ಜಿಲ್ಲೆಗಳು

ಕಣ್ಣೇಗಾಲ ಗ್ರಾಮದ ಸೇತುವೆ ಮುಳುಗಡೆ

ಚಾಮರಾಜನಗರ : ಸುವರ್ಣಾವತಿ,ಚಿಕ್ಕಹೊಳೆ ಜಲಾಶಯಗಳು ಭರ್ತಿಯಾಗಿ ನದಿಗೆ ನೀರು ಹರಿದುಬಿಟ್ಟಿರುವ ಪರಿಣಾಮ ಕೆರೆಕಟ್ಟೆಗಳು ಭರ್ತಿಯಾಗಿದ್ದು,ಚಾಮರಾಜನಗರ ತಾಲ್ಲೂಕಿನ ಕಣ್ಣೇಗಾಲದ ರಸ್ತೆ ಮುಳುಗಡೆಯಾಗಿದೆ. ಕಣ್ಣೇಗಾಲದಿಂದ ಆಲೂರು ಗ್ರಾಮಕ್ಕೆ ತೆರಳುವ ಮಾರ್ಗದ ಸೇತುವೆ ಮಟ್ಟ ನೀರು ಹರಿಯುತ್ತಿದೆ.

ಜಲಾಶಯದಿಂದ ನೀರು ಹರಿದು ಬಿಟ್ಟಿರುವ ಕಾರಣ ರಾತ್ರಿ ವೇಳೆ ಸಂಪೂರ್ಣ ಮುಳುಗಡೆಯಾಗುವ ಕಾರಣ ಸಾರ್ವಜನಿಕರು ಸಂಚರಿಸದಂತೆ ಸೂಚನೆ ನೀಡಲಾಗಿದೆ.

ಗ್ರಾಮದ ತೋಟಗಳು, ಗದ್ದೆಗಳಿಗೆ ಹೋಗದೆ ಹಸು,ಕುರಿಗಳನ್ನು ಜಮೀನಿಗೆ ಮೇಯಿಸಲು ಕರೆದುಕೊಂಡು ಹೋಗದಂತೆ ನೀರಾವರಿ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಸೇತುವೆ ಮಟ್ಟ ನೀರು ಬಂದಿರುವುದರಿಂದ ಗ್ರಾಮಸ್ಥರು ಸೇತುವೆ ಬಳಿ ರಭಸದಿಂದ ನೀರು ಹರಿಯುತ್ತಿರುವುದನ್ನು ನೋಡಿ ಸಂಭ್ರಮಿಸುತ್ತಿದ್ದಾರೆ.ಗ್ರಾಮ ಪಂಚಾಯಿತಿ ಸದಸ್ಯ ಆರ್‌ ಮಾದೇಶ್‌ ಅವರ ಸಮ್ಮುಖದಲ್ಲಿ ಕಾರ್ಯದರ್ಶಿ ಶೇಖರ್‌ ರವರು ಮುನ್ನೆಚ್ಚರಿಕೆ  ಕ್ರಮಗಳನ್ನು ಧ್ವನಿವರ್ಧಕಗಳ ಮೂಲಕ ಪ್ರಕಟಿಸಲಾಯಿತು.

andolanait

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

1 hour ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

1 hour ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

1 hour ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

1 hour ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

1 hour ago