ಜಿಲ್ಲೆಗಳು

ನಾಳೆಯಿಂದ ರಾಷ್ಟ್ರೀಯ ಔಷಧ ಸಪ್ತಾಹ ಆಚರಣೆ

ಮೈಸೂರು: ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ, ಜೆಎಸ್‌ಎಸ್ ಔಷಧ ವಿಜ್ಞಾನ ಮಹಾವಿದ್ಯಾಲಯ, ರಾಷ್ಟ್ರೀಯ ಔಷಧ ವಿಜ್ಞಾನ ಸಂಘದ ಜಿಲ್ಲಾ ಶಾಖೆ ಸಹಯೋಗದಲ್ಲಿ ನ.೧೪ರಿಂದ ೧೯ರವರೆಗೆ ರಾಷ್ಟ್ರೀಯ ಔಷಧ ಸಪ್ತಾಹ, ಉಚಿತ ಆರೋಗ್ಯ ತಪಾಸಣಾ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು  ಹಮ್ಮಿಕೊಳ್ಳಲಾಗಿದೆ ಎಂದು ಔಷಧ ತಜ್ಞ ಡಾ.ಕೆ.ಎನ್.ಕೃಷ್ಣ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.೧೪ರಂದು ಜೆಎಸ್‌ಎಸ್ ಔಷಧ ವಿಜ್ಞಾನ ಮಹಾವಿದ್ಯಾಲುಂದ ರಾಜೇಂದ್ರ ಸಭಾಂಗಣದಲ್ಲಿ ಸಂಸದ ವಿ.ಶ್ರೀನಿವಾಸಪ್ರಸಾದ್ ಕಾರ್ಯಕ್ರಮ ಉದ್ಘಾಟಿಸುವರು. ಮಣಿಪಾಲ್ ಆಸ್ಪತ್ರೆ ವೈದ್ಯಕೀಯ ಸೇವೆಗಳ ಮುಖ್ಯಸ್ಥ ಡಾ.ಉಪೇಂದ್ರ ಶೆಣೈ ಮುಂತಾದವರು ಪಾಲ್ಗೊಳ್ಳುವರು ಎಂದು ಹೇಳಿದರು.
ನ.೧೫ರಂದು ಬೆಳಿಗ್ಗೆ ೧೦ ಗಂಟೆಗೆ ಜೆಎಸ್‌ಎಸ್ ಔಷಧ ವಿಜ್ಞಾನ ಮಹಾವಿದ್ಯಾಲುಂದಲ್ಲಿ ರಕ್ತದಾನ ಶಿಬಿರ, ೧೬ರಂದು ಬೆಳಿಗ್ಗೆ ೯ ಗಂಟೆಗೆ ಲಲಿತ ಮಹಲ್, ಬನ್ನಿಮಂಟಪ ಬಡಾವಣೆ, ಆಕಾಶವಾಣಿ ವೃತ್ತದಲ್ಲಿ ಉಚಿತ ಆರೋಗ್ಯ ತಪಾಸಣೆ ನಡೆಸಲಾಗುವುದು. ನ.೧೭ರಂದು ಜೆಎಸ್‌ಎಸ್ ಫಾರ್ಮಸಿ ಕಾಲೇಜು ಆವರಣದಲ್ಲಿ ೬೧ ಸಸಿಗಳನ್ನು ನೆಡಲಾಗುವುದು. ನ.೧೮ರಂದು ಅಂತರ ಕಾಲೇಜು ಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ. ನ.೧೯ರಂದು ಕಾಲೇಜು ಸಭಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಎನ್. ಮಂಜುನಾಥ್, ಡಾ.ಆರ್.ಎಸ್.ಚಂದನ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

8 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

10 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago