ಮೈಸೂರು: ಪ್ರಕೃತಿ ಆಹಾರ ಬಳಗವು ಇನ್ನು ಮುಂದೆ ಪ್ರತಿ ವಾರಾಂತ್ಯದಲ್ಲಿ ಖಾದಿ ನೂಲನ್ನು ತೆಗೆಯುವ ಕಾರ್ಯಾಗಾರವನ್ನು ಪ್ರಾರಂಭಿಸುತ್ತಿದ್ದು, ನ.೫, ೬ರಂದು ‘ಬನ್ನಿ ನೂಲುವ!’ ಎಂಬ ವಾರಾಂತ್ಯದ ಚರಕ ಕಾರ್ಯಾಗಾರವನ್ನು ಆಯೋಜಿಸಿದೆ.
ಚಾಮರಾಜಪುರಂನ ಕೃಷ್ಣರಾಜ ಬುಲೇವಾರ್ಡ್ ರಸ್ತೆಯಲ್ಲಿರುವ ಪ್ರಕೃತಿ ಫುಡ್ನಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ. ೧೪೦೦ ರೂ. ಪ್ರವೇಶ ಶುಲ್ಕವಿದ್ದು, ಮೊದಲ ೧೫ ಜನರಿಗೆ ಮಾತ್ರ ಪ್ರವೇಶ ಇರಲಿದೆ. ಖಾದಿ ನೂಲನ್ನು ತೆಗೆಯುವುದು ಒಂದು ಕಲೆಯಾಗಿದೆ. ಪೆಟ್ಟಿಗೆ ಚರಕವನ್ನು ಬಳಸಿ ನೂಲುವುದನ್ನು ಕಲಿಸಿಕೊಡಲಾಗುವುದು. ಒಟ್ಟು ೮ ಗಂಟೆಗಳ ಕಾಲ (೨ ದಿನ ತಲಾ ೪ ಗಂಟೆಯ ಹಾಗೆ) ತರಬೇತಿ ನೀಡಲಾಗುವುದು. ಕೆ.ಜೆ.ಸಚ್ಚು, ಮತ್ತು ಅಭಿಲಾಷ್ ತರಬೇತಿ ನೀಡುವರು. ೧೦ ವರ್ಷ ಮೇಲ್ಪಟ್ಟವರು ಕಾರ್ಯಾಗಾರದಲ್ಲಿ ಭಾಗವಹಿಸಬಹುದು. ಎರಡು ದಿನವು ಊಟದ ವ್ಯವಸ್ಥೆ ಇರುತ್ತದೆ. ಕಾರ್ಯಾಗಾರದಲ್ಲಿ ಸುಸ್ಥಿರ ಬದಿಕಿನ ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಸಂವಾದ ಇರುತ್ತದೆ. ನೋಂದಣಿಗೆ ಮೊ.ಸಂ.೯೦೦೮೪೮೪೮೮೦ ಸಂಪರ್ಕಿಸಬಹುದು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…