಸುಲಭವಲ್ಲ. ವಿಪರೀತ ತಾಳ್ಮೆ ಮತ್ತು ಶ್ರಮವನ್ನು ಬೇಡುತ್ತದೆ. ಇದಕ್ಕಾಗಿ ದೃಢ ನಿಶ್ಚಯವೂ ಇರಬೇಕಾಗುತ್ತದೆ. ನಾವು ನಿಸರ್ಗದ ಚಕ್ರವರ್ತಿಗಳೂ ಅಲ್ಲ, ಸಾಮ್ರಾಟರೂ ಅಲ್ಲ. ಅದರ ಒಂದು ಭಾಗವಷ್ಟೆ. ಅನ್ನವನ್ನು ಚಿನ್ನ ಮಾಡುವ ದುರಾಸೆ ಸಲ್ಲದು. ಪ್ರಕೃತಿಯಲ್ಲಿರುವ ಎಲ್ಲವನ್ನೂ ದೇವರೆಂದು ಭಾವಿಸಬೇಕು ಎಂದರು.
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ರೈತರು ಬಹಳ ಸಮಸ್ಯೆ ಎದುರಿಸುತ್ತಿದ್ದಾರೆ. ಅವುಗಳಿಗೆ ಪರಿಹಾರ ಒದಗಿಸುವ ಕೆಲಸ ನಡೆಯಬೇಕಿದೆ ಎಂದರು.
ಕೃಷಿ ವಿಜ್ಞಾನಿ ಪ್ರಕಾಶ್ ಕಮ್ಮರಡಿ ಮಾತನಾಡಿ, ಬೇಸಾಯದ ಮೇಲೆ ಹಲವು ವಿಷಯಗಳಲ್ಲಿ ಬೆಳಕು ಚೆಲ್ಲುವ ಕೆಲಸವನ್ನು ಬೆಳಕಿನ ಬೇಸಾಯ ಕೃತಿಯು ಮಾಡಿದೆ ಎಂದು ತಿಳಿಸಿದರು.
ಲೇಖಕ ಟಿ.ಜಿ.ಎಸ್.ಅವಿನಾಶ್, ಅಹರ್ನಿಶಿ ಪ್ರಕಾಶನದ ಅಕ್ಷತಾ ಹುಂಚದಕಟ್ಟೆ, ಪತ್ರಕರ್ತ ಡಿ.ಆರ್.ಅಶೋಕ್ ರಾಮ್, ಹಿರಿಯ ಸಾಹಿತಿ ದೇವನೂರ ಮಹಾದೇವ, ಪ್ರೊ.ಸುಮಿತ್ರಾ ಬಾಯಿ ಕಾರ್ಯಕ್ರಮದಲ್ಲಿ ಉಪಸ್ಥಿರಿದ್ದರು.
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…
ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…
ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…