ಮಂಡ್ಯ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮೇಲುಕೋಟೆಯಲ್ಲಿ ಭಾರಿ ಗಾತ್ರದ ಮರದ ಕೊಂಬೆಯೊಂದು ಮುರಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಶನಿವಾರ ವರದಿಯಾಗಿದೆ.
ಮೇಲುಕೋಟೆಯ ಶ್ರೀ ಯೋಗಾನರಸಿಂಹ ಸ್ವಾಮಿ ದರ್ಶನಕ್ಕೆ ಬೆಟ್ಟ ಹತ್ತುವಾಗ ಈ ದುರ್ಘಟನೆ ನಡೆದಿದೆ. ಇದರಿಂದ ಸಾರ್ವಜನಿಕರು, ಪ್ರವಾಸಿಗರು ಆಘಾತಕ್ಕೀಡಾಗಿದ್ದಾರೆ.
ನಂಜನಗೂಡು ವಿದ್ಯಾರ್ಥಿಗಳಾದ ನಿಶಾಂತ್ ನಾಯಕ್, ವರುಣ್ ಮತ್ತು ಯೋಗೇಶ್ ಹಾಗೂ ಶಿಕ್ಷಕ ಕೇಶವರಾವ್ ಗಾಯಗೊಂಡವರಾಗಿದ್ದಾರೆ. ಇವರು ನಂಜನ ಗೂಡಿನ ಲಯನ್ಸ್ ಶಾಲೆ ವಿದ್ಯಾರ್ಥಿಗಳಾಗಿದ್ದು, ಶನಿವಾರ ಮೇಲುಕೋಟೆ ಪ್ರವಾಸಕ್ಕೆ ಬಂದಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮರ ಒಣಗಿದ್ದ ಹಿನ್ನೆಲೆಯಲ್ಲಿ ಕೊಂಬೆ ಕೆಳಗೆ ಬಿದ್ದಿದೆ. ಮಕ್ಕಳು ಬೆಟ್ಟ ಹತ್ತುವಾಗಲೇ ಏಕಾ ಏಕಿ ಮುರಿದು ವಿದ್ಯಾರ್ಥಿಗಳ ಮೇಲೆ ಬಿದ್ದಿದೆ.
ಗಾಯಗೊಂಡ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಮೇಲುಕೋಟೆ ಸರ್ಕಾರಿ ಆಸ್ವತ್ರೆುಂಲ್ಲಿ ಚಿಕಿತ್ಸೆ ನೀಡಲಾಗಿದೆ. ಒಬ್ಬ ವಿದ್ಯಾರ್ಥಿಯ ಕಾಲಿಗೆ ತೀವ್ರವಾದ ಪೆಟ್ಟು ಬಿದ್ದಿದ್ದು, ಮತ್ತಿಬ್ಬರಿಗೆ ತಲೆ ಹಾಗೂ ಕಣ್ಣಿನ ಭಾಗಕ್ಕೆ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್ಎಸ್ ಆಸ್ವತ್ರೆಗೆ ಕರೆದೊಯ್ಯಲಾಗಿದೆ.
ಪ್ರವಾಸಿತಾಣ ಮೇಲುಕೋಟೆಯ ಸರ್ಕಾರಿ ಆಸ್ವತ್ರೆಯಲ್ಲಿ ಆಂಬ್ಯುಲೆನ್ಸ್ ಇದ್ದರೂ, ಚಾಲಕನಿಲ್ಲದೆ ಗಾಯಾಳುಗಳನ್ನು ಕರೆದೊಯ್ಯಲು ಪರದಾಡಬೇಕಾಯಿತು. ಒಂದು ಗಂಟೆ ಬಳಿಕ ಪಾಂಡವಪುರದಿಂದ ಬಂದ ಆಂಬ್ಯುಲೆನ್ಸ್ನಲ್ಲಿ ಗಾಯಾಳುಗಳನ್ನು ಮೈಸೂರಿಗೆ ಕಳುಹಿಸಲಾಯಿತು.
ವಿಷಯ ತಿಳಿದ ನಂಜನಗೂಡು ಲಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್.ಆರ್.ಕೃಷ್ಣಪ್ಪಗೌಡ ತಕ್ಷಣ ಸ್ಥಳಕ್ಕೆ ಧಾವಿಸಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು.
ಟೆಹ್ರಾನ್ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…
ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…
ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್ಗೆ ಲಿಫ್ಟ್…
ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…
ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…
ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…