ಜಿಲ್ಲೆಗಳು

ಫ್ರೆಸೆನಿಯಸ್ ವೈದ್ಯಕೀಯ ಆರೈಕೆ ಡಯಾಲಿಸಿಸ್ ಯಂತ್ರ ಅಳವಡಿಕೆ

ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಡಯಾಲಿಸಿಸ್ ಸೇವೆ ಉನ್ನತೀಕರಣ

ಮೈಸೂರು: ನಗರದ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫ್ರೆಸೆನಿಯಸ್ ವೈದ್ಯಕೀಯ ಆರೈಕೆ ಡಯಾಲಿಸಿಸ್ ಯಂತ್ರವನ್ನು ಅಳವಡಿಸುವ ಮೂಲಕ ಡಯಾಲಿಸಿಸ್ ಸೇವೆಯನ್ನು ಉನ್ನತೀಕರಿಸಿದೆ.

ಫ್ರೆಸೆನಿಯಸ್ ವೈದ್ಯಕೀಯ ಆರೈಕೆ ಡಯಾಲಿಸಿಸ್ ಯಂತ್ರವು ವಿಶ್ವದ ಅತ್ಯಂತ ವಿಶ್ವಾಸಾರ್ಹ ಡಯಾಲಿಸಿಸ್ ಯಂತ್ರವಾಗಿದ್ದು, ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನೆಫ್ರಾಲಜಿ ವಿಭಾಗಕ್ಕೆ ಈ ೫ ಯಂತ್ರಗಳ ಸೇರ್ಪಡೆಯು ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಮತ್ತು ಸುರಕ್ಷತೆಯಲ್ಲಿ ನಿರಂತರ ಸುಧಾರಣೆಯ ಹಾದಿಗೆ ಸಾಕ್ಷಿಯಾಗಿದೆ.

ತೀವ್ರ ನಿಗಾ ಘಟಕದಲ್ಲಿ ಮೂತ್ರಪಿಂಡ ವೈಫಲ್ಯದ ರೋಗಿಗಳಿಗೆ ನೀಡುವ ಡಾಂಲಿಸಿಸ್ ಚಿಕಿತ್ಸೆಯಲ್ಲಿ ಸಸ್ಟ್ತ್ಯೆನ್ಡ್ ಲೊ-ಎಫಿಷಿಯನ್ಸಿ ಡಯಾಲಿಸಿಸ್  ಜನಪ್ರಿಯವಾಗುತ್ತಿರುವ ಚಿಕಿತ್ಸ ವಿಧಾನವಾಗಿದೆ. ಸಸ್ಟ್ತ್ಯೆನ್ಡ್ ಲೊ-ಎಫಿಷಿಯನ್ಸಿ ಡಯಾಲಿಸಿಸ್ ಸಾಂಪ್ರದಾಯಿಕ ಇಂಟರ್ಮಿಟೆಂಟ್ ಹಿಮೋ ಡಯಾಲಿಸಿಸ್  ಮತ್ತು ಕಂಟಿನ್ಯೂಸ್ ರೆನಲ್ ರಿಪ್ಲೇಸೆಮೆಂಟ್ ಥೆರಪಿ ನಡುವಿನ ಮಧ್ಯಂತರ ಹೈಬ್ರಿಡ್ ಡಯಾಲಿಸಿಸ್ ವಿಧಾನವಾಗಿದೆ.

ಸ್ಲೆಡ್ ಚಿಕಿತ್ಸಾ ವಿಧಾನದ ಪ್ರಯೋಜನಗಳೆಂದರೆ ಸಣ್ಣ ದ್ರಾವಣಗಳ ಸಮರ್ಥ ತೆರವು, ಉತ್ತಮ ಹಿಮೋಡೈನಾಮಿಕ್ ಸಹಿಷ್ಣುತೆ. ರೋಗಿಗಳಿಗೆ ಸುಲಭವಾಗಿ ಹೊಂದಿಕೊಳ್ಳುವ ಈ ವಿಧಾನದಿಂದ ರೋಗಿಗಳು ಆಸ್ಪತ್ರೆಯಲ್ಲಿ ಕಳೆಯಬೇಕಾದ ಸಾಮ್ಯ ಹಾಗೂ ಚಿಕಿತ್ಸೆಗೆ ತಗಲುವ ವೆಚ್ಚ ಎರಡೂ ಕಡಿಮೆಯಾಗಲಿವೆ.

ಉಚಿತ ಸಾರಿಗೆ ಸೌಲಭ್ಯ: ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಯಾಲಿಸಿಸ್ ಮಾಡಿಸಿಕೊಳ್ಳುವ ರೋಗಿಗಳಿಗೆ ಉಚಿತ ಸಾರಿಗೆ ಸೇವೆಗಳನ್ನು ಒದಗಿಸುತ್ತಿದೆ. ಈ ಉಚಿತ ಸೇವೆಯು ತುಂಬಾ ಉಪಯುಕ್ತ ವಾಗಿದೆ. ಏಕೆಂದರೆ ಡಯಾಲಿಸಿಸ್‌ಗೆ ಒಳಗಾಗುವ ರೋಗಿಗಳು ದುರ್ಬಲರಾಗುತ್ತಾರೆ ಮತ್ತು ಕಾರ್ಯ ವಿಧಾನದ ನಂತರ ಸ್ನಾಯು ಸೆಳೆತ, ಬಿಪಿ ಏರಿಳಿತಗಳು ಮತ್ತು ಮುಂತಾದವುಗಳನ್ನು ಅನುಭವಿಸುತ್ತಾರೆ. ಸಾರಿಗೆಯನ್ನು ಹುಡುಕುವ ಯಾವುದೇ ಒತ್ತಡವಿಲ್ಲದೆ ರೋಗಿಗಳು ಮನೆಗೆ ತೆರಳಿ ಚೇತರಿಸಿಕೊಳ್ಳಬಹುದಾಗಿದೆ. ಡಯಾಲಿಸಿಸ್ ರೋಗಿಗಳು ಸಹಾಯವಾಣಿ ಸಂಖ್ಯೆ: 8884458893  ಕರೆ ಮಾಡುವ ಮೂಲಕ ಈ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ.

andolana

Recent Posts

ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…

21 mins ago

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…

30 mins ago

ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ದುರಂತ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್‌

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago

ಹಾಸನ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ: ಎಕರೆಗಟ್ಟಲೇ ಬಾಳೆ ಬೆಳೆ ನಾಶ

ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…

2 hours ago

ಗಂಡು ಮಗುವಿಗೆ ಜನ್ಮ ನೀಡಿದ ಡಾಲಿ ಧನಂಜಯ್ ಪತ್ನಿ ಧನ್ಯತಾ

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್‌…

3 hours ago

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

7 hours ago