ಜಿಲ್ಲೆಗಳು

ದಕ್ಷಿಣ ಭಾರತದ ಸ್ವಾತಂತ್ರ್ಯ ಹೋರಾಟಗಾರರ ಕಡೆಗಣನೆಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಸರ

ಚಾಮರಾಜನಗರ: ಇತಿಹಾಸಕಾರರು ಉತ್ತರ ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಮಾತ್ರ ಬಿಂಬಿಸಿ ದಕ್ಷಿಣ ಭಾರತದವರನ್ನು ಆಯಾ ಪ್ರಾಂತ್ಯಕ್ಕೆ ಸೀಮಿತಗೊಳಿಸಿದ್ದಾರೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
ನಗರದ ಡಾ.ರಾಜಕುಮಾರ್ ಕಲಾ ಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಬ್ರಿಟಿಷರ ವಿರುದ್ದ ಹೋರಾಡಿದ ಝಾನ್ಸಿ ರಾಣಿಲಕ್ಮಿ ಬಾಯಿ ಅವರನ್ನು ದೇಶದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ಎಂದು ಇತಿಹಾಸದಲ್ಲಿ ಬಿಂಬಿಸಲಾಗಿದೆ. ಆದರೆ, ಇವರಿಗೂ ಮೊದಲು ಕಿತ್ತೂರಿನ ರಾಣಿ ಚೆನ್ನಮ್ಮ ಬ್ರಿಟಿಷರನ್ನು ಸೋಲಿಸಿದ್ದರು. ಹಾಗೆಯೇ ದಕ್ಷಿಣ ಭಾರತದ ಇನ್ನು ಹಲವು ನಾಯಕರು ಸ್ವಾತಂತ್ರ್ಯ  ಹೋರಾಟ ನಡೆಸಿದ್ದಾರೆ. ಅವರನ್ನೆಲ್ಲ ಇತಿಹಾಸಕಾರರು ಕಡೆಗಣಿಸಿದ್ದಾರೆ ಎಂದರು.
ಉತ್ತರ ಕರ್ನಾಟಕದ ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಆಯಾಯ ಪ್ರದೇಶಕ್ಕೆ ಸೀಮಿತ ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ ಅವರನ್ನು ಸ್ವಾತಂತ್ರ್ಯ ಹೋರಾಟಗಾರರು ಎಂದು ಇತಿಹಾಸಕಾರರು ಎಂದು ಬಿಂಬಿಸಲಿಲ್ಲ. ಕನ್ನಡಿಗರ ಅಭಿಮಾನ ಶೂನ್ಯತೆಯಿಂದ ನಿರ್ಲಕ್ಷ್ಯಕ್ಕೆ ಒಳಗಾಗಬೇಕಾಯಿತು ಎಂದು ಹೇಳಿದರು.

andolanait

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

31 mins ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

33 mins ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

35 mins ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

38 mins ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

44 mins ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

48 mins ago