ಜಿಲ್ಲೆಗಳು

ನಾಳೆಯಿಂದ ವಿಶಿಷ್ಟ ಲೈಂಗಿಕತೆ ಸಮುದಾಯಗಳ ಸಮಾವೇಶ

ಚಾಮರಾಜನಗರ: ಸಾರಥ್ಯ ಸಂಘಟನೆಗಳ ಒಕ್ಕೂಟದಿಂದ ವಿಶಿಷ್ಟ ಲೈಂಗಿಕತೆ ಗುರುತಿಸುವಿಕೆಯ ಸಮುದಾಯಗಳ ೧೧ನೇ ವರ್ಷದ ರಾಜ್ಯ ಮಟ್ಟದ ಸಮಾವೇಶವನ್ನು ಡಿ.೨೧ ಮತ್ತು ೨೨ ರಂದು ನಗರದ ಡಾ.ರಾಜಕುಮಾರ್ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಆತ್ಮಗೌರವ ಮತ್ತು ಘನತೆಯ ಬದುಕು ನಮ್ಮ ಹಕ್ಕು ಎಂಬ ಘೋಷಣೆಯೊಂದಿಗೆ ಈ ಸಮಾವೇಶವನ್ನು ಸಾರಥ್ಯ, ಸಮತಾ ಸೊಸೈಟಿ ಮತ್ತು ಪಯಣ ಸಂಸ್ಥೆಗಳು ಜೊತೆಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ತ್ರಿವಿಕ್ರಮ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಳಗ್ಗೆ ೧೧.೩೦ ಗಂಟೆಗೆ ಸಮಾವೇಶವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಎಸ್. ಹೊನ್ನಸ್ವಾಮಿ, ಎಂ.ಶ್ರೀಧರ್ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.
ಸಾರಥ್ಯ ಒಕ್ಕೂಟವು ಕಳೆದ ೧೧ ವರ್ಷದಿಂದ ಕರ್ನಾಟಕದ ೨೫ ಜಿಲ್ಲೆಗಳ ಸಮುದಾಯ ಸಂಘಟನೆಗಳ ಜೊತೆ ಕಾರ್ಯ ನಿರ್ವಹಿಸುತ್ತಿದೆ. ವಿಶಿಷ್ಟ ಲೈಂಗಿಕತೆಯ ಕೋಥಿ, ಡಿಡಿ, ಬೈಸೆಕ್ಸೂವಲ್ (ದ್ವಿಲಿಂಗ ಕಾಮಿ) ಸಮುದಾಯಗಳನ್ನು ಗುರುತಿಸುವಿಕೆಯ ಕೆಲಸ ಮಾಡುತ್ತಿದೆ ಎಂದರು.
ಈ ಸಮುದಾಯಗಳನ್ನು ಆರ್ಥಿಕ, ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರುವುದು. ಗೌರವದಿಂದ ಬದುಕಲು ಪೂರಕ ವಾತಾವರಣ ನಿರ್ಮಿಸುವುದು ಸಾರಥ್ಯ ಉದ್ದೇಶವಾಗಿದೆ. ಸಮಾವೇಶಕ್ಕೆ ೫ ಜಿಲ್ಲೆಗಳಿಂದ ಸುಮಾರು ೧೫೦ ವಿಶಿಷ್ಟ ಲೈಂಗಿಕತೆ ಸಮುದಾಯದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಮಾವೇಶದಲ್ಲಿ ಸಮುದಾಯಕ್ಕೆ ಸಂಬಂಧಿಸಿದಂತೆ ಒತ್ತಾಯದ ಮದುವೆ, ಗುರುತಿಸಿಕೊಳ್ಳುವಿಕೆ, ಸವಾಲುಗಳು ಮತ್ತು ಕಾನೂನುಗಳು ಈ ವಿಷಯಗಳ ಚರ್ಚೆ ಸಂವಾದ ಮತ್ತು ಸಾಂಸಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಡಿ.೨೨ ರಂದು ಚಾಮರಾಜೇಶ್ವರ ದೇವಸ್ಥಾನದಿಂದ ಡಾ.ರಾಜಕುಮಾರ್ ಕಲಾ ಮಂದಿರದವರೆಗೆ ಸಮುದಾಯದ ನಡೆ ಸಾರಥ್ಯ ಸಮತಾ ಕಡೆಗೆ” ಎಂಬ ಶೀರ್ಷಿಕೆಯಲ್ಲಿ ಕಾಲ್ನಡಿಗೆ ಜಾಥಾ ವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಗೋಷ್ಠಿಯಲ್ಲಿ ಒಕ್ಕೂಟದ ದೀಪಾ ಬುದ್ದೆ, ಚಾಂದಿನಿ, ಆದಿತ್ಯ, ಚಾಂದಿನಿ, ಮಹಮ್ಮದ್ ಸೈಪುಲ್ಲಾ ಹಾಜರಿದ್ದರು.

andolanait

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

2 hours ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

4 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

6 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

7 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

10 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

10 hours ago