ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಸಮಾರಂಭ
ಮೈಸೂರು: ಸೆಸ್ಕ್ನಿಂದ 2.91 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಿರುವ ಕೆ.ಆರ್.ಪೇಟೆ ಉಪ ವಿಭಾಗ ಕಚೇರಿ, 1.96 ಕೋಟಿ ರೂ. ವೆಚ್ಚದ ಎಚ್.ಡಿ.ಕೋಟೆ ಉಪ ವಿಭಾಗ ಕಚೇರಿ, 1.99 ಕೋಟಿ ರೂ. ವೆಚ್ಚದ ಪಿರಿಯಾಪಟ್ಟಣ ಉಪ ವಿಭಾಗ ಕಚೇರಿ, 1.98 ಕೋಟಿ ರೂ. ವೆಚ್ಚದ ಗುಂಡ್ಲುಪೇಟೆ ಉಪ ವಿಭಾಗ ಕಚೇರಿ, 71 ಲಕ್ಷ ರೂ. ವೆಚ್ಚದ ಎಚ್.ಡಿ.ಕೋಟೆ ಹಾಗೂ 92 ಲಕ್ಷ ವೆಚ್ಚದ ಕಣಕಟ್ಟೆ ಶಾಖಾ ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಜ.20ರಂದು ನೆರವೇರಲಿದೆ ಎಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಟಿಸಿಎಲ್ ವತಿಯಿಂದ ವರಕೋಡು(ವರುಣ)ವಿನಲ್ಲಿ 10.02 ಕೋಟಿ ರೂ. ವೆಚ್ಚದಲ್ಲಿ 6611 ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ಶಂಕುಸ್ಥಾಪನೆ, 13.12 ಕೋಟಿ ರೂ. ವೆಚ್ಚದಲ್ಲಿ ಉದ್ಭೂರು (ಡಿ.ಸಾಲುಂಡಿ) ಉಪ ಕೇಂದ್ರ, 11.54 ಕೋಟಿ ರೂ. ವೆಚ್ಚದಲ್ಲಿ ರತ್ನಪುರಿ ಉಪ ಕೇಂದ್ರ, 10.45 ಕೋಟಿ ವೆಚ್ಚದಲ್ಲಿ ಮಾರಗೌಡನಹಳ್ಳಿ (ಮಾವತ್ತೂರು) ಉಪಕೇಂದ್ರ, 13.29 ಕೋಟಿ ರೂ. ವೆಚ್ಚದಲ್ಲಿ ಸುಂಕಾತೊಣ್ಣೂರು (ಹಳೇಬೀಡು) ಉಪಕೇಂದ್ರ, 8.16 ಕೋಟಿ ರೂ. ವೆಚ್ಚದ ಈಚಲುಗುಡ್ಡ ಕಾವಲ್ ಉಪಕೇಂದ್ರ, 12.59 ಕೋಟಿ ರೂ. ವೆಚ್ಚದ ಬೀರುವಳ್ಳಿ ಉಪಕೇಂದ್ರ, 6.59 ಕೊಟಿ ರೂ. ವೆಚ್ಚದಲ್ಲಿ ಧನಗೂರು ಉಪ ಕೇಂದ್ರಗಳಿಗೆ ಶಂಕುಸ್ಥಾಪನೆ ಸೇರಿದಂತೆ ಒಟ್ಟಾರೆ 116.77 ಕೋಟಿ ರೂ. ವೆಚ್ಚದ ಸಿವಿಲ್ ಮತ್ತು ವಿದ್ಯುತ್ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಲಿದೆ ಎಂದರು.
ಶುಕ್ರವಾರ ಬೆಳಿಗ್ಗೆ 11.30ಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಉಪಸ್ಥಿತಿಯಲ್ಲಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ ಇಂಧನ ಸಚಿವ ವಿ.ಸುನಿಲ್ಕುಮಾರ್ ಅವರು ಕಾಮಗಾರಿಗಳನ್ನು ಉದ್ಘಾಟಿಸಿದರೆ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಸಚಿವರುಗಳಾದ ವಿ.ಸೋಮಣ್ಣ, ಕೆ.ಗೋಪಾಲಯ್ಯ, ಬಿ.ಸಿ.ನಾಗೇಶ್, ಕೆ.ಸಿ.ನಾರಾಯಣ ಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ, ಶಾಸಕ ಸಿ.ಎಸ್.ನಿರಂಜನ ಕುಮಾರ್, ಮಹಾಪೌರ ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಸೆಸ್ಕ್ ವ್ಯಾಪ್ತಿಯ ಐದು ಜಿಲ್ಲೆಗಳ ಚುನಾಯಿತ ಜನ ಪ್ರತಿನಿಧಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ವಿದ್ಯುತ್ ಬಿಲ್ ಪಾವತಿಗಾಗಿ ಸೆಸ್ಕ್ನಿಂದ ಆನ್ಲೈನ್, ಬಾರ್ಕೋಡ್ ಪಾವತಿ ವ್ಯವಸ್ಥೆ ಜತೆಗೆ ಜನವರಿ 1ರಿಂದ ಕ್ಯೂ ಆರ್ ಕೋಡ್ ವ್ಯವಸ್ಥೆಯನ್ನೂ ಜಾರಿಗೆ ತರಲಾಗಿದೆ. ಕಳೆದ 15 ದಿನಗಳಲ್ಲಿ ಶೇ.5ರಿಂದ 10ರಷ್ಟು ಗ್ರಾಹಕರು ಮಾತ್ರ ಈ ವ್ಯವಸ್ಥೆಯನ್ನು ಬಳಸಿಕೊಳ್ಳುತ್ತಿದ್ದು, ಮೂರ್ನಾಲ್ಕು ತಿಂಗಳಲ್ಲಿ ಈ ಸಂಖ್ಯೆ ಹೆಚ್ಚುವ ನಿರೀಕ್ಷೆ ಇದೆ.
-ಜಯವಿಭವ ಸ್ವಾಮಿ, ಎಂಡಿ, ಸೆಸ್ಕ್
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…