ಜಿಲ್ಲೆಗಳು

ಮರದಿಂದ ಬಿದ್ದು ಪೌರಕಾರ್ಮಿಕ ಸಾವು

ಮಂಡ್ಯ: ಪತ್ನಿ ಮಕ್ಕಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಒಣಗಿ ನಿಂತಿದ್ದ ಮರ ಉರುಳಿ ಗುತ್ತಿಗೆ ಪೌರಕಾರ್ಮಿಕನೊರ್ವ ಮೃತಪಟ್ಟಿರುವ ದುರ್ಘಟನೆ ನಗರದ ತಾವರೆಗೆರೆಯಲ್ಲಿ ಸಂಭವಿಸಿದೆ.
ಮೃತ ಪೌರಕಾರ್ಮಿಕ ಉದಯಕುಮಾರ್ (೩೧) ಎಂದು ಗುರುತಿಸಲಾಗಿದೆ. ಮಂಡ್ಯ ನಗರಸಭೆಯ ನೇರಪಾವತಿ ಪೌರಕಾರ್ಮಿಕನಾಗಿದ್ದು, ಗುರುವಾರ ರಾತ್ರಿ ೯ ಗಂಟೆ ಸಮಯದಲ್ಲಿ ತನ್ನ ಹೆಂಡತಿ ಮಕ್ಕಳೊಂದಿಗೆ ನಗರದ ತಾವರೆಗೆರೆಯ ಚಲುವಯ್ಯ ಉದ್ಯಾನವನದ ಬಳಿ ಬೈಕ್‌ನಲ್ಲಿ ಸಾಗುವಾಗ ಒಣಗಿ ನಿಂತಿದ್ದ ಮರ ಉರುಳಿ ಸಾವನ್ನಪ್ಪಿದ್ದಾನೆ. ಜತೆಯಲ್ಲಿದ್ದ ಹೆಂಡತಿ ಮಕ್ಕಳು ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸದರಿ ಮರ ಒಣಗಿದ್ದು ಮರವನ್ನು ತೆರವುಗೊಳಿಸುವಂತೆ ಮಂಡ್ಯ ನಗರಸಭೆ ಅರಣ್ಯ ಇಲಾಖೆಗೆ ಪತ್ರವನ್ನು ಬರೆದಿದ್ದಾಗಿಯೂ ಅರಣ್ಯ ಇಲಾಖೆ ನಿರ್ಲಕ್ಷದಿಂದ ಈ ಪ್ರಕರಣ ನಡೆದಿದೆ ಎಂದು ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.

ಪರಿಹಾರಕ್ಕೆ ಆಗ್ರಹ:
ಮೃತ ಪೌರಕಾರ್ಮಿಕನ ಕುಟುಂಬಕ್ಕೆ ಕನಿಷ್ಟ ೨೦ ಲಕ್ಷ ರೂ.ಪರಿಹಾರ ನೀಡುವಂತೆ ಹಾಗೂ ಮೃತನ ಕುಟುಂಬಕ್ಕೆ ಅನುಕಂಪದ ನೌಕರಿ ನೀಡುವಂತೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧ್ಯಕ್ಷ ಮಂಜು, ಆಯುಕ್ತ ಮಂಜುನಾಥ್ ನಗರಸಭಾ ಸದಸ್ಯ ಶ್ರೀಧರ್ ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

andolanait

Recent Posts

ಬಳ್ಳಾರಿ ಫೈರಿಂಗ್‌ ಪ್ರಕರಣ ಸಿಬಿಐಗೆ ಕೊಡುವ ಅಗತ್ಯವಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಫೈರಿಂಗ್‌ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ…

13 mins ago

ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್‌ ವಿಲೀನ: ಡಿಸಿಎಂ ಡಿ.ಕೆ.ಶಿವಕುಮಾರ್‌ ಭವಿಷ್ಯ

ಬೆಂಗಳೂರು: ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್‌ ವಿಲೀನ ಆಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ…

47 mins ago

ಮದ್ದೂರು| ಪೊಲೀಸ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆ: ಸಹೋದ್ಯೋಗಿ ವಿರುದ್ಧ ದೂರು ದಾಖಲು

ಮದ್ದೂರು: ಮದ್ದೂರು ಪಟ್ಟಣದ ಪೊಲೀಸ್‌ ಠಾಣೆಯ ವಿಶ್ರಾಂತಿ ಗೃಹದಲ್ಲಿ ಕಾನ್‌ಸ್ಟೇಬಲ್‌ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ…

1 hour ago

ತಾಲ್ಲೂಕು ಕಚೇರಿಗೆ ಸಂಸದ ಯದುವೀರ್‌ ಒಡೆಯರ್‌ ದಿಢೀರ್‌ ಭೇಟಿ

ಮೈಸೂರು: ಮೈಸೂರು ತಾಲ್ಲೂಕು ಕಚೇರಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿದರು. ಮೈಸೂರಿನ ಮಿನಿ…

2 hours ago

ಕೋಗಿಲು ಬಡಾವಣೆ ಅಕ್ರಮ ಮನೆ ತೆರವು: 26 ಜನರಿಗೆ ಮನೆ ಕೊಡಲು ಅವಕಾಶ ಎಂದ ಸಚಿವ ಜಮೀರ್‌ ಅಹಮ್ಮದ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಿರುವ ವಸತಿ ಸಚಿವ…

2 hours ago

ಸರಗಳ್ಳತನಕ್ಕೆ ಯತ್ನ: ಸಿಕ್ಕಿಬಿದ್ದ ಇಬ್ಬರು ಪೊಲೀಸರ ವಶಕ್ಕೆ

ವರದಿ: ಮುದ್ದುರವಿ ಮದ್ದೂರು ಮದ್ದೂರು: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದು…

3 hours ago