ಜಿಲ್ಲೆಗಳು

ಕಣ್ಣೇಗಾಲ ಗ್ರಾಮದ ಸೇತುವೆ ಮುಳುಗಡೆ

ಚಾಮರಾಜನಗರ : ಸುವರ್ಣಾವತಿ,ಚಿಕ್ಕಹೊಳೆ ಜಲಾಶಯಗಳು ಭರ್ತಿಯಾಗಿ ನದಿಗೆ ನೀರು ಹರಿದುಬಿಟ್ಟಿರುವ ಪರಿಣಾಮ ಕೆರೆಕಟ್ಟೆಗಳು ಭರ್ತಿಯಾಗಿದ್ದು,ಚಾಮರಾಜನಗರ ತಾಲ್ಲೂಕಿನ ಕಣ್ಣೇಗಾಲದ ರಸ್ತೆ ಮುಳುಗಡೆಯಾಗಿದೆ. ಕಣ್ಣೇಗಾಲದಿಂದ ಆಲೂರು ಗ್ರಾಮಕ್ಕೆ ತೆರಳುವ ಮಾರ್ಗದ ಸೇತುವೆ ಮಟ್ಟ ನೀರು ಹರಿಯುತ್ತಿದೆ.

ಜಲಾಶಯದಿಂದ ನೀರು ಹರಿದು ಬಿಟ್ಟಿರುವ ಕಾರಣ ರಾತ್ರಿ ವೇಳೆ ಸಂಪೂರ್ಣ ಮುಳುಗಡೆಯಾಗುವ ಕಾರಣ ಸಾರ್ವಜನಿಕರು ಸಂಚರಿಸದಂತೆ ಸೂಚನೆ ನೀಡಲಾಗಿದೆ.

ಗ್ರಾಮದ ತೋಟಗಳು, ಗದ್ದೆಗಳಿಗೆ ಹೋಗದೆ ಹಸು,ಕುರಿಗಳನ್ನು ಜಮೀನಿಗೆ ಮೇಯಿಸಲು ಕರೆದುಕೊಂಡು ಹೋಗದಂತೆ ನೀರಾವರಿ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಸೇತುವೆ ಮಟ್ಟ ನೀರು ಬಂದಿರುವುದರಿಂದ ಗ್ರಾಮಸ್ಥರು ಸೇತುವೆ ಬಳಿ ರಭಸದಿಂದ ನೀರು ಹರಿಯುತ್ತಿರುವುದನ್ನು ನೋಡಿ ಸಂಭ್ರಮಿಸುತ್ತಿದ್ದಾರೆ.ಗ್ರಾಮ ಪಂಚಾಯಿತಿ ಸದಸ್ಯ ಆರ್‌ ಮಾದೇಶ್‌ ಅವರ ಸಮ್ಮುಖದಲ್ಲಿ ಕಾರ್ಯದರ್ಶಿ ಶೇಖರ್‌ ರವರು ಮುನ್ನೆಚ್ಚರಿಕೆ  ಕ್ರಮಗಳನ್ನು ಧ್ವನಿವರ್ಧಕಗಳ ಮೂಲಕ ಪ್ರಕಟಿಸಲಾಯಿತು.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago