ಜಿಲ್ಲೆಗಳು

ನಾಳೆ ಸೆಸ್ಕ್ ಉಪ ವಿಭಾಗ ಕಚೇರಿಗಳ ಶಂಕು ಸ್ಥಾಪನೆ

ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಸಮಾರಂಭ

ಮೈಸೂರು: ಸೆಸ್ಕ್‌ನಿಂದ 2.91 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಿರುವ ಕೆ.ಆರ್.ಪೇಟೆ ಉಪ ವಿಭಾಗ ಕಚೇರಿ, 1.96 ಕೋಟಿ ರೂ. ವೆಚ್ಚದ ಎಚ್.ಡಿ.ಕೋಟೆ ಉಪ ವಿಭಾಗ ಕಚೇರಿ, 1.99 ಕೋಟಿ ರೂ. ವೆಚ್ಚದ ಪಿರಿಯಾಪಟ್ಟಣ ಉಪ ವಿಭಾಗ ಕಚೇರಿ, 1.98 ಕೋಟಿ ರೂ. ವೆಚ್ಚದ ಗುಂಡ್ಲುಪೇಟೆ ಉಪ ವಿಭಾಗ ಕಚೇರಿ, 71 ಲಕ್ಷ ರೂ. ವೆಚ್ಚದ ಎಚ್.ಡಿ.ಕೋಟೆ ಹಾಗೂ 92 ಲಕ್ಷ ವೆಚ್ಚದ ಕಣಕಟ್ಟೆ ಶಾಖಾ ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಜ.20ರಂದು ನೆರವೇರಲಿದೆ ಎಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಟಿಸಿಎಲ್ ವತಿಯಿಂದ ವರಕೋಡು(ವರುಣ)ವಿನಲ್ಲಿ 10.02 ಕೋಟಿ ರೂ. ವೆಚ್ಚದಲ್ಲಿ 6611 ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ಶಂಕುಸ್ಥಾಪನೆ, 13.12 ಕೋಟಿ ರೂ. ವೆಚ್ಚದಲ್ಲಿ ಉದ್ಭೂರು (ಡಿ.ಸಾಲುಂಡಿ) ಉಪ ಕೇಂದ್ರ, 11.54 ಕೋಟಿ ರೂ. ವೆಚ್ಚದಲ್ಲಿ ರತ್ನಪುರಿ ಉಪ ಕೇಂದ್ರ, 10.45 ಕೋಟಿ ವೆಚ್ಚದಲ್ಲಿ ಮಾರಗೌಡನಹಳ್ಳಿ (ಮಾವತ್ತೂರು) ಉಪಕೇಂದ್ರ, 13.29 ಕೋಟಿ ರೂ. ವೆಚ್ಚದಲ್ಲಿ ಸುಂಕಾತೊಣ್ಣೂರು (ಹಳೇಬೀಡು) ಉಪಕೇಂದ್ರ, 8.16 ಕೋಟಿ ರೂ. ವೆಚ್ಚದ ಈಚಲುಗುಡ್ಡ ಕಾವಲ್ ಉಪಕೇಂದ್ರ, 12.59 ಕೋಟಿ ರೂ. ವೆಚ್ಚದ ಬೀರುವಳ್ಳಿ ಉಪಕೇಂದ್ರ, 6.59 ಕೊಟಿ ರೂ. ವೆಚ್ಚದಲ್ಲಿ ಧನಗೂರು ಉಪ ಕೇಂದ್ರಗಳಿಗೆ ಶಂಕುಸ್ಥಾಪನೆ ಸೇರಿದಂತೆ ಒಟ್ಟಾರೆ 116.77 ಕೋಟಿ ರೂ. ವೆಚ್ಚದ ಸಿವಿಲ್ ಮತ್ತು ವಿದ್ಯುತ್ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಲಿದೆ ಎಂದರು.

ಶುಕ್ರವಾರ ಬೆಳಿಗ್ಗೆ 11.30ಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಉಪಸ್ಥಿತಿಯಲ್ಲಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ ಇಂಧನ ಸಚಿವ ವಿ.ಸುನಿಲ್‌ಕುಮಾರ್ ಅವರು ಕಾಮಗಾರಿಗಳನ್ನು ಉದ್ಘಾಟಿಸಿದರೆ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಸಚಿವರುಗಳಾದ ವಿ.ಸೋಮಣ್ಣ, ಕೆ.ಗೋಪಾಲಯ್ಯ, ಬಿ.ಸಿ.ನಾಗೇಶ್, ಕೆ.ಸಿ.ನಾರಾಯಣ ಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ, ಶಾಸಕ ಸಿ.ಎಸ್.ನಿರಂಜನ ಕುಮಾರ್, ಮಹಾಪೌರ ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಸೆಸ್ಕ್ ವ್ಯಾಪ್ತಿಯ ಐದು ಜಿಲ್ಲೆಗಳ ಚುನಾಯಿತ ಜನ ಪ್ರತಿನಿಧಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.


ವಿದ್ಯುತ್ ಬಿಲ್ ಪಾವತಿಗಾಗಿ ಸೆಸ್ಕ್‌ನಿಂದ ಆನ್‌ಲೈನ್, ಬಾರ್‌ಕೋಡ್ ಪಾವತಿ ವ್ಯವಸ್ಥೆ ಜತೆಗೆ ಜನವರಿ 1ರಿಂದ ಕ್ಯೂ ಆರ್ ಕೋಡ್ ವ್ಯವಸ್ಥೆಯನ್ನೂ ಜಾರಿಗೆ ತರಲಾಗಿದೆ. ಕಳೆದ 15 ದಿನಗಳಲ್ಲಿ ಶೇ.5ರಿಂದ 10ರಷ್ಟು ಗ್ರಾಹಕರು ಮಾತ್ರ ಈ ವ್ಯವಸ್ಥೆಯನ್ನು ಬಳಸಿಕೊಳ್ಳುತ್ತಿದ್ದು, ಮೂರ್ನಾಲ್ಕು ತಿಂಗಳಲ್ಲಿ ಈ ಸಂಖ್ಯೆ ಹೆಚ್ಚುವ ನಿರೀಕ್ಷೆ ಇದೆ.

-ಜಯವಿಭವ ಸ್ವಾಮಿ, ಎಂಡಿ, ಸೆಸ್ಕ್

andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

3 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

5 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

6 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

7 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

9 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

10 hours ago