ಚಾಮರಾಜನಗರ: ಸಾರಥ್ಯ ಸಂಘಟನೆಗಳ ಒಕ್ಕೂಟದಿಂದ ವಿಶಿಷ್ಟ ಲೈಂಗಿಕತೆ ಗುರುತಿಸುವಿಕೆಯ ಸಮುದಾಯಗಳ ೧೧ನೇ ವರ್ಷದ ರಾಜ್ಯ ಮಟ್ಟದ ಸಮಾವೇಶವನ್ನು ಡಿ.೨೧ ಮತ್ತು ೨೨ ರಂದು ನಗರದ ಡಾ.ರಾಜಕುಮಾರ್ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಆತ್ಮಗೌರವ ಮತ್ತು ಘನತೆಯ ಬದುಕು ನಮ್ಮ ಹಕ್ಕು ಎಂಬ ಘೋಷಣೆಯೊಂದಿಗೆ ಈ ಸಮಾವೇಶವನ್ನು ಸಾರಥ್ಯ, ಸಮತಾ ಸೊಸೈಟಿ ಮತ್ತು ಪಯಣ ಸಂಸ್ಥೆಗಳು ಜೊತೆಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ತ್ರಿವಿಕ್ರಮ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಳಗ್ಗೆ ೧೧.೩೦ ಗಂಟೆಗೆ ಸಮಾವೇಶವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಎಸ್. ಹೊನ್ನಸ್ವಾಮಿ, ಎಂ.ಶ್ರೀಧರ್ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.
ಸಾರಥ್ಯ ಒಕ್ಕೂಟವು ಕಳೆದ ೧೧ ವರ್ಷದಿಂದ ಕರ್ನಾಟಕದ ೨೫ ಜಿಲ್ಲೆಗಳ ಸಮುದಾಯ ಸಂಘಟನೆಗಳ ಜೊತೆ ಕಾರ್ಯ ನಿರ್ವಹಿಸುತ್ತಿದೆ. ವಿಶಿಷ್ಟ ಲೈಂಗಿಕತೆಯ ಕೋಥಿ, ಡಿಡಿ, ಬೈಸೆಕ್ಸೂವಲ್ (ದ್ವಿಲಿಂಗ ಕಾಮಿ) ಸಮುದಾಯಗಳನ್ನು ಗುರುತಿಸುವಿಕೆಯ ಕೆಲಸ ಮಾಡುತ್ತಿದೆ ಎಂದರು.
ಈ ಸಮುದಾಯಗಳನ್ನು ಆರ್ಥಿಕ, ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರುವುದು. ಗೌರವದಿಂದ ಬದುಕಲು ಪೂರಕ ವಾತಾವರಣ ನಿರ್ಮಿಸುವುದು ಸಾರಥ್ಯ ಉದ್ದೇಶವಾಗಿದೆ. ಸಮಾವೇಶಕ್ಕೆ ೫ ಜಿಲ್ಲೆಗಳಿಂದ ಸುಮಾರು ೧೫೦ ವಿಶಿಷ್ಟ ಲೈಂಗಿಕತೆ ಸಮುದಾಯದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಮಾವೇಶದಲ್ಲಿ ಸಮುದಾಯಕ್ಕೆ ಸಂಬಂಧಿಸಿದಂತೆ ಒತ್ತಾಯದ ಮದುವೆ, ಗುರುತಿಸಿಕೊಳ್ಳುವಿಕೆ, ಸವಾಲುಗಳು ಮತ್ತು ಕಾನೂನುಗಳು ಈ ವಿಷಯಗಳ ಚರ್ಚೆ ಸಂವಾದ ಮತ್ತು ಸಾಂಸಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಡಿ.೨೨ ರಂದು ಚಾಮರಾಜೇಶ್ವರ ದೇವಸ್ಥಾನದಿಂದ ಡಾ.ರಾಜಕುಮಾರ್ ಕಲಾ ಮಂದಿರದವರೆಗೆ ಸಮುದಾಯದ ನಡೆ ಸಾರಥ್ಯ ಸಮತಾ ಕಡೆಗೆ” ಎಂಬ ಶೀರ್ಷಿಕೆಯಲ್ಲಿ ಕಾಲ್ನಡಿಗೆ ಜಾಥಾ ವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಗೋಷ್ಠಿಯಲ್ಲಿ ಒಕ್ಕೂಟದ ದೀಪಾ ಬುದ್ದೆ, ಚಾಂದಿನಿ, ಆದಿತ್ಯ, ಚಾಂದಿನಿ, ಮಹಮ್ಮದ್ ಸೈಪುಲ್ಲಾ ಹಾಜರಿದ್ದರು.
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…
ಬೆಂಗಳೂರು: ಶೃಂಗೇರಿಯಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯವರು ಕ್ರಿಮಿನಲ್ ಪಿತೂರಿ ಮಾಡಿ ವೋಟ್ ಚೋರಿ ಮಾಡಿದ್ದಾರೆ ಎಂದು…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ.…
ಬೀಜಿಂಗ್: ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…
ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್ನಲ್ಲಿ ನಡೆದಿದೆ. ಮೈಸೂರು ಮೂಲದ…