ಮೈಸೂರು: ರಾಮನಗರ ಜಿಲ್ಲೆ ಹಾರೋಹಳ್ಳಿಯ ಅರ್ಧ ನಾರೀಶ್ವರ ಕಲಾಭಿವೃದ್ಧಿ ಟ್ರಸ್ಟ್ ವತಿಯಿಂದ ಡಿ.6ರಿಂದ ಡಿ.೧೧ರವರೆಗೆ ನಗರದ ಪುರಭವನದಲ್ಲಿ ನಾಟಕ ಪ್ರದರ್ಶನ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷರಾದ ಸ್ವಪ್ನ ನಾಗರಾಜ್ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.6ರಂದು ರೇಣುಕಾಚಾರ್ಯ ಗುರುಮೂರ್ತಿ ತಂಡದಿಂದ ಕುರುಕ್ಷೇತ್ರ, ಡಿ.7ರಂದು ಪಂಡಿತ್ ರಾಜಶೇಖರ ತಂಡದಿಂದ ದಕ್ಷಯಜ್ಞ, ಡಿ.8ರಂದು ಡಾ.ಟಿ.ಎಲ್.ರಮೇಶ್ ತಂಡದಿಂದ ಶ್ರೀಕೃಷ್ಣ ಸಂಧಾನ ಮತ್ತು ಡಿ.೯ರಂದು ಮೂರ್ತಿ ತಂಡದಿಂದ ದಕ್ಷಯಜ್ಞ, ಡಿ.11ರಂದು ನಂದೀಶ್ ಮತ್ತು ತಂಡದಿಂದ ಭಕ್ತ ಪ್ರಹ್ಲಾದ ನಾಟಕ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
ನಮ್ಮ ತಂಡ ಲೈಂಗಿಕ ಅಲ್ಪಸಂಖ್ಯಾತರ ತಂಡವಾಗಿದೆ. ಭಿಕ್ಷಾಟನೆ ಸರಿಯಲ್ಲವೆಂದು ನಾಟಕ ಪ್ರದರ್ಶನ ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಾಟಕ ಪ್ರದರ್ಶನಕ್ಕೆ ನೀಡುವ ಸಹಾಯಧನವನ್ನು ನಾಟಕ ಪ್ರದರ್ಶನದ ನಂತರ ನೀಡುವ ನಿಯಮ ಸರಿಯಲ್ಲ. ಮೊದಲಿನಂತಯೇ ನಾಟಕ ಪ್ರದರ್ಶನಕ್ಕೂ ಮೊದಲೇ ಸಹಾಯಧನ ನೀಡಬೇಕೆಂದು ಮನವಿ ಮಾಡಿದರು. ಮಹೇಶ್ವರಿ ಪಟೇಲ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…