ಮೈಸೂರು: ಪ್ರಕೃತಿ ಆಹಾರ ಬಳಗವು ಇನ್ನು ಮುಂದೆ ಪ್ರತಿ ವಾರಾಂತ್ಯದಲ್ಲಿ ಖಾದಿ ನೂಲನ್ನು ತೆಗೆಯುವ ಕಾರ್ಯಾಗಾರವನ್ನು ಪ್ರಾರಂಭಿಸುತ್ತಿದ್ದು, ನ.೫, ೬ರಂದು ‘ಬನ್ನಿ ನೂಲುವ!’ ಎಂಬ ವಾರಾಂತ್ಯದ ಚರಕ ಕಾರ್ಯಾಗಾರವನ್ನು ಆಯೋಜಿಸಿದೆ.
ಚಾಮರಾಜಪುರಂನ ಕೃಷ್ಣರಾಜ ಬುಲೇವಾರ್ಡ್ ರಸ್ತೆಯಲ್ಲಿರುವ ಪ್ರಕೃತಿ ಫುಡ್ನಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ. ೧೪೦೦ ರೂ. ಪ್ರವೇಶ ಶುಲ್ಕವಿದ್ದು, ಮೊದಲ ೧೫ ಜನರಿಗೆ ಮಾತ್ರ ಪ್ರವೇಶ ಇರಲಿದೆ. ಖಾದಿ ನೂಲನ್ನು ತೆಗೆಯುವುದು ಒಂದು ಕಲೆಯಾಗಿದೆ. ಪೆಟ್ಟಿಗೆ ಚರಕವನ್ನು ಬಳಸಿ ನೂಲುವುದನ್ನು ಕಲಿಸಿಕೊಡಲಾಗುವುದು. ಒಟ್ಟು ೮ ಗಂಟೆಗಳ ಕಾಲ (೨ ದಿನ ತಲಾ ೪ ಗಂಟೆಯ ಹಾಗೆ) ತರಬೇತಿ ನೀಡಲಾಗುವುದು. ಕೆ.ಜೆ.ಸಚ್ಚು, ಮತ್ತು ಅಭಿಲಾಷ್ ತರಬೇತಿ ನೀಡುವರು. ೧೦ ವರ್ಷ ಮೇಲ್ಪಟ್ಟವರು ಕಾರ್ಯಾಗಾರದಲ್ಲಿ ಭಾಗವಹಿಸಬಹುದು. ಎರಡು ದಿನವು ಊಟದ ವ್ಯವಸ್ಥೆ ಇರುತ್ತದೆ. ಕಾರ್ಯಾಗಾರದಲ್ಲಿ ಸುಸ್ಥಿರ ಬದಿಕಿನ ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಸಂವಾದ ಇರುತ್ತದೆ. ನೋಂದಣಿಗೆ ಮೊ.ಸಂ.೯೦೦೮೪೮೪೮೮೦ ಸಂಪರ್ಕಿಸಬಹುದು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…