ಜಿಲ್ಲೆಗಳು

ಬೇಡಿಕೆ ಈಡೇರಿಕೆ ಒತ್ತಾಯಿಸಿ ರಾಜ್ಯ ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಹನೂರು : ಮಲೆ ಮಹದೇಶ್ವರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಘೋಷಣೆ ಮಾಡುವ ಮೊದಲು ಬೆಟ್ಟದ ತಪ್ಪಲಿನ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮಲೆ ಮಾದೇಶ್ವರ ಬೆಟ್ಟದ ದೇವಾಲಯದ ಮುಂಭಾಗದಿಂದ ಹೊರಟ ಪ್ರತಿಭಟನೆ ಮೆರವಣಿಗೆ ಕೊಳ್ಳೇಗಾಲ ಮುಖ್ಯರಸ್ತೆಯ ಚೆಕ್ ಪೋಸ್ಟ್ ಸಮೀಪ ಜಮಾವಣೆಗೊಂಡು ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು.

ಸರ್ಕಾರ ಮಲೆ ಮಾದೇಶ್ವರ ವನ್ಯ ಧಾಮವನ್ನು ಹುಲಿ ಸಂರಕ್ಷಣಾ ಪ್ರದೇಶವಾಗಿ ಘೋಷಿಸುವ ಮೊದಲು ತಪ್ಪಲಿನ ಹಾಡಿಗಳಲ್ಲಿ ಕುಡಿಯುವ ನೀರು,ರಸ್ತೆ, ವಿದ್ಯುತ್, ಸಾರಿಗೆ ಸೇರಿದಂತೆ ಹತ್ತಾರು ಸಮಸ್ಯೆಗಳನ್ನು ಬಗೆಹರಿಸಬೇಕು. ಕಾನೂನು ಅಡಿಯಲ್ಲಿ ಬದುಕಲು ಎಲ್ಲ ರೀತಿಯ ಅವಕಾಶಗಳು ಸಿಗುವಂತೆ ಕಾನೂನು ಅಡಿಯಲ್ಲಿ ಲಿಖಿತ ಮೂಲಕ ಸರ್ಕಾರದಿಂದ ನಡವಳಿ ರೂಪಿಸಬೇಕು ಎಂದರು.

ಬೆಟ್ಟದ ತಪ್ಪಲಿನ ಹತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ವಿದ್ಯುತ್ ಇಲ್ಲದ ಪರಿಣಾಮ ಸೋಲಾರ್ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ನಿರ್ವಹಣೆ ಮಾಡಬೇಕಾದ ಕಂಪನಿಗಳು ಸರಿಯಾಗಿ ನಿರ್ವಹಣೆ ಮಾಡದ ಹಿನ್ನೆಲೆ ಪದೇ ಪದೇ ಸಮಸ್ಯೆ ಕಾಡುತ್ತಿರುವುದರಿಂದ ಕಗ್ಗತ್ತಿನಲ್ಲಿ ಜನ ಕಾಲ ಕಳೆಯುವಂತಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಸಭೆಗೆ ಸೋಲಾರ್ ಪರಿಕರಗಳನ್ನು ಹಿಂದಿರುಗಿಸಿ ಪ್ರತಿಭಟನೆ ನಡೆಸಲಾಗುವುದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಾದೇಶ್ವರ ಬೆಟ್ಟದಲ್ಲಿ ಆರೋಗ್ಯ ಸೇವೆ ಸಿಗದ ಪರಿಣಾಮ ನೆರೆಯ ತಮಿಳುನಾಡಿಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕಾಗಿದೆ ಕಳೆದ ಎರಡು ವರ್ಷಗಳ ಹಿಂದೆ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುವ ಭರವಸೆ ನೀಡಿದ್ದರು. ಇದುವರೆಗೂ ಕಾರ್ಯರೂಪಕ್ಕೆ ಬಂದಿಲ್ಲ ಈ ಕೂಡಲೇ ಸಂಬಂಧಪಟ್ಟ ಆರೋಗ್ಯ ಸಚಿವರು ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.


ಹೊನ್ನೂರು ಬಸವಣ್ಣ ಮಾತನಾಡಿ ಚೆಂಗಡಿ ಗ್ರಾಮ ಸ್ಥಳಾಂತರ ಮಾಡುವ ಯೋಜನೆ ನೆನೆಗುದ್ದಿಗೆ ಬಿದ್ದಿದೆ. ಅರಣ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಮುಖ್ಯಮಂತ್ರಿಗಳಿಗೂ ಮನವಿ ನೀಡಿದ್ದರು ಇದುವರೆಗೂ ಸ್ಥಳಾಂತರ ಪೂರ್ಣಗೊಂಡಿಲ್ಲ. ಮಲೆಮಹದೇಶ್ವರ ಡಿ ಸಿ ಎಫ್ ಸಂತೋಷ್ ಕುಮಾರ್ ರವರಿಗೆ ಕಾಡಿನ ಬಗ್ಗೆ ಅರಿವೇ ಇಲ್ಲ, ಸ್ಥಳಾಂತರದ ಬಗ್ಗೆ ಅವರಿಗೂ ಸಹ ಮನವರಿಕೆ ಮಾಡಿದ್ದರು ಇದುವರೆಗೂ ಸ್ಪಂದಿಸಿಲ್ಲ ಅವರು ಕೇವಲ ದುಡ್ಡು ಮಾಡಲು ಬಂದಿದ್ದಾರೆ. ಮುಂದಿನ ತಿಂಗಳು ಮುಖ್ಯಮಂತ್ರಿಗಳು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಗೋ ಬ್ಯಾಕ್ ಸಿಎಂ ಅಭಿಯಾನ ಪ್ರಾರಂಭ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಎಸಿಎಫ್ ನಂದಕುಮಾರ್ ಮಾತನಾಡಿ ನಿಮ್ಮ ಬೇಡಿಕೆಗಳನ್ನು ಹಿರಿಯ ಅಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಭರವಸೆ ನೀಡಿದರು. ಡಿಎಚ್ಒ ಡಾ. ವಿಶ್ವೇಶ್ವರಯ್ಯ ಮಾತನಾಡಿ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡಲು 13 ಕೋಟಿ ವೆಚ್ಚದಲ್ಲಿ ಕ್ರಿಯೆ ಯೋಜನೆ ರೂಪಿಸಲಾಗಿದ್ದು ಮುಖ್ಯಮಂತ್ರಿಗಳು ಮುಂದಿನ ತಿಂಗಳು ಭೂಮಿ ಪೂಜೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ತಾಲೂಕು ಅಧ್ಯಕ್ಷ ಅಂಗಡಿ ಕರಿಯಪ್ಪ, ಶಾಂತಕುಮಾರ್, ಬೇಡ ಕೆಂಪಣ್ಣ ಸಮುದಾಯದ ಹಿರಿಯ ಮುಖಂಡ ಕೆವಿ ಮಾದೇಶ್, ರೈತ ಸಂಘಟನೆಯ ಮಹದೇವಸ್ವಾಮಿ ನಾಗ ಕೆಂಪಯ್ಯ ಮಂಜುನಾಥ್ ಸೇರಿದಂತೆ ಪಾಲ್ಗೊಂಡಿದ್ದರು.

andolanait

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

10 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

10 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

11 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

11 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

12 hours ago