ಜಿಲ್ಲೆಗಳು

ಮರದಿಂದ ಬಿದ್ದು ಪೌರಕಾರ್ಮಿಕ ಸಾವು

ಮಂಡ್ಯ: ಪತ್ನಿ ಮಕ್ಕಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಒಣಗಿ ನಿಂತಿದ್ದ ಮರ ಉರುಳಿ ಗುತ್ತಿಗೆ ಪೌರಕಾರ್ಮಿಕನೊರ್ವ ಮೃತಪಟ್ಟಿರುವ ದುರ್ಘಟನೆ ನಗರದ ತಾವರೆಗೆರೆಯಲ್ಲಿ ಸಂಭವಿಸಿದೆ.
ಮೃತ ಪೌರಕಾರ್ಮಿಕ ಉದಯಕುಮಾರ್ (೩೧) ಎಂದು ಗುರುತಿಸಲಾಗಿದೆ. ಮಂಡ್ಯ ನಗರಸಭೆಯ ನೇರಪಾವತಿ ಪೌರಕಾರ್ಮಿಕನಾಗಿದ್ದು, ಗುರುವಾರ ರಾತ್ರಿ ೯ ಗಂಟೆ ಸಮಯದಲ್ಲಿ ತನ್ನ ಹೆಂಡತಿ ಮಕ್ಕಳೊಂದಿಗೆ ನಗರದ ತಾವರೆಗೆರೆಯ ಚಲುವಯ್ಯ ಉದ್ಯಾನವನದ ಬಳಿ ಬೈಕ್‌ನಲ್ಲಿ ಸಾಗುವಾಗ ಒಣಗಿ ನಿಂತಿದ್ದ ಮರ ಉರುಳಿ ಸಾವನ್ನಪ್ಪಿದ್ದಾನೆ. ಜತೆಯಲ್ಲಿದ್ದ ಹೆಂಡತಿ ಮಕ್ಕಳು ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸದರಿ ಮರ ಒಣಗಿದ್ದು ಮರವನ್ನು ತೆರವುಗೊಳಿಸುವಂತೆ ಮಂಡ್ಯ ನಗರಸಭೆ ಅರಣ್ಯ ಇಲಾಖೆಗೆ ಪತ್ರವನ್ನು ಬರೆದಿದ್ದಾಗಿಯೂ ಅರಣ್ಯ ಇಲಾಖೆ ನಿರ್ಲಕ್ಷದಿಂದ ಈ ಪ್ರಕರಣ ನಡೆದಿದೆ ಎಂದು ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.

ಪರಿಹಾರಕ್ಕೆ ಆಗ್ರಹ:
ಮೃತ ಪೌರಕಾರ್ಮಿಕನ ಕುಟುಂಬಕ್ಕೆ ಕನಿಷ್ಟ ೨೦ ಲಕ್ಷ ರೂ.ಪರಿಹಾರ ನೀಡುವಂತೆ ಹಾಗೂ ಮೃತನ ಕುಟುಂಬಕ್ಕೆ ಅನುಕಂಪದ ನೌಕರಿ ನೀಡುವಂತೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧ್ಯಕ್ಷ ಮಂಜು, ಆಯುಕ್ತ ಮಂಜುನಾಥ್ ನಗರಸಭಾ ಸದಸ್ಯ ಶ್ರೀಧರ್ ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

andolanait

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

51 mins ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

60 mins ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

1 hour ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

1 hour ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

1 hour ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

1 hour ago