ಜಿಲ್ಲೆಗಳು

ಫ್ರೆಸೆನಿಯಸ್ ವೈದ್ಯಕೀಯ ಆರೈಕೆ ಡಯಾಲಿಸಿಸ್ ಯಂತ್ರ ಅಳವಡಿಕೆ

ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಡಯಾಲಿಸಿಸ್ ಸೇವೆ ಉನ್ನತೀಕರಣ

ಮೈಸೂರು: ನಗರದ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫ್ರೆಸೆನಿಯಸ್ ವೈದ್ಯಕೀಯ ಆರೈಕೆ ಡಯಾಲಿಸಿಸ್ ಯಂತ್ರವನ್ನು ಅಳವಡಿಸುವ ಮೂಲಕ ಡಯಾಲಿಸಿಸ್ ಸೇವೆಯನ್ನು ಉನ್ನತೀಕರಿಸಿದೆ.

ಫ್ರೆಸೆನಿಯಸ್ ವೈದ್ಯಕೀಯ ಆರೈಕೆ ಡಯಾಲಿಸಿಸ್ ಯಂತ್ರವು ವಿಶ್ವದ ಅತ್ಯಂತ ವಿಶ್ವಾಸಾರ್ಹ ಡಯಾಲಿಸಿಸ್ ಯಂತ್ರವಾಗಿದ್ದು, ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನೆಫ್ರಾಲಜಿ ವಿಭಾಗಕ್ಕೆ ಈ ೫ ಯಂತ್ರಗಳ ಸೇರ್ಪಡೆಯು ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಮತ್ತು ಸುರಕ್ಷತೆಯಲ್ಲಿ ನಿರಂತರ ಸುಧಾರಣೆಯ ಹಾದಿಗೆ ಸಾಕ್ಷಿಯಾಗಿದೆ.

ತೀವ್ರ ನಿಗಾ ಘಟಕದಲ್ಲಿ ಮೂತ್ರಪಿಂಡ ವೈಫಲ್ಯದ ರೋಗಿಗಳಿಗೆ ನೀಡುವ ಡಾಂಲಿಸಿಸ್ ಚಿಕಿತ್ಸೆಯಲ್ಲಿ ಸಸ್ಟ್ತ್ಯೆನ್ಡ್ ಲೊ-ಎಫಿಷಿಯನ್ಸಿ ಡಯಾಲಿಸಿಸ್  ಜನಪ್ರಿಯವಾಗುತ್ತಿರುವ ಚಿಕಿತ್ಸ ವಿಧಾನವಾಗಿದೆ. ಸಸ್ಟ್ತ್ಯೆನ್ಡ್ ಲೊ-ಎಫಿಷಿಯನ್ಸಿ ಡಯಾಲಿಸಿಸ್ ಸಾಂಪ್ರದಾಯಿಕ ಇಂಟರ್ಮಿಟೆಂಟ್ ಹಿಮೋ ಡಯಾಲಿಸಿಸ್  ಮತ್ತು ಕಂಟಿನ್ಯೂಸ್ ರೆನಲ್ ರಿಪ್ಲೇಸೆಮೆಂಟ್ ಥೆರಪಿ ನಡುವಿನ ಮಧ್ಯಂತರ ಹೈಬ್ರಿಡ್ ಡಯಾಲಿಸಿಸ್ ವಿಧಾನವಾಗಿದೆ.

ಸ್ಲೆಡ್ ಚಿಕಿತ್ಸಾ ವಿಧಾನದ ಪ್ರಯೋಜನಗಳೆಂದರೆ ಸಣ್ಣ ದ್ರಾವಣಗಳ ಸಮರ್ಥ ತೆರವು, ಉತ್ತಮ ಹಿಮೋಡೈನಾಮಿಕ್ ಸಹಿಷ್ಣುತೆ. ರೋಗಿಗಳಿಗೆ ಸುಲಭವಾಗಿ ಹೊಂದಿಕೊಳ್ಳುವ ಈ ವಿಧಾನದಿಂದ ರೋಗಿಗಳು ಆಸ್ಪತ್ರೆಯಲ್ಲಿ ಕಳೆಯಬೇಕಾದ ಸಾಮ್ಯ ಹಾಗೂ ಚಿಕಿತ್ಸೆಗೆ ತಗಲುವ ವೆಚ್ಚ ಎರಡೂ ಕಡಿಮೆಯಾಗಲಿವೆ.

ಉಚಿತ ಸಾರಿಗೆ ಸೌಲಭ್ಯ: ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಯಾಲಿಸಿಸ್ ಮಾಡಿಸಿಕೊಳ್ಳುವ ರೋಗಿಗಳಿಗೆ ಉಚಿತ ಸಾರಿಗೆ ಸೇವೆಗಳನ್ನು ಒದಗಿಸುತ್ತಿದೆ. ಈ ಉಚಿತ ಸೇವೆಯು ತುಂಬಾ ಉಪಯುಕ್ತ ವಾಗಿದೆ. ಏಕೆಂದರೆ ಡಯಾಲಿಸಿಸ್‌ಗೆ ಒಳಗಾಗುವ ರೋಗಿಗಳು ದುರ್ಬಲರಾಗುತ್ತಾರೆ ಮತ್ತು ಕಾರ್ಯ ವಿಧಾನದ ನಂತರ ಸ್ನಾಯು ಸೆಳೆತ, ಬಿಪಿ ಏರಿಳಿತಗಳು ಮತ್ತು ಮುಂತಾದವುಗಳನ್ನು ಅನುಭವಿಸುತ್ತಾರೆ. ಸಾರಿಗೆಯನ್ನು ಹುಡುಕುವ ಯಾವುದೇ ಒತ್ತಡವಿಲ್ಲದೆ ರೋಗಿಗಳು ಮನೆಗೆ ತೆರಳಿ ಚೇತರಿಸಿಕೊಳ್ಳಬಹುದಾಗಿದೆ. ಡಯಾಲಿಸಿಸ್ ರೋಗಿಗಳು ಸಹಾಯವಾಣಿ ಸಂಖ್ಯೆ: 8884458893  ಕರೆ ಮಾಡುವ ಮೂಲಕ ಈ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ.

andolana

Recent Posts

‌ಗುಂಡ್ಲುಪೇಟೆ | ಬಾಳೆ ತೋಟದಲ್ಲಿ ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…

1 min ago

ವನ್ಯಜೀವಿ ಛಾಯಾಗ್ರಹಕರಾಗುವ ಮೊದಲು ಕಾಡಿನ ಭಾಷೆ ಅರಿಯಿರಿ : ಕೃಪಾಕರ್‌ ಸೇನಾನಿ

ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…

4 mins ago

ಶಾಲಾ ಮಕ್ಕಳಿಂದ ಹೆರಿಟೇಜ್‌ ಫ್ಲ್ಯಾಶ್‌ಮೊಬ್‌ ಪ್ರದರ್ಶನ : ಮನಗೆದ್ದ ಹೆರಿಟೇಜ್ ಟ್ರೆಷರ್ ಹಂಟ್

ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…

24 mins ago

ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ

ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…

1 hour ago

ರಾಜ್ಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಗೊಂದಲ ಸೃಷ್ಟಿ ಮಾಡಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌…

2 hours ago

ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…

2 hours ago